ಎಚ್‌ ಡಿ ಕುಮಾರಸ್ವಾಮಿಗೆ ಉತ್ತಮ ಆರೋಗ್ಯ ಲಭಿಸಲಿ: ಚಂದ್ರಶೇಖರ್

KannadaprabhaNewsNetwork |  
Published : Dec 17, 2024, 12:45 AM IST
ನರಸಿಂಹರಾಜಪುರ ನಗರದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಕೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 65 ನೇ ಹುಟ್ಟು ಹಬ್ಬದ ಪ್ರಯಕ್ತ ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿದರು. | Kannada Prabha

ಸಾರಾಂಶ

May HD Kumaraswamy get good health: Chandrasekhar

ನರಸಿಂಹರಾಜಪುರ: 65 ನೇ ಹುಟ್ಟುಹಬ್ಬ ಆಚರಿಸುತ್ತಿರುವ ಕೇಂದ್ರ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ದೇವರು ಆರೋಗ್ಯ ದಯಪಾಲಿಸಬೇಕು. ಅವರಿಂದ ನಾಡಿಗೆ ಇನ್ನಷ್ಟು ಸೇವೆ ಸಿಗಬೇಕು ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದರು.

ಅವರು ಜೆಡಿಎಸ್ ಕಚೇರಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ 65 ನೇ ಹುಟ್ಟು ಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಮಾತನಾಡಿದರು. ಕುಮಾರಸ್ವಾಮಿಗೆ ರಾಜಕೀಯದಲ್ಲಿ ಇನ್ನಷ್ಟು ಉತ್ತಮ ಸ್ಥಾನಗಳು ಲಭಿಸಲಿ ಎಂದು ತಾಲೂಕು ಜೆಡಿಎಸ್ ಪಕ್ಷವು ಪ್ರಾರ್ಥನೆ ಸಲ್ಲಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಬಿ.ಟಿ.ರವಿ, ಸುಬಾನ್, ಸತೀಶ್, ಈ.ಸಿ.ಶೇವಿಯಾರ್, ಉಪೇಂದ್ರ, ಹೂವಪ್ಪ, ಕೆ.ಟಿ.ಚಂದ್ರಶೇಖರ್, ವಿಜಯನ್, ತಂಗಚ್ಚನ್, ನವೀನ್, ಪಿಕಪ್ ಚಂದ್ರು, ಬಿಜೆಪಿ ಮುಖಂಡ ಪರ್ವೀಜ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರಣಿ ಸ್ಥಳಕ್ಕೆ ಎಡಿಸಿ ಭೇಟಿ: ಪಟ್ಟು ಬಿಡದ ರೈತರು
ಸಂಕ್ರಮಣದ ಸಂಭ್ರಮದ ತೆಪ್ಪೋತ್ಸವ