ಇಂದಿನ ಮಕ್ಕಳು ಭವಿಷ್ಯದ ಸ್ವಾಭಿಮಾನಿ ಪ್ರಜೆಗಳಾಗಿ

KannadaprabhaNewsNetwork |  
Published : Aug 31, 2026, 02:00 AM IST
30ಕೆಆರ್ ಎಂಎನ್ 5.ಜೆಪಿಜಿಬಿಡದಿಯ ಬೈರಮಂಗಲ ಕ್ರಾಸ್ ನ ತ್ಯಾಗರಾಜು ಸೆಂಟ್ರಲ್ ಶಾಲೆಯಲ್ಲಿ ನಡೆದ ಬಿಡದಿ ಹೋಬಳಿ ಮಕ್ಕಳ ಸಂರಕ್ಷಣೆ ಹಾಗೂ ಕಾನೂನು ಬಲವರ್ಧನೆಯ ಕಾರ್ಯಗಾರವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು. | Kannada Prabha

ಸಾರಾಂಶ

ರಾಮನಗರ: ಶಿಕ್ಷಣದಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಮಕ್ಕಳು ಸಮಾಜದಲ್ಲಿನ ಆಗು-ಹೋಗುಗಳನ್ನು ಗಮನಿಸಿ, ಸಮಸ್ಯೆಗಳ ಕುರಿತು ಪ್ರಶ್ನಿಸುವ ಮನೋಭಾವ, ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡು ಭವಿಷ್ಯದ ಸ್ವಾಭಿಮಾನಿ ಪ್ರಜೆಗಳಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಕರೆ ನೀಡಿದರು

ರಾಮನಗರ: ಶಿಕ್ಷಣದಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಮಕ್ಕಳು ಸಮಾಜದಲ್ಲಿನ ಆಗು-ಹೋಗುಗಳನ್ನು ಗಮನಿಸಿ, ಸಮಸ್ಯೆಗಳ ಕುರಿತು ಪ್ರಶ್ನಿಸುವ ಮನೋಭಾವ, ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡು ಭವಿಷ್ಯದ ಸ್ವಾಭಿಮಾನಿ ಪ್ರಜೆಗಳಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಕರೆ ನೀಡಿದರು.

ಬಿಡದಿಯ ಬೈರಮಂಗಲ ಕ್ರಾಸ್ ತ್ಯಾಗರಾಜು ಸೆಂಟ್ರಲ್ ಶಾಲೆಯಲ್ಲಿ ಜಿಲ್ಲಾಡಳಿತ, ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ರೋಟರಿ ಬಿಡದಿ ಸೆಂಟ್ರಲ್ ಆಯೋಜಿಸಿದ್ದ ಬಿಡದಿ ಹೋಬಳಿ ಮಕ್ಕಳ ಸಂರಕ್ಷಣೆ ಹಾಗೂ ಕಾನೂನು ಬಲವರ್ಧನೆಯ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ತಿಳಿಸಿದಂತೆ ಶಿಕ್ಷಣ ಇದ್ದವರು, ಸಂಘಟನೆ ಮಾಡಿ, ಹೋರಾಟದ ಮೂಲಕ ಸಮಾಜದ ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ನಮ್ಮದು ಗುಲಾಮಗಿರಿಯ ಬದುಕಾಗಿರದೇ, ಸ್ವಾಭಿಮಾನದ ಬದುಕಾಗಿರಬೇಕು. ಅವರು ನುಡಿಯಂತೆ ಇಂದಿನ ಮಕ್ಕಳು, ಮುಂದಿನ ಗುಲಾಮಗಿರಿ ಪ್ರಜೆಗಳಾಗದೇ, ಸ್ವಾಭಿಮಾನದ ಪ್ರಜೆಗಳಾಗಬೇಕು, ಭವಿಷ್ಯದ ರೂವಾರಿಗಳಾಗಬೇಕು ಎಂದು ಹೇಳಿದರು.

ಅಜ್ಞಾನವೆಂಬುದು ಸಾವಿಗೆ ಸಮಾನ, ನೀವೆಲ್ಲರೂ ಅರಿವಿನ ಮಕ್ಕಳಾಗುವ ಮೂಲಕ ತಮ್ಮ ಹಕ್ಕುಗಳು, ಸ್ವಾಭಿಮಾನದ ಬದುಕಿಗಾಗಿ ಹೋರಾಟ ನಡೆಸಬೇಕು ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಅಧ್ಯಕ್ಷರು ತಮ್ಮ ಜೀವನದ ಉದಾಹರಣೆಯೊಂದಿಗೆ ಶಿಕ್ಷಣಕ್ಕಿರುವ ಶಕ್ತಿ ಹಾಗೂ ಶಿಕ್ಷಣದ ಮಹತ್ವವನ್ನು ಶಾಲಾ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.

18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವಂತಿಲ್ಲ. ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು. ಅವಶ್ಯಕತೆಗಷ್ಟೇ ಮೊಬೈಲ್ ಬಳಸಬೇಕು. ಜೈವಿಕ ಸಹಜ ಕ್ರಿಯೆಯಾದ ಹಾರ್ಮೋನುಗಳ ವ್ಯತ್ಯಾಸದಿಂದಾಗಿ ಪ್ರೌಢಾವಸ್ಥೆಯ ಮಕ್ಕಳಲ್ಲಿ ಮನಸ್ಸಿನ ಚಂಚಲತೆ ಉಂಟಾಗುತ್ತದೆ. ವಿದ್ಯಾರ್ಥಿ ಜೀವನ ಮಹತ್ವದ ಘಟ್ಟವಾಗಿದ್ದು, ಪ್ರೀತಿ-ಪ್ರೇಮ ಹಾಗೂ ಯಾವುದೇ ವ್ಯಸನಗಳು, ದುಶ್ಚಟಗಳಿಗೆ ಬಲಿಯಾಗದೇ ಓದಿನತ್ತ ಗಮನ ಕೇಂದ್ರೀಕರಿಸಿ, ಸತತ ಕಠಿಣ ಪರಿಶ್ರಮದಿಂದ ಗುರಿ ಸಾಧಿಸಬೇಕು ಎಂದು ನಾಗಲಕ್ಷ್ಮಿ ಮಕ್ಕಳಿಗೆ ಕಿವಿಮಾತು ಹೇಳಿದರು.

ಬಿಡದಿ ಆರಕ್ಷಕ ನಿರೀಕ್ಷಕ ವಿಜಯಕುಮಾರ್ ಮಾತನಾಡಿ, ಭವಿಷ್ಯದ ಪ್ರಜೆಗಳಾದ ಮಕ್ಕಳು ಉತ್ತಮ ನಾಗರೀಕರಾಗಬೇಕು. ಬ್ಯಾಡ್ ಟಚಿಂಗ್, ಗುಡ್ ಟಚಿಂಗ್ ಬಗ್ಗೆ ಅರಿವಿರಬೇಕು. ಮಾದಕ ವಸ್ತುಗಳ ಬಳಕೆ ಕಂಡುಬಂದಲ್ಲಿ ಮಾಹಿತಿ ನೀಡಬೇಕು. ದೌರ್ಜನ್ಯ ನಡೆದರೆ, ಶಿಕ್ಷಕರಿಗೆ, ಪೋಷಕರಿಗೆ ಮೊದಲು ತಿಳಿಸಬೇಕು ಎಂದು ಹೇಳಿದರು.

ರೂಟ್ಸ್ ಎಜುಕೇಶನ್ ಹಾಗೂ ಸ್ಕಿಲ್ ಫ್ಲಿಕ್ಸ್ ಸಂಸ್ಥೆಗಳ ಸಂಸ್ಥಾಪಕ ವಿನಯ್ ಪಾಟೀಲ್ ಮಾತನಾಡಿ, ಬೆಳೆಯುತ್ತಿರುವ ಮಕ್ಕಳಲ್ಲಿ ತಾಳ್ಮೆ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿರುತ್ತದೆ. ಯಾವುದೇ ಆಕರ್ಷಣೆಗಳಿಗೆ ಒಳಗಾಗದೇ, ಮೊಬೈಲ್ ಬಿಟ್ಟು ಶಿಕ್ಷಣದತ್ತ ಗಮನಹರಿಸಿ ಏಕಾಂತದಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬೇರೆಯವರೊಂದಿಗೆ ಹೋಲಿಸಿಕೊಳ್ಳದೇ ತಮ್ಮ ಬಗ್ಗೆ ಅಭಿಮಾನ ಹೊಂದಿ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಆತ್ಮಚಿಂತನೆ ನಡೆಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಐಸಿಡಿಎಸ್ ಜಿಲ್ಲಾ ನಿರೂಪಣಾಧಿಕಾರಿ ಲಕ್ಷ್ಮೀದೇವಿ, ಜಿಲ್ಲಾ ಪಾಲಕರಾದ ಅನಿಲ್ ಗುಪ್ತ, ರೋಟರಿ ಬಿಡದಿ ಸೆಂಟ್ರಲ್ ಅಧ್ಯಕ್ಷ ಕೃಷ್ಣ, ಕಾರ್ಯದರ್ಶಿ ಕೆ.ಎನ್. ರಮೇಶ್ , ನಿರ್ದೇಶಕರಾದ ಸಿ.ಎಸ್. ಸಂದೀಪ್ , ಶಾಲಾ ಮುಖ್ಯೋಪಾಧ್ಯಾಯರಾದ ವಿಜಯಲಕ್ಷ್ಮೀ ಸೇರಿದಂತೆ ಬಿಡದಿ ವ್ಯಾಪ್ತಿಯ 20 ಶಾಲೆಗಳ ಮಕ್ಕಳು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಬಿಡದಿ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳ ಅಹವಾಲುಗಳನ್ನು ನಾಗಲಕ್ಷ್ಮಿ ಆಲಿಸಿದರು. ಗ್ರಂಥಾಲಯ, ಶೌಚಾಲಯ, ಶಾಲಾ ಕಾಂಪೌಂಡ್ ನಿರ್ಮಾಣ, ಶಿಕ್ಷಕರ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಿ ಶಾಲೆ ಮಕ್ಕಳು, ಸ್ಕೈ ವಾಕ್, ಅಂಡರ್ ಪಾಸ್ ನಿರ್ಮಾಣ ಮಾಡಿಕೊಡುವಂತೆ ಖಾಸಗಿ ಶಾಲಾ ಮಕ್ಕಳು ನಾಗಲಕ್ಷ್ಮಿ ಅವರಲ್ಲಿ ಮನವಿ ಮಾಡಿದರು. ಆಗ ಅಧ್ಯಕ್ಷರು ಸ್ಥಳದಲ್ಲಿಯೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿ ವರದಿ ನೀಡುವಂತೆ ಸೂಚಿಸಿದರು.

30ಕೆಆರ್ ಎಂಎನ್ 5.ಜೆಪಿಜಿ

ಬಿಡದಿಯ ಬೈರಮಂಗಲ ಕ್ರಾಸ್ ತ್ಯಾಗರಾಜು ಸೆಂಟ್ರಲ್ ಶಾಲೆಯಲ್ಲಿ ಆಯೋಜಿಸಿದ್ದ ಬಿಡದಿ ಹೋಬಳಿ ಮಕ್ಕಳ ಸಂರಕ್ಷಣೆ ಹಾಗೂ ಕಾನೂನು ಬಲವರ್ಧನೆಯ ಕಾರ್ಯಗಾರವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಹವಾಲು ಆಲಿಸಿ ಪರಿಹಾರ ಸೂಚಿಸಿದ ಸಚಿವ ಬಸವಂತಪ್ಪ
ಸುಸ್ಥಿತಿಯ ಕಾಂಪೌಂಡ್ ಕೆಡವಿ, ಮರುನಿರ್ಮಾಣಕ್ಕೆ ತಡೆ