ಮಟಪಾಡಿ: ತುಕ್ಕು ಹಿಡಿದ ಟ್ರಾನ್ಸ್ ಫಾರ್ಮರ್, ಅಪಾಯಕ್ಕೆ ಆಹ್ಪಾನ

KannadaprabhaNewsNetwork |  
Published : May 29, 2024, 01:01 AM IST
ಮಟಪಾಡಿ28 | Kannada Prabha

ಸಾರಾಂಶ

ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ಟ್ರಾನ್ಸ್ ಫಾರ್ಮರ್ ಕಳೆದ ಕೆಲವು ಸಮಯದಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಸುಮಾರು 30 ವರ್ಷಗಳಿಂದಲೂ ಮಟಪಾಡಿ ಶ್ರೀ ನಿಕೇತನ ಶಾಲೆಯ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಅಳವಡಿಸಲಾದ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ಬೀಳುವ ಹಂತದಲ್ಲಿವೆ.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ತುಕ್ಕು ಹಿಡಿದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬ, ಯಾವುದೇ ಸೂಕ್ತ ಭದ್ರತೆ ಇಲ್ಲದೆ ಸಾರ್ವಜನಿಕರಿಗೆ ಅಪಾಯವನ್ನು ಆಹ್ವಾನಿಸುತ್ತಿದೆ. ಅಂದಹಾಗೆ ಈ ದ್ರಶ್ಯ ಕಂಡುಬರುತ್ತಿರುವುದು ಬ್ರಹ್ಮಾವರ ಸಮೀಪದ ಮಟಪಾಡಿ ಬಳಿ.

ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ಟ್ರಾನ್ಸ್ ಫಾರ್ಮರ್ ಕಳೆದ ಕೆಲವು ಸಮಯದಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಸುಮಾರು 30 ವರ್ಷಗಳಿಂದಲೂ ಮಟಪಾಡಿ ಶ್ರೀ ನಿಕೇತನ ಶಾಲೆಯ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಅಳವಡಿಸಲಾದ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ಬೀಳುವ ಹಂತದಲ್ಲಿವೆ.

ಈ ಭಾಗದಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಚೆ ಕಚೇರಿ ಹಾಗೂ ಯಕ್ಷಗಾನ ಸಂಘದ ಕಚೇರಿ ಇದೆ. ಅಲ್ಲದೆ ಜನವಸತಿ ಪ್ರದೇಶ ಇದಾಗಿದ್ದು, ಪ್ರತಿನಿತ್ಯ ನೂರಾರು ಮಂದಿ ಸಾರ್ವಜನಿಕರು ಈ ಪ್ರದೇಶದಲ್ಲಿ ತಿರುಗಾಡುತ್ತಿದ್ದಾರೆ. ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಅಳವಡಿಸಲಾದ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ಬೀಳುವ ಪರಿಸ್ಥಿತಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ.

ಈ ಪರಿಸರದಲ್ಲಿ ನೂರಾರು ಮಂದಿ ಶಾಲಾ ವಿದ್ಯಾರ್ಥಿಗಳು, ಮಕ್ಕಳು ಸಂಚರಿಸುತ್ತಿದ್ದು, ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಯಾವುದೇ ರೀತಿಯ ತಡೆ ಬೇಲಿ ಇಲ್ಲದೆ ಅವಘಡಕ್ಕೆ ಆಹ್ವಾನ ನೀಡುತ್ತಿದೆ. ಅಷ್ಟೇ ಅಲ್ಲದೆ ಪವರ್ ಮ್ಯಾನ್‌ಗಳ ಜೀವಕ್ಕೂ ಅಪಾಯವಿದೆ.

ಈ ಟ್ರಾನ್ಸ್ ಫಾರ್ಮರ್‌ನಿಂದ ಯಾವುದೇ ಕ್ಷಣದಲ್ಲೂ ಅಪಾಯ ಸಂಭವಿಸುವ ಸಾಧ್ಯತೆ ಇದ್ದು, ತುಕ್ಕು ಹಿಡಿದಿರುವ ಕಂಬಗಳನ್ನು ಕೂಡಲೇ ಬದಲಿಸುವ ಅವಶ್ಯಕತೆ ಇದೆ. ಈ ಮಳೆಗಾಲದಲ್ಲಿ ತುಂಡಾಗಿ ಬಿದ್ದು ಜೀವಹಾನಿ ಸಂಭವಿಸುವ ಮೊದಲು ಅದನ್ನು ಬದಲಿಸುವಂತೆ ಸಾರ್ವಜನಿಕರು ಮೆಸ್ಕಾಂ ಇಲಾಖೆಗೆ ಮನವಿ ಮಾಡಿದ್ದು, ಸೂಕ್ತ ಕ್ರಮ ಕೈಗೊಂಡು ಮುಂಬರುವ ಅಪಾಯ ತಪ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ