ಕನ್ನಡಪ್ರಭ ವಾರ್ತೆ ಬೀಳಗಿ
ಪಟ್ಟಣದ ಹೊಲಿಸೇಂಟ್ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್, ಅರಣ್ಯ ಇಲಾಖೆ, ಕನ್ನಡಪ್ರಭ ಮತ್ತು ಏಷಿಯಾ ನೆಟ್ ಸುವರ್ಣ ನ್ಯೂಸ್ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ನಿಮಿತ್ತ ಪ್ರೌಢಶಾಲಾ ಮಕ್ಕಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-೨೦೨೫ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದ ಅವರು, ಮನುಷ್ಯರು ನಿಸರ್ಗದ ಭಾಗವಾಗಿದ್ದು, ನಿಸರ್ಗದಲ್ಲಿರುವ ಪ್ರಾಣಿ ಪಕ್ಷಿ, ಕ್ರಿಮಿಕೀಟಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಒಂದು ಕಾರ್ಯಕ್ರಮಕ್ಕೆ ಬೇಕಾದ ಆಹ್ವಾನ ಪತ್ರಿಕೆ ತಯಾರಿಗೆ ಒಂದು ಗಿಡ ಹಾಳು ಮಾಡುತ್ತಿದ್ದೇವೆ. ಈ ರೀತಿ ಪರಿಸರಕ್ಕೆ ಧಕ್ಕೆ ತರುವ ಆಡಂಬರ ಆಚರಣೆ ಬದಲು ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಒತ್ತು ನೀಡುವ ಮೂಲಕ ಪರಿಸರ ಉಳಿಸಲು ಬದ್ಧರಾಗಿರಬೇಕು ಎಂದರು.ತಹಸೀಲ್ದಾರ್ ವಿನೋದ ಹತ್ತಳ್ಳಿ, ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಸ್. ಆದಾಪೂರ ಮಾತನಾಡಿ, ಮಕ್ಕಳಿಗೆ ಅರಣ್ಯ ಮತ್ತು ವನ್ಯಜೀವಿ ಕುರಿತಾಗಿ ಅರಿವು ಮೂಡಿಸುವ ಜೊತೆಗೆ ಮಕ್ಕಳ ಭಾವನೆ ಪರಿಸರ ಶುದ್ಧೀಕರಿಸುವ ಕಡೆಗೆ ಗಮನ ಸೆಳೆಯುವ ಕೆಲಸವನ್ನು ಕನ್ನಡಪ್ರಭ ಪತ್ರಿಕೆ ಮಾಡುತ್ತಿರುವುದು ಶ್ಲಾಘನೀಯ. ತಾಲೂಕಿನ ಮಕ್ಕಳು ಜಿಲ್ಲೆ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆಯುವಂತಾಗಲಿ ಎಂದು ಹಾರೈಸಿದರು.
ಕುಂಚ, ಕಾವ್ಯ ಗಾಯನ ಮೂಲಕ ಚಾಲುಕ್ಯ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಶಿವಾನಂದ ಹಿರೇಮಠ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿದರು. ಸಿಪಿಐ ಎಚ್.ಬಿ. ಸಣಮನಿ, ವಲಯ ಅರಣ್ಯಾಧಿಕಾರಿ ಅಮ್ರತ ಗಂಡೋಶಿ, ಚಿತ್ರಕಲಾ ಸಂಘದ ತಾಲೂಕು ಅಧ್ಯಕ್ಷ ಎಸ್.ಬಿ. ಲಮಾಣಿ, ಹೊಲಿಸೇಂಟ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎ.ಎಂ. ಸೋಲಾಪೂರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎ.ಎ. ಸೋಲಾಪುರ , ಪತ್ರಕರ್ತರಾದ ಆನಂದ ಜಡಿಮಠ, ಕಾಶಿನಾಥ್ ಸೋಮನಕಟ್ಟಿ, ಶೇಖರ್ ಗೊಳಸಂಗಿ ಇದ್ದರು.