29ಕ್ಕೆ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಬೃಹತ್ ಪ್ರತಿಭಟನೆ

KannadaprabhaNewsNetwork |  
Published : Jan 25, 2025, 01:00 AM IST
ಗುಬ್ಬಿಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು. | Kannada Prabha

ಸಾರಾಂಶ

ಗುಬ್ಬಿ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಪ್ಪಿಸಲು ಒತ್ತಾಯಿಸಿ ಜ. 29ರಂದು ಬೆಂಗಳೂರಿನ ರಿಸರ್ವ್ ಬ್ಯಾಂಕ್ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಗುಬ್ಬಿ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಪ್ಪಿಸಲು ಒತ್ತಾಯಿಸಿ ಜ. 29ರಂದು ಬೆಂಗಳೂರಿನ ರಿಸರ್ವ್ ಬ್ಯಾಂಕ್ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಕಳೆದ 3 ವರ್ಷಗಳಿಂದ ಸಾಲದ ಮೊತ್ತ ಕಡಿತ ಮಾಡುತ್ತಾ ಬಂದಿದೆ. ಸಹಕಾರಿ ಸಂಘದ ಮೂಲಕ ಕೊಡುವ ಸಾಲ ಸೌಲಭ್ಯ ಸಿಗದೆ ರೈತರು ವಾಣಿಜ್ಯ ಬ್ಯಾಂಕ್ ಮುಂದೆ ಹೆಚ್ಚಿನ ಬಡ್ಡಿಗೆ ಸರದಿಯಲ್ಲಿ ಕಾದು ಕುಳಿತ್ತಿದ್ದಾರೆ. ಇಂತಹ ದುಸ್ಥಿತಿಗೆ ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ನೇರ ಕಾರಣ ಎಂದು ಆರೋಪಿಸಿದರು.ಶೂನ್ಯ ಬಡ್ಡಿ ಸಾಲ ನೀಡುವ ನಬಾರ್ಡ್ ಬ್ಯಾಂಕ್ ರೈತರಿಗೆ ಅನುಕೂಲವಾಗಿತ್ತು. ಅನುದಾನ ಕಡಿತದಿಂದ ವಾಣಿಜ್ಯ ಬ್ಯಾಂಕ್ ಜೊತೆಗೆ ಮೈಕ್ರೋ ಫೈನಾನ್ಸ್ ಬಳಿ ಸಾಲ ಪಡೆದ ರೈತ ಕುಟುಂಬ ಬೀದಿಗೆ ಬಂದಿದೆ. ಮೈಸೂರು ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಾಲದ ಶೂಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೇ.20 ರಿಂದ 25 ರವರೆಗೆ ಬಡ್ಡಿ ವಿಧಿಸುವ ಮೈಕ್ರೋ ಫೈನಾನ್ಸ್ ಗೊಂಡಾ ವರ್ತನೆಯಲ್ಲಿ ಸಾಲ ವಸೂಲಿ ಮಾಡುತ್ತಿದ್ದಾರೆ. ಈ ಸಮಯದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಬೇಕು ಎಂದರು.ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ನಬಾರ್ಡ್, ರೈತರ, ಸಹಕಾರಿ ಸಂಘದ ಉಳಿವು ಎಂಬ ಅಂಶ ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಕಳೆದ ವರ್ಷ ನಬಾರ್ಡ್ ರಾಜ್ಯಕ್ಕೆ 5600 ಕೋಟಿ ರು. ನೀಡಿತ್ತು. ಈ ಬಾರಿ 2340 ಕೋಟಿ ನೀಡಿದೆ. ಇದರಿಂದ ಶೂನ್ಯ ಬಡ್ಡಿಯ 5 ಲಕ್ಷ ಸಾಲಕ್ಕೆ ಕುತ್ತು ಬಂದಿದೆ. ಇದರಿಂದ ರಾಜ್ಯದ 30 ಲಕ್ಷ ರೈತರಿಗೆ ಅನ್ಯಾಯವಾಗಲಿದೆ ಎಂದರು.ರೈತ ಸಂಘದ ಯುವ ಘಕಟದ ಶಿವಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಸಿ.ಟಿ.ಕುಮಾರ್, ಸತ್ತಿಗಪ್ಪ, ಕುಮಾರಸ್ವಾಮಿ, ಯತೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!