ಕನ್ನಡಪ್ರಭ ವಾರ್ತೆ ಮದ್ದೂರು
ನಗರಸಭೆ ಕಚೇರಿಯ ನವೀಕರಣ ಹಾಗೂ ಹೆಚ್ಚುವರಿ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ 2.20 ಕೋಟಿ ರು. ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಮಾತನಾಡಿ, ಮದ್ದೂರು ಪುರಸಭೆಯನ್ನು ಈಗಾಗಲೇ ರಾಜ್ಯ ಸರ್ಕಾರ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದೆ. ಹೀಗಾಗಿ ನಗರದ ಜೊತೆಗೆ 4 ಗ್ರಾಪಂಗಳು ಸಹ ಸೇರ್ಪಡೆಗೊಂಡಿರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಹೆಚ್ಚಿನ ಸ್ಥಳಾವಕಾಶದ ಅಗತ್ಯವಿದೆ. ಹೀಗಾಗಿ ಹಳೇ ಕಟ್ಟಡವನ್ನು ನವೀಕರಣ ಹಾಗೂ ಹೆಚ್ಚುವರಿ ಕಟ್ಟಡಕ್ಕೆ ಶಿಲಾನ್ಯಾಸ ಮಾಡಲಾಗಿದೆ ಎಂದು ತಿಳಿಸಿದರು.
ನಗರಸಭೆ ಕಚೇರಿ ಪಕ್ಕದ ತೋಟಗಾರಿಕೆ ಇಲಾಖೆ ಜಾಗದಲ್ಲಿ ನೂತನವಾಗಿ ನಗರಸಭೆ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ಪೌರಾಡಳಿತ ಸಚಿವರಿಗೆ 10 ಕೋಟಿ ರು. ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನು ಕೆಲ ದಿನಗಳಲ್ಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.ನಗರದ ಪೇಟೆ ಬೀದಿ ಅಗಲೀಕರಣಕ್ಕೂ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಲಿದೆ. ಅದಕ್ಕೂ ಮುನ್ನ ಹಳೇ ಬಸ್ ನಿಲ್ದಾಣದ ಬಳಿ ಹೂ, ಹಣ್ಣು ಹಾಗೂ ತರಕಾರಿ ಮಾರುಕಟ್ಟೆ ಸಂಕೀರ್ಣ, ಶಿವಪುರದಲ್ಲಿ ಮೀನು, ಕೋಳಿ ಹಾಗೂ ಮಾಂಸ ಮಾರುಕಟ್ಟೆ ಸಂಕೀರ್ಣ ಹಾಗೂ ನಗರದ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಅಧಿವೇಶನ ಮುಗಿದ ಬಳಿಕ ಸಚಿವರು, ಅಧಿಕಾರಿಗಳ ಸಭೆ ನಡೆಸಿ, ಅಗತ್ಯವಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಲಾಗುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಇದೇ ವೇಳೆ ನಗರಸಭೆ ಪೌರಾಯುಕ್ತೆ ರಾಧಿಕಾ, ಮಾಜಿ ಅಧ್ಯಕ್ಷೆ ಕೋಕಿಲ ಅರುಣ್, ಸದಸ್ಯರಾದ ಸಚ್ಚಿನ್, ಸರ್ವಮಂಗಳ, ವನಿತಾ, ಮುಖಂಡರಾದ ಕೆ.ಎಂ.ರವಿ, ಅರುಣ್ ಕುಮಾರ್, ಎಂ.ಡಿ.ಮಹಾಲಿಂಗಯ್ಯ, ಸತೀಶ್, ಸಿದ್ದರಾಜು, ಕುಮಾರ್, ವ್ಯವಸ್ಥಾಪಕ ಶ್ರೀಧರ್, ಮುಖಂಡರು ಹಾಗೂ ಸಿಬ್ಬಂದಿ ಇದ್ದರು.
ಡಿ.ಕೆ.ಶಿವಕುಮಾರ್ ಸದ್ಯದಲ್ಲೇ ಮುಖ್ಯಮಂತ್ರಿ: ಕೆ.ಎಂ.ಉದಯ್