ಬರ ಪರಿಹಾರಕ್ಕೆ ಬೃಹತ್ ಪಾದಯಾತ್ರೆ: ಹೊನ್ನೂರು ಪ್ರಕಾಶ್

KannadaprabhaNewsNetwork |  
Published : Jan 12, 2024, 01:45 AM IST
ಬರ ಪರಿಹಾರ ಸೇರಿದಂತೆ ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಬೃಹತ್ ಪಾದಯಾತ್ರೆ-ಹೊನ್ನೂರು ಪ್ರಕಾಶ್ | Kannada Prabha

ಸಾರಾಂಶ

ಮಹದೇಶ್ವರ ಬೆಟ್ಟದಿಂದ ಚಾಮರಾಜನಗರ ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣದವರೆಗೆ ಬೃಹತ್ ಪಾದಯಾತ್ರೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯ ರೈತರ ಸಮಸ್ಯೆಗಳು, ಬರ ಪರಿಹಾರ, ಹಾಡಿ ಜನರಿಗೆ ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರ ಜನಪ್ರತಿನಿಧಿಗಳ ಗಮನಕ್ಕೆ ತರಲು ಜ. ೨೩ರಂದು ಮಹದೇಶ್ವರ ಬೆಟ್ಟದಿಂದ ಚಾಮರಾಜನಗರ ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಾಮೂಹಿಕ ರೈತ ಸಂಘದ ನಾಯಕ ಹೊನ್ನೂರು ಪ್ರಕಾಶ್ ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ನಾವು ಹೋರಾಟ ಮಾಡಿದರೆ ಸಭೆ ಮಾಡಿ ಏನೇನೋ ಭರವಸೆ ಕೊಡುತ್ತಾರೆ ವಿನಃ ಒಂದು ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಈ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.

ಜ. ೨೪ರ ಮಂಗಳವಾರ ಬೆಳಗ್ಗೆ ೮ ಗಂಟೆಗೆ ಮಲೆಮಹದೇಶ್ವರ ಬೆಟ್ಟದ ದೇವಸ್ಥಾನದ ಮುಂಭಾಗದಿಂದ ಹೊರಡಲಿರುವ ನಾಲ್ಕು ದಿನಗಳ ಈ ಪಾದಯಾತ್ರೆಗೆ ಸಾಲೂರು ಬೃಹನ್ಮಠದ ಪೂಜ್ಯ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು, ರೈತ ಸಂಘದ ಪ್ರಮುಖರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ, ಸಹಜ ಕೃಷಿ ವಿಜ್ಞಾನಿ ಡಾ. ಮಂಜುನಾಥ ಎಚ್., ಇನ್ನಿತರ ರೈತ ಮುಖಂಡರು ಚಾಲನೆ ನೀಡಲಿದ್ದಾರೆ ಎಂದರು.

ಜ. ೨೬ರಂದು ಬೆಳಗ್ಗೆ ೮ ಗಂಟೆಗೆ ಚಾಮರಾಜನಗರದ ನಡೆಯುವ ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಧ್ವಜಾಹೋರಣ ಸ್ಥಳಕ್ಕೆ ಬಂದು ಸೇರಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ನಮ್ಮ ಮನವಿಯನ್ನು ಸಲ್ಲಿಸಲಾಗುವುದು ಎಂದರು

ಪಾದಯಾತ್ರೆಯಲ್ಲಿ ಎಲ್ಲಾ ರೈತ ಸಂಘದ ಕಾರ್ಯಕರ್ತರು, ಪರಿಸರ ಪ್ರಿಯರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಯುವಕರು ಸೇರಿದಂತೆ ನೂರಾರು ಜನರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬೆಳ್ಳಶೆಟ್ಟಿ, ಚಂಗಡಿ ಕರಿಯಪ್ಪ, ನಟರಾಜು, ಮಣಿಕಂಠ, ಅಂಬಳೆ ಶಿವಕುಮಾರ್ ಇದ್ದರು.

ಹೋರಾಟಗಾರರ ಬೇಡಿಕೆಗಳು

ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ಸಮಸ್ಯೆ ಬಗೆಹರಿದಿಲ್ಲ, ಮೂಲತಳಿಗಳನ್ನು ಉಳಿಸಿಕೊಂಡು ಬೆಳೆಯುತ್ತಾರೆ. ಆದರೆ, ಹೆಚ್ಚಿನ ಬೆಲೆ ನೀಡಿ ಖರೀದಿಸಲು ಮುಂದಾಗುತ್ತಿಲ್ಲ. ವನ್ಯಜೀವಿ ಸಂಘರ್ಷ ತಪ್ಪಿಲ್ಲ, ಹಂದಿ ದಾಳಿಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರದಿಂದ ಬೆಳೆ ಹಾನಿಗೆ ಸರಿಯಾದ ರೀತಿ ಪರಿಹಾರ ಸಿಗುತ್ತಿಲ್ಲ. ಕಾರ್ಬನ್ ಕ್ರಿಡಿಟ್ ರೈತನಿಗೆ ಸಿಗಬೇಕು.

ಎಂಎಸ್ಪಿಗಿಂತ ಸಾವಯವ ಕೃಷಿ ಉತ್ಪನ್ನ ಗಳಿಗೆ ಹೆಚ್ಚುವರಿ ಶೇ.೩೦ರಷ್ಟು ಹೆಚ್ಚಿನ ದರ ನೀಡಿ ಖರೀದಿ ಮಾಡಬೇಕು.

ಜಿಲ್ಲೆಯಲ್ಲಿ ನಡೆಯುವ ಕಪ್ಪು ಮತ್ತು ಬಿಳಿಕಲ್ಲು ದಂದೆ ಅಕ್ರಮವಾಗಿ ನಡೆಯುತ್ತಿದ್ದು, ಕೆಲವು ಗಣಿ ಉದ್ಯಮಿಗಳ ಅನುಕೂಲಕ್ಕಾಗಿ ಗೋಮಾಳಗಳನ್ನು ಸರ್ಕಾರ ನೀಡಿದೆ. ಮಿತಿ ಮೀರಿ ಕಲ್ಲು ಸಾಗಾಣೆ ಮಾಡುತ್ತಿರುವುದರಿಂ ರಸ್ತೆಗಳೆಲ್ಲಾ ಹಾಳಾಗುತ್ತಿವೆ ಇದರ ಕ್ರಮಕೈಗೊಳ್ಳಬೇಕು,

ಎನ್‌ಆರ್‌ಇಜಿಯನ್ನು ಕೃಷಿಗೆ ಅಳವಡಿಸಬೇಕು. ಇದರಿಂದ ರೈತರಿಗೆ ಕೂಲಿ ಹಣ ಸಿಗುತ್ತದೆ. ಹನೂರು ಮತ್ತು ಗುಂಡ್ಲುಪೇಟೆ ಭಾಗದಲ್ಲಿ ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಬಸ್ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳು ಶಾಲೆಗೆ ನಿಗದಿತ ವೇಳೆಗೆ ಶಾಲೆಗೆ ಹೋಗಲು ಆಗುತ್ತಿಲ್ಲ ಇದರ ಬಗ್ಗೆ ಗಮನಹರಿಸಬೇಕು,

ಚಂಗಡಿ ಗ್ರಾಮ ಸ್ಥಳಾಂತರ ಮಾಡಲು ಅನುದಾನ ಬಿಡುಗಡೆಯಾಗಿಲ್ಲ, ಮಳೆಯಾಶ್ರಿತ ಕೃಷಿ ಪ್ರದೇಶಕ್ಕೆ ವಿಶೇಷ ಮಹತ್ವವನ್ನು ಕೊಟ್ಟು ಘೋಷಿತ ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಕೊಟ್ಟು ಫಸಲು ಸಂಗ್ರಹಣೆ ಮಾಡುವ ಕೆಲಸದ ನಿರ್ವಹಣೆ ಮಾಡಬೇಕು. ಬರದಿಂದ ಬಾಧಿತರಾಗಿರುವ ರೈತರಿಗೆ ತುರ್ತಾಗಿ ಎಕರೆಗೆ ೨೫೦೦೦ ರು. ಅನುದಾನ ಬಿಡುಗಡೆ ಗೊಳಿಸಬೇಕು ಎಂದು ಆಗ್ರಹಿಸಿದರು,

ಮಲೆಮಹದೇಶ್ವರ ಬೆಟ್ಟದ ವ್ಯಾಪ್ತಿಯ ಹಾಡಿ/ಗ್ರಾಮಗಳಲ್ಲಿ ವಾಸವಿರುವ ಬುಡಕಟ್ಟು, ಬೇಡಗಂಪಣ ಮತ್ತು ಇತರ ಜನಾಂಗದ ಎಲ್ಲಾ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಖಾತರಿಪಡಿಸಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ