ಗಣಿತ ಪ್ರತಿಭಾ ಪರೀಕ್ಷೆ: ಜಿಶ್ಮಿತಾ ಬಿ. ಜಿ. ರಾಷ್ಟ್ರಮಟ್ಟದಲ್ಲಿ ದ್ವಿತೀಯ

KannadaprabhaNewsNetwork |  
Published : Jan 05, 2026, 02:45 AM IST
ವಿಜ್ಞಾನ  | Kannada Prabha

ಸಾರಾಂಶ

ಶ್ರೀ ರಾಜರಾಜೇಶ್ವರಿ ಶಾಲೆಯ ಪ್ರೌಢಶಾಲಾ ವಿಭಾಗದಿಂದ ಒಟ್ಟು 50 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆ ಆಯೋಜಿಸಲಾಯಿತು. ಶ್ರೀ ರಾಜರಾಜೇಶ್ವರಿ ಶಾಲೆಯ ಪ್ರೌಢಶಾಲಾ ವಿಭಾಗದಿಂದ ಒಟ್ಟು 50 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಜಿಶ್ಮಿತಾ ಬಿ. ಜಿ. ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

8ನೇ ತರಗತಿ ವಿದ್ಯಾರ್ಥಿನಿ ಹಾಸಿನಿ ಸಿ.ವಿ. ರಾಷ್ಟ್ರ ಮಟ್ಟದಲ್ಲಿ ನಾಲ್ಕನೇ ಸ್ಥಾನ ಹಾಗೂ 9ನೇ ತರಗತಿ ವಿದ್ಯಾರ್ಥಿ ತ್ರಿಶೂಲ್ ತಿಮ್ಮಯ್ಯ ಬಿ.ಹೆಚ್. ರಾಷ್ಟ್ರಮಟ್ಟದಲ್ಲಿ ಐದನೇ ಸ್ಥಾನ, 8ನೇ ತರಗತಿ ವಿದ್ಯಾರ್ಥಿನಿ ದಕ್ಷ ಎಂ.ಆರ್. ಜಿಲ್ಲಾ ಮಟ್ಟದಲ್ಲಿ ನಾಲ್ಕನೇ ಸ್ಥಾನ, 10ನೇ ತರಗತಿ ವಿದ್ಯಾರ್ಥಿನಿ ನೀಮ ಎಂ.ಪಿ. ಜಿಲ್ಲಾ ಮಟ್ಟದಲ್ಲಿ 5ನೇ ಸ್ಥಾನ, 8ನೇ ತರಗತಿ ವಿದ್ಯಾರ್ಥಿನಿ ಖುಷಿ ಡಿ.ಸಿ ತಾಲೂಕುಮಟ್ಟದಲ್ಲಿ ನಾಲ್ಕನೇ ಸ್ಥಾನ ಹಾಗೂ ಪ್ರೇಕ್ಷ ಪೊನ್ನಮ್ಮ ಕೆ.ಆರ್ ತಾಲೂಕು ಮಟ್ಟದಲ್ಲಿ ಐದನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಶಾಲೆಯ ಗಣಿತ ಶಿಕ್ಷಕರಾಗಿರುವ ಅನಿಲ್ ಯು ಎಂ, ಬೃಂದಾಕವನ್ ಕುದುಪಜೆ ರಾಜೇಶ್ವರಿ ಡಿ.ಎಂ, ಶಾಲೆಯ ಮುಖ್ಯ ಶಿಕ್ಷಕರಾದ ಕವನ್ ಕುದುಪಜೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸ್ವರೂಪ್ ಕೆ ಬಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ