ಕನ್ನಡಪ್ರಭ ವಾರ್ತೆ ತಾಳಿಕೋಟೆ
ಜಿಲ್ಲಾ ಪಂಚಾಯತ್ ವಿಜಯಪುರ, ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಮುದ್ದೇಬಿಹಾಳ, ರೈತ ಸಂಪರ್ಕ ಕೇಂದ್ರ ತಾಳಿಕೋಟೆ ಸಹಯೋಗದಲ್ಲಿ ೨೦೨೩-೨೪ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ತಾಳಿಕೋಟೆ ತಾಲೂಕಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕಾಗಿ ಬಂದ ಅರ್ಜಿಗಳನ್ನು ಮಂಗಳವಾರ ಲಾಟರಿ ಮೂಲಕ ಫಲಾನುಭಗಳನ್ನು ಆಯ್ಕೆಗೊಳಿಸುವ ಪ್ರಕ್ರಿಯೆ ನಂತರ ಮಾತನಾಡಿದ ಅವರು, ಎಲ್ಲ ರೈತರಿಗೆ ಒಮ್ಮಿಗೆ ಯೋಜನೆಗಳನ್ನು ಮುಟ್ಟಿಸಲು ಯಾವ ಸರ್ಕಾರದಿಂದಲೂ ಸಾಧ್ಯವಿಲ್ಲ. ದೇವರಿಂದಲೂ ಕೂಡಾ ಸಾಧ್ಯವಿಲ್ಲ. ಪ್ರತಿ ವರ್ಷ ಈ ಯೋಜನೆಗಳ ಲಾಭವನ್ನು ಪಡೆದುಕೊಂಡಂತಹ ರೈತರು ಮುಂದಿನ ವರ್ಷ ಅರ್ಜಿಗಳನ್ನು ಸಲ್ಲಿಸುವುದನ್ನು ನಿಲ್ಲಿಸಬೇಕು. ಇದರಿಂದ ಮತ್ತೊಬ್ಬ ರೈತರಿಗೆ ಈ ಯೋಜನೆಯ ಲಾಭ ಸಿಗಲು ಸಾಧ್ಯವಾಗುತ್ತದೆ ಎಂದರು.
ಸರ್ಕಾರವು ರೈತರನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿ ಮಾಡಲು ಯೋಜನೆಯನ್ನು ರೂಪಿಸಿರುತ್ತದೆ. ಕೆಲವು ಯೋಜನೆಗಳ ಮೂಲಕ ಸಬ್ಸಿಡಿ ಸಲಕರಣೆಗಳು, ಬೀಜ ಗೊಬ್ಬರಗಳು ಹಾಗೂ ನೈಸರ್ಗಿಕವಾಗಿ ತೊಂದರೆಯಾದಂತಹ ಸಂದರ್ಭದಲ್ಲಿ ಭೀಮಾಯೋಜನೆಯ ಮೂಲಕ ಸಹಾಯ ದನವನ್ನು ನೀಡುತ್ತದೆ. ಬೆಳೆದಂತಹ ಬೆಳೆಗೆ ಬೆಂಬಲ ಬೆಲೆಯನ್ನು ಕೊಡುವುದರ ಮೂಲಕ ದರ ನಿಗದಿ ಪಡಿಸಿ ಯೋಗ್ಯವಾದ ಬೆಲೆ ಸಿಗಲಿ ರೈತನ ಮೊಗದಲ್ಲಿ ಮಂದಹಾಸ ಮೂಡಲಿ ಎಂಬ ಯೋಚನೆಯೊಂದಿಗೆ ನೇರವಾಗಿ ರೈತರಿಂದ ಮಾಲುಗಳನ್ನು ಖರೀದಿಸುವಂತಹ ಕಾರ್ಯಕ್ಕೂ ಸಹ ಸರ್ಕಾರವು ಮುಂದಾಗುತ್ತ ಬಂದಿದೆ ಎಂದು ತಿಳಿಸಿದರು.ಕಾರ್ಯಕ್ರಮಕ್ಕೂ ಮುಂಚೆ ಎಲ್ಲ ಫಲಾನುಭವಿಗಳ ಹೆಸರು ಬರೆದಿರುವ ಚೀಟಿಯನ್ನು ಬಾಕ್ಸ್ನಲ್ಲಿ ಹಾಕಿ ಕ್ರಮಬದ್ದವಾಗಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಇದೇ ಸಮಯದಲ್ಲಿ ತಾಳಿಕೋಟೆ ರೈತ ಸಂಪರ್ಕ ಕೇಂದ್ರದ ವತಿಯಿಂದ ಶಾಸಕ ಸಿ.ಎಸ್.ನಾಡಗೌಡ ಹಾಗೂ ಅತಿಥಿ ಮಹೋದಯರನ್ನು ಸನ್ಮಾನಿಸಿ, ಗೌರವಿಸಲಾಯಿತು.
-ಸಿ.ಎಸ್.ನಾಡಗೌಡ (ಅಪ್ಪಾಜಿ), ಶಾಸಕರು.