ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಲಿ

KannadaprabhaNewsNetwork |  
Published : Nov 24, 2025, 01:30 AM IST

ಸಾರಾಂಶ

ಪ್ರಸ್ತುತ ಸಮಾಜದಲ್ಲಿನ ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗುವುದರ ಜೊತೆಗೆ ಬೆಳೆಸುವ ಮನೋಭಾವ ಬರಬೇಕೆಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಗೋವಿಂದರಾಯ ಎಂ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಪ್ರಸ್ತುತ ಸಮಾಜದಲ್ಲಿನ ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗುವುದರ ಜೊತೆಗೆ ಬೆಳೆಸುವ ಮನೋಭಾವ ಬರಬೇಕೆಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಗೋವಿಂದರಾಯ ಎಂ ತಿಳಿಸಿದರು.

ನಗರದ ಸತ್ಯಮಂಗಲದಲ್ಲಿನ ಜೈನ್ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ‍್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಕನ್ನಡ ನಾಡಿನ ಇತಿಹಾಸವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು, ಕನ್ನಡದ ಏಕೀಕರಣಕ್ಕೆ ಅನೇಕರು ತಮ್ಮದೇ ಕೊಡುಗೆ ನೀಡಿದ್ದಾರೆ, ದಿವಂಗತ ಮುಖ್ಯಮಂತ್ರಿ ದೇವರಾಜ ಅರಸು ಅವರಿಂದ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ಬಂತು. ಬದುಕನ್ನು ಕಟ್ಟಿಕೊಳ್ಳುವ ಸಂದರ್ಭದಲ್ಲಿ ಭಾಷೆಯನ್ನು ಮರೆಯಬಾರದು, ಕನ್ನಡವೆಂಬುದು ವಿವಿಧತೆಯಲ್ಲಿ ಏಕತೆಯನ್ನು ತೋರುವ ಭಾಷೆಯಾಗಿದೆ. ಈ ನಾಡಿನಲ್ಲಿ ಅನೇಕ ಸಾಧಕರನ್ನು ಕಾಣಬಹುದು ತಮ್ಮ ಒಡವೆಯನ್ನು ಅಡವಿಟ್ಟು ಕಾಲುವೆ, ಅಣೆಕಟ್ಟುಗಳನ್ನು ಕಟ್ಟಿಸಿದ ಮೈಸೂರಿನ ಅರಸರನ್ನು ನೆನೆದರು. ಕನ್ನಡ ಮಾತನಾಡಿದರೆ ದಂಡ ಹಾಕುವ ಪರಿ ಶೋಚನೀಯ, ಇಂಗ್ಲಿಷ್ ಬೇಕು ಆದರೆ ಕನ್ನಡ ನಾಶವಾಗದಿರಲಿ ಎಂಬ ಸಂದೇಶವನ್ನು ನೀಡಿದರು.

ನಯಲಾ ಕಾಲೇಜಿನ ಪ್ರಾಂಶುಪಾಲ ಇಕ್ಬಾಲ್ ಅಹಮದ್ ಮಾತನಾಡಿ ಕರ್ನಾಟಕದಲ್ಲಿ ಇಂತಹ ಸಂಸ್ಕೃತಿ, ಸಂಪತ್ತು ಮತ್ತು ಆದರಣೀಯ ಭಾಷೆಯನ್ನು ಪಡೆದಂತಹ ನಾವೇ ಧನ್ಯರು, ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸಿದಾಗ ಮಾತ್ರ ಸಮಾಜದಲ್ಲಿ ಉತ್ತಮ ಸ್ಥಾನವನ್ನು ಅಲಂಕರಿಸಲು ಸಾಧ್ಯ ಎಂದರು.

ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವರುಣ್ ಕುಮಾರ್.ಆರ್. ಮಾತನಾಡಿ ವಿದ್ಯಾರ್ಥಿಗಳು ಕನ್ನಡ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಮರೆಯದಿರಲಿ,ಈ ನೆಲೆಯ ಭಾಷಾಭಿಮಾನ ಹೆಚ್ಚಿಸಲು ಕಾರ‍್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ವಿದ್ಯಾರ್ಥಿಗಳಿಂದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ‍್ಯಕ್ರಮಗಳನ್ನು ಏರ್ಪಡಿಸಲಾಗಿತ್ತು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯೋಪಾಧ್ಯಾಯರಾದ ಶೈಲ, ಶೃತಿ,ರಾಘವೇಂದ್ರ ಉಪನ್ಯಾಸಕರುಗಳಾದ ಹರೀಶ್ ಕುಮಾರ್ ಟಿ ಜಿ, ಪ್ರಶಾಂತ್ ಲಿಂಗಮ್, ರಾಮಚಂದ್ರಪ್ಪ, ಹರೀಶ್, ಕುಮಾರಿ ಭವ್ಯ,ನಾಗಲಕ್ಷ್ಮಿ, ದೀಪ, ಹೇಮಲತಾ, ಸುಶೀಲ,ನಂದಿನಿ,ರಾಜಶೇಖರ್,ಶ್ವೇತ ಮೊದಲಾದವರು ಭಾಗವಹಿಸಿದ್ದರು.

PREV

Recommended Stories

ಮಕ್ಕಳಿಗೆ ಶಿಕ್ಷಣದಷ್ಟೇ ಸಂಸ್ಕಾರವೂ ಮುಖ್ಯ: ಕೆ.ಪಿ.ಬಾಬು
ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೆಕ್ಕೆ ಹೋರಾಟ ಶುರು