
ವರದಿ ಮಾರಕವೆಂದು ತಿಳಿದರೂ ಜಾರಿ ಮುಂದಾಗಿರುವುದು ಖಂಡನೀಯ: ಶಾಸಕ ಟಿ.ಡಿ. ರಾಜೇಗೌಡಕನ್ನಡಪ್ರಭ ವಾರ್ತೆ ಕೊಪ್ಪ
ಈ ವೇಳೆ ಮಾತನಾಡಿ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಇದನ್ನು ಜಾರಿಗೊಳಿಸಲು ಬಿಡುವುದಿಲ್ಲ. ಈ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಭರವಸೆ ನೀಡಿದ್ದಾರೆ ಎಂದರು.ಕೇಂದ್ರ ಸರ್ಕಾರದ ಹಲವು ನೀತಿಗಳು ಜನರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ ಎಂದು ಆರೋಪಿಸಿದ ಅವರು, ಮಲೆನಾಡಿನ ಜನರ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಪಕ್ಷ ನಿರಂತರ ಹೋರಾಟ ನಡೆಸಲಿದೆ ಎಂದು ಹೇಳಿದರು.ಇದೇ ವೇಳೆ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಕೈಗೆತ್ತಿಕೊಂಡು ರಸ್ತೆಗಳ ಸಮಸ್ಯೆ ಸರಿಪಡಿಸಲಾಗುವುದು ಎಂದು ಶಾಸಕ ರಾಜೇಗೌಡ ತಿಳಿಸಿದರು.ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಡಿ.ಎಸ್. ವಿಶ್ವನಾಥ್ ಶೆಟ್ಟಿ, ಕಸ್ತೂರಿ ರಂಗನ್ ವರದಿ ಮಲೆನಾಡಿನ ನಿವಾಸಿಗಳ ಪಾಲಿಗೆ ಬಹುದೊಡ್ಡ ಶಾಪ. ವರದಿಯಿಂದ ಮಲೆನಾಡಿನ ಜನರು ಎದುರಿಸಬಹುದಾದ ಸಮಸ್ಯೆ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಬೇಕಿದೆ ಎಂದು ಹೇಳಿದರು.ಡಾ. ಅಂಶುಮಂತ್ ಅವರು ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಜನರು ಹಾಗೂ ರೈತರ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಮಾತನಾಡಿದರು.
ರಾಜ್ಯ ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ, “ಕಸ್ತೂರಿ ರಂಗನ್ ವರದಿ ಕಾಂಗ್ರೆಸ್ ಸರ್ಕಾರದ ಕೂಸು” ಎಂದು ಬಿಜೆಪಿ ಮುಖಂಡರು ತಿಳುವಳಿಕೆಯಿಲ್ಲದೆ ಹೇಳಿಕೆ ನೀಡುವ ಮೂಲಕ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಬಿಜೆಪಿ ಸಂಸದರು ಕೇಂದ್ರ ಸರ್ಕಾರ ದೊಂದಿಗೆ ಮಾತನಾಡಿ ವರದಿಯಿಂದ ಮಲೆನಾಡಿನ ಜನರಿಗೆ ಆಗಬಹುದಾದ ತೊಂದರೆಗಳನ್ನು ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಕೊಪ್ಪ ಪುರಭವನದಿಂದ ಆರಂಭಗೊಂಡು ಬಸ್ ನಿಲ್ದಾಣದವರೆಗೆ ಸಾಗಿತು.