ಡಿಕೆಶಿ ಶೀಘ್ರ ಸಿಎಂ ಆಗಲಿ: ಅಭಿಮಾನಿಗಳ ಪ್ರಾರ್ಥನೆ

KannadaprabhaNewsNetwork |  
Published : May 16, 2025, 02:06 AM ISTUpdated : May 16, 2025, 09:33 AM IST
ಕೆ ಕೆ ಪಿ ಸುದ್ದಿ 01:  ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತಾಲ್ಲೂಕಿನ ಹಲವು ದೇವಾಲಯಗಳಲ್ಲಿ ಪೂಜೆ ಸಲ್ಲಿಕೆ.  | Kannada Prabha

ಸಾರಾಂಶ

 ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅತಿ ಉತ್ಸಾಹದಿಂದ ಆಚರಿಸಿದರು  

ಕನಕಪುರ: ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅತಿ ಉತ್ಸಾಹದಿಂದ ಆಚರಿಸಿದರು ಕಾಂಗ್ರೆಸ್ ಮುಖಂಡ ಚೀರಣಕುಪ್ಪೆ ಮಹೇಶ್ ಹಾಗೂ ಡಿಕೆಶಿ ಅಭಿಮಾನಿಗಳು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಸಿ, ಆದಷ್ಟು ಬೇಗ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.

ನಗರಸಭಾಧ್ಯಕ್ಷೆ ಹೇಮರಾಜು ಹಾಗೂ ನಗರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರು, ಅಭಿಮಾನಿಗಳು ಒಳಕೋಟಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಿವಕುಮಾರ್ ಆರೋಗ್ಯ, ಆಯಸ್ಸು ನೀಡಿ ರಾಜ್ಯದ ಜನಸೇವೆಯನ್ನು ಮಾಡುವ ಅವಕಾಶ ದೊರಕಲಿ ಎಂದು ಶುಭ ಹಾರೈಸಿ, ನಗರಸಭೆಯ ಮುಂದೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಸರಳವಾಗಿ ಆಚರಿಸಿ ಸಾರ್ವಜನಿಕರಿಗೆ ಅನ್ನದಾನ ಏರ್ಪಡಿಸಿದ್ದರು.

ನಗರಸಭಾ ಅಧ್ಯಕ್ಷೆ ಹೇಮರಾಜು ಮಾತನಾಡಿ, ನಮ್ಮ ನೆಚ್ಚಿನ ನಾಯಕರಾದ ಡಿ ಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ, ಅವರ 63ನೇ ಹುಟ್ಟು ಹಬ್ಬದ ದಿನದಂದು ನಾಯಕರು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್, ಮುಖಂಡ ರಾಜು, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜ್‌ ಸೇರಿದಂತೆ ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.  

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ