ಹೊಸಕೋಟೆ: ಎಂಟಿಬಿ ನಾಗರಾಜ್ ಅವರು ಎರಡು ಚುನಾವಣೆಯಲ್ಲಿ ಸೋಲನುಭವಿಸಿ ಸಾಕಷ್ಟು ನೋವನುಭವಿಸಿದ್ದಾರೆ. ಆದ್ದರಿಂದ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಎಂಟಿಬಿ ಕುಟುಂಬದಿAದ ಯಾರೇ ನಿಂತರೂ ಗೆಲುವಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ತಿಳಿಸಿದರು.
ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ನನ್ನ ಅಧಿಕಾರಾವಧಿಯಲ್ಲಿ ಜನರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಶಾಸಕನಾಗಿ, ಸಚಿವನಾಗಿ ಹೊಸಕೋಟೆ ಕ್ಷೇತ್ರದಲ್ಲಿ ಜನ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಋಣಿಯಾಗಿದ್ದೇನೆ, ಅಧಿಕಾರ ಇರಲಿ, ಇಲ್ಲದಿರಲಿ ನನ್ನ ಜನ ಸೇವೆ ನಿಂತಿಲ್ಲ ಎಂದರು.
ಬಿಜೆಪಿ ಟೌನ್ ಅಧ್ಯಕ್ಷ ಬಾಲಚಂದ್ರನ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೆ.ಎಂ.ಹಸೇನ್, ನಗರಸಭೆ ಉಪಾಧ್ಯಕ್ಷ ಸಿಪಿಎನ್ ನವೀನ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್, ಸದಸ್ಯರುಗಳಾದ ಅರುಣ್(ಹರಿ),, ನಿತಿನ್, ಗುಲ್ಜಾರ್, ರಾಮಾಂಜಿನಿ, ಜಿಪಂ ಮಾಜಿ ಸದಸ್ಯ ಸಿ.ನಾಗರಾಜ್, ಮುಖಂಡರಾದ ಹುಲ್ಲುರು ಕಿರಣ್, ಶೌರತ್, ಕೆಆರ್ಬಿ ಶಿವಾನಂದ್, ಸೇರಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.ಫೋಟೋ: 20 ಹೆಚ್ಎಸ್ಕೆ 5
ಹೊಸಕೋಟೆ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಎಂಟಿಬಿ ನಾಗರಾಜ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಂಸದ ಡಾ.ಕೆ.ಸುಧಾಕರ್ ಮಾತನಾಡಿದರು.