ಕನ್ನಡಪ್ರಭ ವಾರ್ತೆ ಹಾಸನ
ನಗರದ ಖಾಸಗಿ ಹೋಟೆಲ್ನಲ್ಲಿ ಕದಂಬ ಸೈನ್ಯ ಕನ್ನಡ ಸಂಘಟನೆ, ಹಾಸನ ಜಿಲ್ಲಾ ಘಟಕದಿಂದ ಜಿಲ್ಲೆಯ ಹಿರಿಯ ಸಾಹಿತಿಗಳು ಗೊರೂರು ಅನಂತರಾಜು ಅವರ ಇತ್ತೀಚಿನ ಸಾಹಿತ್ಯ ಕೃತಿಗಳ ವಿಮರ್ಶಾ ಗ್ರಂಥ "ಸಾಗುತಾ ಇದೆ ದೋಣಿ ನದಿಯ ನೀರನು ಸೀಳುತಾ " ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಪುಸ್ತಕ ಬಿಡುಗಡೆ ಕಾರ್ಯಕ್ರಮಗಳನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತಿಗಳನ್ನು ಗುರುತಿಸುವ ಮೂಲಕ ಮಾಡಬೇಕು. ಆ ಮೂಲಕ ಸಾಹಿತ್ಯ ವಲಯದ ಉಳಿವಿಗೆ ಕಾರ್ಯ ಪ್ರವೃತ್ತವಾಗಬೇಕು ಎಂದು ಹೇಳಿದರು.
ಇದೇ ವೇಳೆಯಲ್ಲಿ ಸುರ್ವೆ ಪತ್ರಿಕೆ ಸಂಪಾದಕರಾದ ರಮೇಶ್ ಸುರ್ವೆ ಅವರ ಸಾಹಿತ್ಯ ಸಾಂಸ್ಕೃತಿಕ ಸೇವೆಯನ್ನು ಸ್ಮರಿಸಿ ಸನ್ಮಾನಿಸಲಾಯಿತು. ಸನ್ಮಾನಿತರಾದ ರಮೇಶ್ ಸುರ್ವೆರವರು ಮಾತನಾಡಿ ಹಾಸನ ಜಿಲ್ಲೆ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಕೊಡುಗೆಯನ್ನು ನೀಡಿದೆ ಎಂಬುದನ್ನು ಸ್ಮರಿಸಿದರು. ಸಾಹಿತಿ ಗೊರೂರು ಅನಂತರಾಜು ಅವರು ಮಾತನಾಡಿ, ಲೋಕಾರ್ಪಣೆಗೊಂಡ ಕೃತಿಗೆ ರಮೇಶ್ ಸುರ್ವೆ ಅವರು ಬೆನ್ನುಡಿ ಬರೆದಿದ್ದು, ಉದಯರವಿ ರವರಿಂದ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ ಎಂದರು.ಕದಂಬ ಸೈನ್ಯ ಹಾಸನ ಜಿಲ್ಲಾ ಅಧ್ಯಕ್ಷರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಎ. ಎಚ್.ಗಣೇಶ್ ಅಂಕಪುರ ರವರು ಮಾತನಾಡಿ, ಸಾಹಿತ್ಯ ವಲಯದ ಬೆಳವಣಿಗೆಗೆ ಪೂರಕವಾಗಿ ಅಳಿಲು ಸೇವೆ ಮಾಡಲು ಸದಾ ಸಿದ್ಧರಿರಬೇಕು ಎಂದರು. ಸಿರಿಗನ್ನಡ ವೇದಿಕೆ ಹಾಸನ ಜಿಲ್ಲಾಧ್ಯಕ್ಷರು ಮತ್ತು ಸಿರಿ ಕನ್ನಡ ದಿನಪತ್ರಿಕೆ ಸಂಪಾದಕರಾದ ಆನಂದ ಪಟೇಲ್ ನೆಲ್ಲಿಗೆರೆ ರವರು ಮಾತನಾಡಿ, ಪುಸ್ತಕಗಳನ್ನು ತೆರೆಯುವ ಮೂಲಕ ಸಾಹಿತ್ಯ ಭಂಡಾರ ತೆರೆದುಕೊಳ್ಳುತ್ತದೆ ಮತ್ತು ಆ ಮೂಲಕ ಜ್ಞಾನ ಭಂಡಾರದ ಅರಿವು ನಮಗಾಗುತ್ತದೆ. ಪರಮಾತ್ಮನು ಶ್ರೇಷ್ಠನಿರಲು ನಾವೆಲ್ಲರೂ ಶೂನ್ಯರು ಎಂದು ಹೇಳಿದರು.