ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಈ ವೇಳೆ ಮಾತನಾಡಿದ ವಾಸುದೇವ ಮೇಟಿ, ದೇಶದ 108 ಕೋಟಿ ರೈತ ಏಳ್ಗೆಗೆ ಬೇಕಿರುವ ಯೋಜನೆ ರೂಪಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೇಟು ಹಾಕುತ್ತಿವೆ. ಇದರಿಂದಾಗಿ ಇಂದಿಗೂ ಅನ್ನದಾತ ಸಂಕಷ್ಟದ ಸ್ಥಿತಿಯಲ್ಲಿದ್ದಾನೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ರೈತರ ಸಮಸ್ಯೆ ಪರಿಹರಿಸಲು ಆಸಕ್ತಿ ತೋರುತ್ತಿಲ್ಲ. ಮಹದಾಯಿ ಯೋಜನೆ ಸಲುವಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. ಜನಪ್ರತಿನಿಧಿಗಳಿಗೆ ಚುನಾವಣೆಯ ವೇಳೆ ಮಾತ್ರ ಮಹದಾಯಿ ಯೋಜನೆ ನೆನಪಾಗುತ್ತಾಳೆ. ಈಗಲಾದರೂ ಎಚ್ಚೆತ್ತು ರೈತರ ಸಂಕಷ್ಟ ಪರಿಹರಿಸುವ ಕಾರ್ಯಕ್ಕೆ ಮುಂದಾಗಬೇಕಿದೆ ಎಂದು ಆಗ್ರಹಿಸಿದರು.ಹಕ್ಕೊತ್ತಾಯಗಳು:
ಈ ವೇಳೆ ಕುಂದಗೋಳದ ಬಸವಣ್ಣ ಶ್ರೀಗಳು, ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಎಸ್. ಬೆಳ್ಳಿಗಟ್ಟಿ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಎಸ್. ಕಂಠೆಪ್ಪಗೌಡ್ರ, ಚಂದ್ರಪ್ಪ ಕಟಗಿ, ಶಿವಾನಂದ ಮಾಯಾಕಾರ, ಮಂಜುನಾಥ ಕಾಲವಾಡ, ಚಂದ್ರಶೇಖರ, ವೈ.ಎನ್. ಪಾಟೀಲ, ಯಲ್ಲಪ್ಪ ಶಿಗ್ಗಾಂವಿ, ವಿ.ಎಸ್. ಕೆಂಚಪ್ಪನವರ, ಶಂಕರಗೌಡ್ರ ದೊಡ್ಡಮನಿ ಸೇರಿದಂತೆ ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಗುಲಬರ್ಗಾ ಸೇರಿದಂತೆ ಹಲವು ಜಿಲ್ಲೆಗಳಿಂದ ಸಾವಿರಾರು ರೈತರು ಪಾಲ್ಗೊಂಡಿದ್ದರು.
ಬೃಹತ್ ಪ್ರತಿಭಟನಾ ಮೆರವಣಿಗೆ:ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರರ ಪುತ್ಥಳಿಗೆ ಮೂಲಾರ್ಪಣೆ ಮಾಡುವ ಮೂಲಕ ಆರಂಭವಾದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯು ಲ್ಯಾಮಿಂಗ್ಟನ್ ರಸ್ತೆಯ ಮೂಲಕ ರಾಣಿ ಚೆನ್ನಮ್ಮ ವೃತ್ತದ ವರೆಗೆ ಆಗಮಿಸಿ ಅಲ್ಲಿ 15 ನಿಮಿಷಕ್ಕೂ ಹೆಚ್ಚುಕಾಲ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.