ಕನ್ನಡಪ್ರಭ ವಾರ್ತೆ ಹೊಸಪೇಟೆ
ನಗರದ ಕೊಟ್ಟೂರುಸ್ವಾಮಿ ಸಂಸ್ಥಾನಮಠದಲ್ಲಿ ಎಂಟನೇ ವರ್ಷದ ಸರ್ವಧರ್ಮ ಸಮನ್ವಯ ರಥೋತ್ಸವ ಹಾಗೂ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳ ಮೂರನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಕೊನೆ ದಿನ ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಶ್ರೀಕೊಟ್ಟೂರು ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.ಸಮಾಜ ಸೇವಕಿ ರಾಣಿ ಸಂಯುಕ್ತ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಇದಕ್ಕೂ ಮುನ್ನ ವಳಬಳ್ಳಾರಿಯ ಸುವರ್ಣಗಿರಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಸ್ಚಾಮೀಜಿ ಹೇಮಕೂಟ ಮಹಾದ್ವಾರದ ಭೂಮಿ ಪೂಜೆ ನೆರವೇರಿಸಿದರು.
ಭಕ್ತಿಗೀತೆಗಳ ಸಿಡಿ ಬಿಡುಗಡೆ:
ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಲಿಂ. ಜ. ಡಾ. ಸಂಗನಬಸವ ಸ್ವಾಮೀಜಿಗಳ ಭಕ್ತಿ ಗೀತೆಗಳ ಸಿಡಿ ಬಿಡುಗಡೆಗೊಳಿಸಿದರು. ಸಿಡಿಯಲ್ಲಿ ರಂಗನಾಥ ಜಿ. ಅಂಬಿಗೇರ ಅವರ ಸಾಹಿತ್ಯ, ಸದಾಶಿವ ಪಾಟೀಲ, ಪಂಡಿತ್ ವೆಂಕಟೇಶ್ ಆಲ್ಕೋಡ್ ಅವರ ಸಂಗೀತ ಮತ್ತು ಗಾಯನ ಇದೆ11 ದಿನಗಳ ಬೇಸಿಗೆ ಶಿಬಿರ:
ಕೊಟ್ಟೂರು ಸ್ವಾಮಿ ಮಠದ ವತಿಯಿಂದ ಮುಂಬರುವ ಬೇಸಿಗೆ ಸಮಯದಲ್ಲಿ ಮಕ್ಕಳಿಗೆ ಸಂಸ್ಕಾರ ಪಾಠ ಹೇಳುವ ನಿಟ್ಟಿನಲ್ಲಿ 11 ದಿನಗಳ ಕಾಲ ಸಂಸ್ಕಾರ ಶಿಬಿರವನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ಆಯೋಜಿಸಲಾಗುತ್ತಿದೆ, ಆಸಕ್ತರು ತಮ್ಮ ಮಕ್ಕಳನ್ನು ಶಿಬಿರದಲ್ಲಿ ಸೇರಿಸಬಹುದು ಎಂದು ಕೊಟ್ಟೂರು ಶ್ರೀ ಬಸವಲಿಂಗ ಸ್ವಾಮೀಜಿ ತಿಳಿಸಿದರು.