ಕನ್ನಡಪ್ರಭ ವಾರ್ತೆ ತರೀಕೆರೆ
ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.
ಸೋಮವಾರ ಸಾರ್ವಜನಿಕ ಆಸ್ಪತ್ರೆ ತಾಲೂಕು ಆರೋಗ್ಯಾಧಿಕಾರಿ ಸಭಾಂಗಣದಲ್ಲಿ ಡೆಂಘೀ ನಿಯಂತ್ರಣಕ್ಕೆ ಏರ್ಪಾಡಾಗಿದ್ದ ಅಂತರ ಇಲಾಖಾ ಸಮನ್ವಯ ಸಭೆಯಲ್ಲಿ ಮಾತನಾಡಿ, ತಾಲೂಕು ಆಡಳಿತ, ಕಂದಾಯ ಇಲಾಖೆ, ತಾಪಂ, ತಾಲೂಕು ಆರೋಗ್ಯ ಇಲಾಖೆ, ಪುರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಯೋಗದೊಂದಿಗೆ ಜು.16ರಂದು ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ಏಲ್ಲಾ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತು ತರೀಕೆರೆ ಮತ್ತು ಅಜ್ಜಂಪುರ ಪಟ್ಟಣದಲ್ಲಿ ಜು.19 ರಂದು ಲಾರ್ವಾ ಸಮೀಕ್ಷೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜಿ.ಚಂದ್ರಶೇಖರ್ ಡೆಂಘೀ ಜ್ವರದ ಬಗ್ಗೆ ಮಾಹಿತಿ ನೀಡಿ, ಡಂಘೀ ನಿಯಂತ್ರಣ ಕ್ರಮಗಳ ಕುರಿತು ಪಿಪಿಟಿ ಪ್ರಸೆಂಟೇಶನ್ ಮೂಲಕ ಮಾಹಿತಿ ನೀಡಿ, ತಾಲೂಕಿನಾದ್ಯಂತ ನೆಡೆಯುವ ಈ ಬೃಹತ್ ಲಾರ್ವಾ ಸಮೀಕ್ಷೆ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕೋರಿದರು.