ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಿಲ್ಲೆಯ ಮಲ್ಲೇಶ್ವರ ನಗರದ ಕೆ.ಎಸ್.ಈಶ್ವರಪ್ಪ ಮನೆಯ ಬಳಿ ಕೆ.ಎಸ್.ಈಶ್ವರಪ್ಪ ಅವರ 78ನೇ ಜನ್ಮದಿನ ಪ್ರಯುಕ್ತ ಅವರ ಅಭಿಮಾನಿ ಬಳಗದ ಸಹಕಾರದೊಂದಿಗೆ ಶ್ರೀಗಂಧ ಸಂಸ್ಥೆ, ಶ್ರೀ ಮಾರಿಕಾಂಬ ಮೈಕ್ರೋ -ನಾನ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ರುದ್ರಪಠಣ, ಮಂಗಳನಿಧಿ ಸಮರ್ಪಣೆ, ಸಂಗೀತಾಭಿವಂದನೆ ಸಮೂಹ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಭಾಂಗಣ ಪ್ರವೇಶಿಸುವಾಗ ಫ್ಲೆಕ್ಸ್ನಲ್ಲಿ ಈಶ್ವರಪ್ಪನವರಿಗೆ 78ನೇ ಹುಟ್ಟುಹಬ್ಬ ಎಂದಿತ್ತು. ಎಲ್ಲೋ ಅದು ತಪ್ಪಾಗಿದೆ ಎಂದು ಅನಿಸಿತು. ಏಕೆಂದರೆ ಅವರು 28ರ ಯುವಕರಂತೆ ಸಮಾಜಕ್ಕಾಗಿ ಕ್ರೀಯಾಶೀಲರಾಗಿ ಬದುಕುತ್ತಿದ್ದಾರೆ. ಧರ್ಮದ, ಹಿಂದುತ್ವದ ಪ್ರಶ್ನೆ ಬಂದಾಗ ತನ್ನ ಹಿತವನ್ನು ಬಯಸದೆ ಸಮಾಜಕ್ಕಾಗಿ ಬದುಕುವುದೇ ನಿಜವಾದ ಬದುಕು ಎಂದು ತಿಳಿದು ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಕ ಕಾರ್ಯಕ್ರಮಗಳನ್ನು ಮಾಡುತ್ತಾ ಸಮಾಜದೊಂದಿಗೆ ಬೆರೆತು ಜೀವನ ನಡೆಸುತ್ತಿದ್ದಾರೆ. ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಭಗವಂತ ಅವರಿಗೆ ಆಯಸ್ಸು, ಆರೋಗ್ಯ, ಸುಖ-ಸಂತೋಷ ಎಲ್ಲವನ್ನು ಕರುಣಿಸಲಿ ಎಂದು ಆಶೀರ್ವದಿಸಿದರು.ಮಂಗಳನಿಧಿಯನ್ನು ಸ್ವೀಕರಿಸಿದ ಆರ್ಎಸ್ಎಸ್ ಮುಖಂಡ ಪಟ್ಟಾಭಿ ಮಾತನಾಡಿ, ನಮ್ಮ ಸಮಾಜದಲ್ಲಿ ವಿಶೇಷ ಪರಂಪರೆ ಇದ್ದು, ಯಾವುದೇ ಕಾರ್ಯವನ್ನು ಮಾಡುವಾಗ ಮೊದಲು ದೇವರು, ಗುರುಗಳನ್ನು ಹಾಗೂ ಬಂಧುಗಳನ್ನು ಕರೆದು ಸತ್ಕರಿಸಿ, ಕೃತಜ್ಞತಾ ಪೂರ್ವಕವಾಗಿ ಫಲ-ತಾಂಬೂಲ ಕೊಡುವ ಪದ್ಧತಿ ಇದೆ. ದೇವಋಣ, ಪಿತೃಋಣ, ಋಷಿಮುನಿಗಳ ಋಣ ತೀರಿಸಲಾಗುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಾತೆಯರಿಂದ ಭಕ್ತಿಗೀತೆ ಮತ್ತು ದೇಶಭಕ್ತಿಗೀತೆ, ಸಾಮೂಹಿಕ ಗಾಯನ ನಡೆಯಿತು.
ಸರ್ವರ ಆತ್ಮೀಯರಾಗಿ ಬೆಳೆದ ಈಶ್ವರಪ್ಪ
ಹುಟ್ಟಿದಾಗ ಉಸಿರು ಇರುತ್ತೆ. ದೇಹತ್ಯಾಗ ಮಾಡುವಾಗ ಬಿಟ್ಟುಹೋದ ದಾನ, ಧರ್ಮದ ಹೆಸರು ಇರುತ್ತದೆ. ಈಶ್ವರಪ್ಪನವರ ಸಾಧನೆ ಅವರಿಗೆ ಕೀರ್ತಿ, ಯಶಸ್ಸು ತಂದಿದೆ.
ಈಶ್ವರಪ್ಪನವರ ಜೀವನದ ಏಳು-ಬೀಳು ಏನೇ ಇರಲಿ, ಧರ್ಮ ಬಿಟ್ಟುಕೊಡಲಿಲ್ಲ. ರಾಜೀ ಮಾಡಿಕೊಂಡಿಲ್ಲ. ತಮ್ಮ ಸ್ಥಾನಮಾನ ಬಿಟ್ಟಿದ್ದಾರೆಯೇ ಹೊರತು, ತತ್ವವನ್ನು ಬಿಟ್ಟಿಲ್ಲ. ಹೋರಾಟದಿಂದಲೇ ರಾಜಕೀಯ ಅಸ್ವಿತ್ವ ಗಳಿಸಿಕೊಂಡವರು. ಸಮಾಜಕ್ಕೋಸ್ಕರ ಹಾಗೂ ಧರ್ಮಕ್ಕೋಸ್ಕರ ತಮ್ಮ ಜೀವನವನ್ನೇ ಮುಡಿಪಾಗಿಟ್ಟುಕೊಂಡವರು. ಅವರು ಶತಾಯುಷಿಗಳಾಗಿ ಬದುಕಿ-ಬಾಳಲಿ.