ಸುಂದರ ಚಿಟ್ಟೆಯಂತೆ ನಿಮ್ಮ ಭವಿಷ್ಯ ಉಜ್ವಲವಾಗಲಿ

KannadaprabhaNewsNetwork |  
Published : Jun 02, 2024, 01:46 AM IST
ಸುಂದರವಾದ ಚಿಟ್ಟೆಯಂತೆ ನಿಮ್ಮ ಭವಿಷ್ಯ ಉಜ್ವಲವಾಗಲಿ-  ಶಿಕ್ಷಣ ಇಲಾಖೆ ಜಂಟಿ ನಿಧೇ೯ಶಕಿ ವಿಜಲಯಕ್ಷ್ಮಿ  | Kannada Prabha

ಸಾರಾಂಶ

ಸುಂದರವಾಗಿ ಕಂಗೊಳಿಸುವ ಚಿಟ್ಟೆಗಳಂತೆ ಸದಾಕಾಲ ನಿಮ್ಮ ವಿದ್ಯಾರ್ಥಿ ಜೀವನ ಹಸನಾಗಲಿ, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಸಾಧನೆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ.ವಿಜಯಲಕ್ಷ್ಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ಸುಂದರವಾಗಿ ಕಂಗೊಳಿಸುವ ಚಿಟ್ಟೆಗಳಂತೆ ಸದಾಕಾಲ ನಿಮ್ಮ ವಿದ್ಯಾರ್ಥಿ ಜೀವನ ಹಸನಾಗಲಿ, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಸಾಧನೆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ. ವಿಜಯಲಕ್ಷ್ಮಿ ಹೇಳಿದರು. ಮಹದೇಶ್ವರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿವಿಧ ಘಟಕಗಳ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ಕೊಳ್ಳೇಗಾಲ ಪಟ್ಟಣದಲ್ಲಿರುವ ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ಇತಿಹಾಸ ಪ್ರಸಿದ್ಧಿ ಪಡೆದ ದೊಡ್ಡ ಕಾಲೇಜು, ಇಲ್ಲಿಗೆ ಆಗಮಿಸಿದ್ದು ಹಾಗೂ ಮಕ್ಕಳನ್ನು ನೋಡಿದ್ದು ಅವರ ಪ್ರಗತಿ, ಸಾಧನೆ ಬಗ್ಗೆ ನನಗೆ ತುಂಬ ಸಂತಸವಾಗಿದೆ ಎಂದರು. ಸಮಾಜದಲ್ಲಿ ಅನೇಕ ಸಮಸ್ಯೆಗಳಿವೆ, ಅಂತಹ ಸಮಸ್ಯೆಗಳಿಗೆ ಎದೆಗುಂದದೆ ಎದುರಿಸುವ ಸಾಮರ್ಥ್ಯ ನಿಮ್ಮದಾಗಲಿ. ಜತೆಗೆ ಸಾಧನೆ ಮೂಲಕ ಗುರಿ ತಲುಪಿ, ಉನ್ನತ ವ್ಯಕ್ತಿಗಳಾಗಿ ರೂಪುಗೊಳ್ಳಿ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳು ಅತ್ಯವಶ್ಯಕ, ವಿದ್ಯಾರ್ಥಿಗಳಲ್ಲಿ ಅನೇಕ ಪ್ರತಿಭೆಗಳಿವೆ, ಅವುಗಳನ್ನು ಹೊರತರುವಲ್ಲಿ ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗಲಿವೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ಅರಿವಿನ ಜತೆ ಹೆಮ್ಮೆ ಇರಬೇಕು. ಕಲಿಕೆ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಿ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ನಾಗೇಂದ್ರಪ್ರಸಾದ್ ಮಾತನಾಡಿ, ಇಲ್ಲಿನ ಗ್ರಂಥಾಲಯದಲ್ಲಿ ಜ್ಞಾನಾರ್ಜನೆಗೆ ಉಪಯುಕ್ತವಾದ ಹಲವು ಪುಸ್ತಕಗಳಿವೆ. ಅವುಗಳನ್ನು ಅಧ್ಯಯನ ಮಾಡುವ ಮೂಲಕ ವಿದ್ಯಾರ್ಥಿಗಳು ಸಾಧನೆಗೈದು ಗುರು, ಹಿರಿಯರು, ಪೋಷಕರಿಗೆ ಕೀರ್ತಿ ತನ್ನಿ ಎಂದರು. ಈ ಸಂದರ್ಭದಲ್ಲಿ ವಲಯ ಮತ್ತು ವಿಭಾಗೀಯ ಮಟ್ಟಗಳಲ್ಲಿ ವಿಜೇತರಾದವರಿಗೆ ಹಾಗೂ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಈ ವೇಳೆ ಪ್ರಾಂಶುಪಾಲೆ ಪ್ರೊ.ಜಯಲಕ್ಷ್ಮಿ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ನಾಗೇಂದ್ರಪ್ರಸಾದ್, ಡಾ. ಹೇಮಕುಮಾರ್, ಅರುಣ್ ಕುಮಾರ್, ಡಾ. ಸುಧಾ, ಪ್ರೊ.ಎಸ್ .ಸುಂದರಮೂರ್ತಿ, ಪ್ರೊ.ಪ್ರೇಮಕುಮಾರಿ, ಜಯಶಂಕರ್, ಡಾ.ವೇಣುಗೋಪಾಲ್, ಡಾ.ಪ್ರೇಮಲತಾ, ಡಾ.ನಂಜುಂಡಸ್ವಾಮಿ, ಡಾ.ಆನಂದ್, ಸಿದ್ದರಾಜು ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌