ಆದಿವಾಸಿ ಸಮುದಾಯ ಶೈಕ್ಷಣಿಕ ಪ್ರಗತಿ ಸಾಧಿಸಲಿ: ಶಾಂತಲಿಂಗ ಶ್ರೀಗಳು

KannadaprabhaNewsNetwork |  
Published : Aug 31, 2026, 02:30 AM IST
ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮವನ್ನು ಶಾಂತಲಿಂಗ ಶ್ರೀಗಳು ಉದ್ಘಾಟಿಸಿದರು. | Kannada Prabha

ಸಾರಾಂಶ

ಹರಣಶಿಕಾರಿ ಜನಾಂಗದವರು ಹೆಚ್ಚು ಅರಣ್ಯ ಪ್ರದೇಶದಲ್ಲಿ ಜೀವನ ಮಾಡುತ್ತಿರುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ್ದಾರೆ. ಪ್ರಸಕ್ತ ದಿನಗಳಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರಬೇಕು.

ನರಗುಂದ: ಆದಿವಾಸಿ ಜನಾಂಗದವರು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಆದ್ದರಿಂದ ಸರ್ಕಾರ ಈ ಜನಾಂಗಕ್ಕೆ ಹತ್ತಾರು ಸೌಲಭ್ಯಗಳನ್ನು ನೀಡಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಲ್ಲದೇ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.

ಭಾನುವಾರ ತಾಲೂಕಿನ ಭೈರನಹಟ್ಟಿ ಗ್ರಾಮದ ಶಾಲಾ ಆವರಣದ ರಂಗಮಂದಿರದಲ್ಲಿ 32ನೇ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹರಣಶಿಕಾರಿ ಜನಾಂಗದವರು ಹೆಚ್ಚು ಅರಣ್ಯ ಪ್ರದೇಶದಲ್ಲಿ ಜೀವನ ಮಾಡುತ್ತಿರುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ್ದಾರೆ. ಪ್ರಸಕ್ತ ದಿನಗಳಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರಬೇಕೆಂದರು.

ಈ ಜನಾಂಗದವರು ಕಾಯಕ ಮಾಡಿ ಬದುಕುತ್ತಾರೆ. ಮೇಲಾಗಿ ಗ್ರಾಮದಲ್ಲಿ 200 ವರ್ಷಗಳಿಂದ ವಾಸ ಮಾಡುತ್ತಿದ್ದಾರೆಂದು ಇತಿಹಾಸದಿಂದ ತಿಳಿದುಬರುತ್ತದೆ. ಗ್ರಾಮದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆದರೆ ಅವರ ಸೇವೆ ದೊಡ್ಡದಿದೆ. ಹಿಂದಿನ ದಿನಗಳಲ್ಲಿ ಈ ಸಮುದಾಯದ ನಾಯಕ ಬಿರ್ಸೆ ಮುಂಡಾ ಎಂಬವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರು ಎಂದು ಸ್ಮರಿಸಿದರು.

ಪಿಕಾರ್ಡ್‌ ಬ್ಯಾಂಕಿನ ನಿರ್ದೇಶಕ ಬಿ.ಬಿ. ಐನಾಪೂರ ಮಾತನಾಡಿ, ಗ್ರಾಮದಲ್ಲಿ ಆದಿವಾಸಿ ಜನಾಂಗದವರು ಹೊಂದಾಣಿಕೆಯಿಂದ ಜೀವನ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಟಿಎಪಿಎಂಸಿ ನಿರ್ದೇಶಕ ಚಂದ್ರಶೇಖರ ದಂಡಿನ ಮಾತನಾಡಿ, ಈ ಭಾಗದಲ್ಲಿ ಸಮುದಾಯದಲ್ಲಿ ಏನೋ ತಂಟೆ, ತಕಾರಾರು ಬಂದರೆ ಗ್ರಾಮದ ಸರದಾರ ಹತ್ತಿರ ಬಂದು ಆ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಹೋಗುತ್ತಾರೆ. ಮೇಲಾಗಿ ಈ ಜನಾಗಂದವರು ಪೊಲೀಸ್ ಠಾಣೆ ಮತ್ತು ನ್ಯಾಯಾಲಯಕ್ಕೆ ಹೋಗದೆ ತಮ್ಮ ಸಮುದಾಯದಲ್ಲಿ ಬಗೆಹರಿಸಿಕೊಳ್ಳುವುದು ಬಹಳ ವಿಶೇಷವಾಗಿದೆ ಎಂದರು.

ಆದಿವಾಸಿ ಜನಾಂಗದ ರಾಜ್ಯ ವಿದ್ಯಾರ್ಥಿಗಳ ಒಕ್ಕೂಟ ಅಧ್ಯಕ್ಷ ಶಿವು ಹಡಗಲಿ ಮಾತನಾಡಿ, ಸರ್ಕಾರ ಆದಿವಾಸಿ ಬುಡಕಟ್ಟು ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು. ಸಮುದಾಯಕ್ಕೆ ನಿಗಮ ಮತ್ತು ಆಯೋಗವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಬೇಕು. ಆದಿವಾಸಿ ಬುಡಕಟ್ಟು ಸಮುದಾಯಗಳ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಸೇರಿಸಬೇಕು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಹರಣಶಿಕಾರಿ ಜನಾಂಗದ ಉಡುಗೆ ತೊಡುಗೆ ಧರಿಸಿ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ನಿವೃತ್ತಿ ಶಿಕ್ಷಕ ಎಸ್.ಬಿ. ದಂಡಿನ, ನಾಗರಾಜ ಹರಣಶಿಕಾರಿ, ಮಾರುತಿ ಪೂಜಾರ, ಚಂದ್ರಪ್ಪ ಹರಣಶಿಕಾರಿ, ಮಲ್ಲಪ್ಪ ಹರಣಶಿಕಾರಿ, ಸುಭಾಸ ಅಂಗಡಿ, ನಾಗಪ್ಪ ಕಟ್ಟಿಮನಿ, ಶೇಖಪ್ಪ ಚವಾಣ, ಮಾನಪ್ಪ ಹರಣಶಿಕಾರಿ, ಚಂದ್ರು ಹರಣಶಿಕಾರಿ, ಎಸ್.ಜಿ. ತೆಗ್ಗಿನಮನಿ, ನಾಗಮ್ಮ ಕಾಳೆ, ಶರಣಬಸಪ್ಪ ನರಸಾಪೂರ, ನಿವೃತ್ತ ಯೋಧ ನಿಂಗಪ್ಪ ಮನನೇಕೊಪ್ಪ, ಚಂದ್ರು ಕೊಣ್ಣೂರ, ಸಂಗಪ್ಪ ಹರಣಶಿಕಾರಿ, ಶಿವಾಜಿ ಕಟ್ಟಿಮನಿ ಸೇರಿದಂತೆ ಮುಂತಾದವರು ಇದ್ದರು. ಪ್ರೊ. ರಮೇಶ ಐನಾಪೂರ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಖ್ಯಾಬಲ ಕಾಂಗ್ರೆಸ್‌ಗಿದ್ದರೂ ಪಿಕಾರ್ಡ್ ಬ್ಯಾಂಕ್ ಗದ್ದುಗೆ ಬಿಜೆಪಿಗೆ!
ವೈಚಾರಿಕ ಚಿಂತನೆ ಬೆಳೆಸಲು ಅಂಬೇಡ್ಕರ್ ಓದು ಪ್ರೇರಣೆ: ಜಗದೀಶ್