ಕನ್ನಡಪ್ರಭ ವಾರ್ತೆ ಕೆ.ಆರ್.ನಗರ
ಪಟ್ಟಣದ ಪುರಸಭಾ ಬಯಲುರಂಗಮಂದಿರ ಮೈದಾನದಲ್ಲಿ ನಡೆದ ಮಾಜಿ ಸಚಿವ ಸಾ.ರಾ.ಮಹೇಶ್ರ 60ನೇ ಹುಟ್ಟುಹಬ್ಬ ಆಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಶಾಸಕರಾಗುವ ಮೊದಲಿನಿಂದಲೂ ಜನಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ದೇವೋಭವ ಕಾರ್ಯಕ್ರಮದೊಂದಿಗೆ ಜನತೆಯ ಬಡ ಜನರಿಗೆ ಸಹಾಯಹಸ್ತ ಚಾಚುತ್ತಾ ಇಂದಿಗೂ ಪರಾಭವಗೊಂಡರೂ ಸೇವಾಕಾರ್ಯ ನಿಲ್ಲಿಸಿಲ್ಲ, ಇವರ ಜನಸೇವೆ ಶ್ಲಾಘನೀಯವಾಗಿದೆ ಎಂದರು.
ಹರಸಿ, ಹಾರೈಸಿ- ನಿಖಿಲ್:ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಜನಸೇವೆಯನ್ನು ತಮ್ಮ ಬದುಕಾಗಿಸಿಕೊಂಡಿರುವ ಸಾ.ರಾ. ಮಹೇಶ್ ಇಂದಿನ ಸಮಾಜದೇವೋಭವ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪಾಲ್ಗೊಂಡು ಹರಸಿ ಹಾರೈಸಿದ್ದು, ಮುಂದಿನ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಜನತೆಯೆ ಸೇವೆಯಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದರು.
ಮಾಜಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ನನ್ನ 50ನೇ ಹುಟ್ಟುಹಬ್ಬದ ಆಚರಣೆ ಸಂದರ್ಭ ಎಚ್.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಇನ್ನು ಮುಂದೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸುವುದಿಲ್ಲ ಎಂದು ನಿರ್ಧರಿಸಿದ್ದೆ. ಅದರಂತೆ ನಡೆದುಕೊಂಡಿದ್ದೆ, ಆದರೆ ನನಗೆ ಯಾವುದೆ ಅಧಿಕಾರವಿಲ್ಲದಿದ್ದರೂ ನನ್ನ 60ನೇ ಹುಟ್ಟುಹಬ್ಬದ ಪ್ರಯುಕ್ತ ನನ್ನ ಕ್ಷೇತ್ರದ ಜನರು ಅಭಿಮಾನದಿಂದ ಪ್ರೀತಿ ಆದರಗಳಿಂದ ಸಮಾಜದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ.
ಮಾಜಿ ಸಚಿವ ಪುಟ್ಟರಾಜು, ಶಾಸಕ ಎ.ಮಂಜು, ಮಾಜಿ ಶಾಸಕ ಮಹದೇವ್, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಮಾತನಾಡಿದರು. ಗಾವಡಗೆರೆ ಮಠದ ಶ್ರೀ ನಟರಾಜ ಸ್ವಾಮೀಜಿ ಆಶೀರ್ವಚನ ನೀಡಿದರು.
ಇದಕ್ಕೂ ಮುನ್ನ ಸಾ.ರಾ. ಮಹೇಶ್ ಅವರ ಪುತ್ರ ಡಾ.ಸಾ.ರಾ. ಧನುಷ್ ನೇತೃತ್ವದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ಚಿಕಿತ್ಸೆ ಪಡೆದರಲ್ಲದೆ, ನೂರಾರು ಮಂದಿ ರಕ್ತದಾನ ಮಾಡಿದರು.
ಹತ್ತು ಹಲವಾರು ಉತ್ತಮ ಕಾರ್ಯಕ್ರಮಗಳೊಂದಿಗೆ ಜನತೆಯೊಂದಿಗಿರುವ ಸಾ.ರಾ.ಮಹೇಶ್ ಜನಸೇವೆ ಶ್ಲಾಘನೀಯವಾಗಿದ್ದು, ಮುಂದೆಯೂ ನಾಡಿಗೆ ಒಬ್ಬ ಉತ್ತಮ ಜನಪ್ರತಿನಿಧಿಯನ್ನು ನೀಡಬೇಕಾದ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದರು.