ಕನ್ನಡಪ್ರಭ ವಾರ್ತೆ ಚಾಮರಾಜನಗರ
ರೈತರಿಗೆ ವಿದ್ಯುತ್ ಪರಿಕರಣಗಳನ್ನು ಅಕ್ರಮ-ಸಕ್ರಮ ಅಡಿಯಲ್ಲಿ ಈ ಹಿಂದೆ ನೀಡಿದ್ದಂತೆಯೇ ನೀಡಬೇಕು, ವಿದ್ಯುತ್ ಸಂಪರ್ಕಕ್ಕೆ ರೈತರ ಆಧಾರ್ ಜೋಡಣೆ ಮಾಡುವುದನ್ನು ನಿಲ್ಲಿಸಬೇಕು. ರೈತರ ಜಮೀನಿನಲ್ಲಿ ೩-೪ ಬೋರ್ವೆಲ್ಗಳು ಇದ್ದು, ಆಧಾರ್ ಕಾರ್ಡ್ ಜೋಡಣೆ ಮಾಡುವುದರಿಂದ ರೈತರ ಬದುಕು ದುಸ್ತರವಾಗುತ್ತದೆ. ಸರ್ಕಾರದಿಂದ ಬರುವ ಸೌಲಭ್ಯಗಳು ನಿಲ್ಲುತ್ತವೆ ಎಂದರು.ಸರ್ಕಾರದ ಶೀಘ್ರ ಯೋಜನೆ ಅಡಿಯಲ್ಲಿ ಟಿ.ಸಿ.ಗಳನ್ನು ಮಾತ್ರ ನೀಡಲಿದ್ದು, ಉಳಿದ ಕಂಬ ಮತ್ತು ವೈರ್ಗಳನ್ನು ರೈತರು ಸ್ವಂತ ಖರ್ಚಿನಿಂದ ಮಾಡಿಸಲು ಸಾಧ್ಯವೇ ಇಲ್ಲ. ಸರ್ಕಾರವೇ ಉಚಿತವಾಗಿ ನೀಡಬೇಕು. ಸೋಲಾರ್ ಪಂಪ್ ಸೆಟ್ಗಳ ಮುಖಾಂತರ ೫೦೦ ಆಡಿ ಇಂದ ೧೨೦೦ ಅಡಿ ಇರುವ ಬೋರ್ವೆಲ್ ಗಳಲ್ಲಿ ನೀರನ್ನು ಮೇಲೆ ಎತ್ತಲು ಸಾಧ್ಯವೇ ಎಂದರು. ಜಮೀನಿನಲ್ಲಿ ವಾಸಿಸುತ್ತಿರುವ ರೈತರಿಗೆ ಸಂಜೆ ೬.೦೦ ಗಂಟೆಯಿಂದ ಬೆಳಿಗ್ಗೆ ೬.೦೦ ಗಂಟೆಯವರೆಗೆ ಕೆಲವು ಭಾಗದ ರೈತರಿಗೆ ವಿದ್ಯುತ್ ನೀಡುತ್ತಿದ್ದು, ಇನ್ನು ಕೆಲವು ಭಾಗದ ರೈತರ ವಿದ್ಯುತ್ಯನ್ನು ನೀಡುತ್ತಿಲ್ಲ. ಆದ್ದರಿಂದ ಎಲ್ಲಾ ಭಾಗದ ರೈತರಿಗೂ ಸಮರ್ಪಕ ವಿದ್ಯುತ್ ನೀಡಬೇಕು.
ಬೆಸ್ಕಾಂನವರು ೧೧ ಕೆ.ವಿ ಮತ್ತು ಎಲ್.ಟಿ. ಲೈನ್ಗಳಲ್ಲಿ ಬೆಳೆದಿರುವ ಗಿಡ ಮರಗಳು ಸುಮಾರು ೧೫ ವರ್ಷಗಳಿಂದ ಬೆಳೆದಿದ್ದು, ವಿದ್ಯುತ್ ತಾಗಿ ಲೈನ್ ವೈರ್ ಸುಟ್ಟುಹೋಗುತ್ತವೆ, ಕೃಷಿ ಪಂಪ್ಸೆಟ್, ಟಿ.ಸಿ.ಮೋಟಾರ್, ಕೇಬಲ್ಗಳು ಸುಟ್ಟು ರೈತರಿಗೆ ಲಕ್ಷಾಂತರ ರು.ಬೆಳೆನಷ್ಟವಾಗುತ್ತಿದೆ ಎಂದರು. ಪ್ರತಿಭಟನೆಗೆ ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಮಟ್ಟದ ಎಲ್ಲಾ ಪದಾಧಿಕಾರಿಗಳು ಆಗಮಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾಡ್ರಹಳ್ಳಿ ಮಹದೇವಪ್ಪ, ಕುಂದಕೆರೆ ಸಂಪತ್, ಚಿಕ್ಕಣ್ಣ, ನಾಗರಾಜು ಇದ್ದರು.