ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ಬೃಹತ್ ಪ್ರತಿಭಟನೆ

KannadaprabhaNewsNetwork |  
Published : Aug 26, 2025, 01:04 AM IST
25ಎಚ್‌ಯುಬಿ37ಕುಂದಗೋಳ ಪಟ್ಟಣದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯತ್ರ ಮಾಡಿದರನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಪ್ರತಿಭಟನೆಯಲ್ಲಿ ಸಾವಿರಾರು ಭಕ್ತರು, ವಿವಿಧ ಮಠಾಧೀಶರು, ರೈತ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ, ಹೆಗ್ಗಡೆಯವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

ಕುಂದಗೋಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಸೋಮವಾರ ಪಟ್ಟಣದಲ್ಲಿ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ನೇತೃತ್ವದಲ್ಲಿ ಬೃಹತ್ ಜನಾಗ್ರಹ ಪ್ರತಿಭಟನೆ ನಡೆಯಿತು.

ಈ ಪ್ರತಿಭಟನೆಯಲ್ಲಿ ಸಾವಿರಾರು ಭಕ್ತರು, ವಿವಿಧ ಮಠಾಧೀಶರು, ರೈತ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ, ಹೆಗ್ಗಡೆಯವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜನಜಾಗೃತಿ ಗದಗ ಜಿಲ್ಲಾಧ್ಯಕ್ಷ ಹಾಗೂ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಶಿವಾನಂದ ಬೆಂತೂರ, ನಮ್ಮ ಹೋರಾಟ ಸರ್ಕಾರದ ವಿರುದ್ಧವಲ್ಲ, ಧರ್ಮಕ್ಕೆ ಮಸಿ ಬಳಿಯುತ್ತಿರುವ ದುಷ್ಟರ ವಿರುದ್ಧ. ಸರ್ಕಾರ ಇಬ್ಬರನ್ನು ಬಂಧಿಸಿರುವುದು ಕೇವಲ ಕಣ್ಣೊರೆಸುವ ತಂತ್ರ. ಇದರ ಹಿಂದಿರುವ ಪ್ರತಿಯೊಬ್ಬರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಬಳಿಕ ಕಲ್ಯಾಣಪುರದ ಬಸವಣ್ಣಜ್ಜನವರು, ಸಂಶಿ ವಿರಕ್ತಮಠದ ಚನ್ನಬಸವೇಶ್ವರ ದೇವರು ಮಾತನಾಡಿದರು. ಪ್ರತಿಭಟನೆಯ ಆರಂಭದಲ್ಲಿ, ಹುಬ್ಬಳ್ಳಿ- ಲಕ್ಷ್ಮೇಶ್ವರ ರಸ್ತೆಯ ಗಾಳಿ ಮಾರಿಯಮ್ಮ ದೇವಸ್ಥಾನದ ಬಳಿ ಸಮಾವೇಶಗೊಂಡ ಸಾವಿರಾರು ಭಕ್ತರು, ಡಾ. ವೀರೇಂದ್ರ ಹೆಗ್ಗಡೆಯವರಿಗೆ ಶಕ್ತಿ ನೀಡುವಂತೆ ಪ್ರಾರ್ಥಿಸಿ ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು. ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ವಿವಿಧ ಸಂಘ-ಸಂಸ್ಥೆಗಳು, ಹೋರಾಟಗಾರರು ಮತ್ತು ರೈತ ಸಂಘಟನೆಗಳ ಮುಖಂಡರೂ ಪ್ರತ್ಯೇಕವಾಗಿ ಮನವಿ ಸಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಜಿಲ್ಲಾ ನಿರ್ದೇಶಕ ಕೇಶವ್ ದೇವಂಗ, ಸಂಯೋಜಕರಾದ ಜಾಫರ್ ಸಾಬ್ ಅತ್ತಾರ್, ನಿಸಾರ್ ಅಹ್ಮದ್, ದೇವೇಂದ್ರಪ್ಪ ಕಾಗೆನವರ, ಅರವಿಂದ ಕಟಗಿ, ವಿಠ್ಠಲ್ ಚೌಹಾನ್, ಜಗದೀಶ್ ಉಪ್ಪಿನ, ರಮೇಶ್ ಕೊಪ್ಪದ, ಶ್ರೀಕಂಠಗೌಡ ಹಿರೇಗೌಡ್ರ, ಅಶೋಕ ಘೋರ್ಪಡೆ, ಕಲ್ಲಪ್ಪ ಹರಕುಣಿ, ಶಂಕರಗೌಡ ದೊಡ್ಡಮನಿ ಸೇರಿದಂತೆ ಹಲವರಿದ್ದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ