ಹುಬ್ಬಳ್ಳಿ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ರಮೇಶ ಕತ್ತಿ ಬೆಳಗಾವಿಯ ಬಿ.ಕೆ. ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿಯೇ ಅವಾಚ್ಯವಾಗಿ ಸಮುದಾಯದ ಹೆಸರನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾರೆ. ಇದರಿಂದ ಸಮುದಾಯದ ಜನರಿಗೆ ಅವಮಾನ, ಆಘಾತವಾಗಿದೆ. ಈ ಬಗ್ಗೆ ಧಾರವಾಡದ ಉಪನಗರ ಠಾಣೆಯಲ್ಲಿ ಜಾತಿನಿಂದನೆ ದೂರು ದಾಖಲಿಸಲಾಗಿದೆ. ಆದರೂ ಈ ವರೆಗೆ ರಮೇಶ ಕತ್ತಿ ವಿರುದ್ಧ ಯಾವುದೇ ಕ್ರಮವಾಗಿಲ್ಲ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಬೆಳಗಾವಿಯ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಧಾರವಾಡದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಳ್ಳಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಂ. ಅರವಿಂದ, ಬಸವರಾಜ ಕುರಭೇಟ್, ಮಂಜುನಾಥ ಹುಡೇದ, ಶಿವಕುಮಾರ ಕಸಳ್ಳಿ, ಲಕ್ಷ್ಮಣ ಕಡಪ್ಪನವರ, ಅಶೋಕ ವಾಲ್ಮೀಕಿ ಸೇರಿದಂತೆ ಹಲವರಿದ್ದರು.