ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಅಥಣಿ ರಸ್ತೆಯಲ್ಲಿರುವ ಸುರಭಿ ನಗರದಲ್ಲಿ ಶನಿವಾರ ನಡೆದ ರಂಭಾಪುರಿ ಪೀಠದ ಶಾಖಾಮಠದ ಭೂಮಿಪೂಜೆ ವೇಳೆ ಎಂ.ಬಿ.ಪಾಟೀಲ ಸಿಎಂ ಆಗಬೇಕು ಎಂದು ನುಡಿದರು.ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಪಂಚಪೀಠದ ಜಗದ್ಗುರುಗಳು ಹಾಗೂ ವಿರಕ್ತಮಠದ ಸ್ವಾಮೀಜಿ ಒಂದಾಗಬೇಕು. ಸ್ವಾಮೀಜಿಗಳು ಒಂದಾದರೇ ನಾವೆಲ್ಲರೂ ಒಂದಾಗಿ ಬಿಡ್ತೇವೆ. ಪಂಚಪೀಠ ಹಾಗೂ ವಿರಕ್ತಮಠ ಎಲ್ಲವೂ ಒಂದಾಗಲಿ ಎಂದು ಶ್ರೀಗಳಿಗೆ ಮನವಿ ಮಾಡಿದರು.
ನಾನು ಈ ಹಿಂದೆ ಲಿಂಗಾಯತ ಧರ್ಮದ ಬಗ್ಗೆ ಹೋರಾಟ ಮಾಡಿದ್ದೇನೆ. ನಮ್ಮಲ್ಲಿ ಆಚರಣೆ ಬೇರೆ ಇರಬಹುದು. ಆದರೆ, ಉದ್ದೇಶ ಒಂದೇ ಇರುತ್ತದೆ. ಎಲ್ಲ ಉಪ ಪಂಗಡಗಳು ಒಂದೇ ಆಗಲಿ ಎಂಬುವುದು ನಮ್ಮ ಆಸೆಯಾಗಿದೆ. ಬಡತನದಲ್ಲಿರುವ ಜನರಿಗೆ ಅನುಕೂಲವಾಗಲಿ ಎಂಬುವುದು ನಮ್ಮ ಉದ್ದೇಶ. ನಮ್ಮ ಮಕ್ಕಳ ಶಿಕ್ಷಣಕ್ಕಾಗಿ ಉತ್ತಮ ಭವಿಷ್ಯಕ್ಕಾಗಿ ನಾವೆಲ್ಲರೂ ಒಂದಾಗಬೇಕು ಎಂದು ಕರೆ ನೀಡಿದರು.ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರುಗಳು ಮಾತನಾಡಿ, ಎಂ.ಬಿ.ಪಾಟೀಲ ಅವರಿಗೆ ನೀರಾವರಿ ಖಾತೆ ಕೊಡಬೇಕಿತ್ತು ಎಂದು ಆಶಯ ವ್ಯಕ್ತಪಡಿಸಿದರು.ಎಂ.ಬಿ.ಪಾಟೀಲರು ಎಲ್ಲರ ಮುಂದೆ ತಮ್ಮ ಮನದಾಳದ ಮಾತು ಹಂಚಿಕೊಂಡಿದ್ದಾರೆ. ಎಂ.ಬಿ.ಪಾಟೀಲ ಹೇಳಿದಂತೆ ಆಂತರಿಕವಾಗಿ ಸಮಸ್ಯೆ ಇದೆ ಎಂದು ಹೇಳಿರೋದು ಸತ್ಯ. ವೀರಶೈವ ಲಿಂಗಾಯತ ಒಂದಾಗಿ ಕೆಲಸ ಮಾಡಿದರೇ ನಮ್ಮ ಶಕ್ತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸಮಾಜ ಒಂದಾಗಲಿ ಎಂದು ಹಾನಗಲ್ಲ ಕುಮಾರಸ್ವಾಮಿ ವೀರಶೈವ ಲಿಂಗಾಯತ ಮಹಾಸಭಾ ಶುರು ಮಾಡಿದರು. ಗುರುವಿರಕ್ತ ಮಠಾಧೀಶರು ಒಂದಾಗಿ ಸಮಾಜದ ಒಳತಿಗಾಗಿ ಕೆಲಸ ಮಾಡಿದ್ದೇವೆ. ವೀರಶೈವ ಮಹಾಸಭಾ ಹೇಳಿದಂತೆ ಭಕ್ತರಿಗಾಗಿ ಒಂದಾಗಿ ಕೆಲಸ ಮಾಡಿದ್ದೇವೆ. ವೀರಶೈವ ಲಿಂಗಾಯತ ಏಕತಾ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗಿದ್ದೇವೆ. ಆಚಾರ್ಯರು ಹಾಗೂ ಬಸವಾದಿ ಶರಣರು ಹೇಳಿರುವುದು ಎರಡು ಒಂದೇ. ಮಕ್ಕಳ ಶಿಕ್ಷಣಕ್ಕಾಗಿ, ಮೀಸಲಾತಿಗಾಗಿ ಬಹಳ ಜನ ಹೋರಾಟ ಮಾಡಿದ್ದಾರೆ. ಎಂ.ಬಿ.ಪಾಟೀಲ ಏನೇ ಹೇಳಿದರೂ ಗಟ್ಟಿಯಾಗಿ, ಸ್ಪಷ್ಟವಾಗಿ ಹೇಳುತ್ತಾರೆ. ಗುರುವಿರಕ್ತ ಒಂದಾಗಬೇಕು ಎಂದು ಎಂ.ಬಿ.ಪಾಟೀಲ ಹೇಳಿದ್ದಾರೆ ಎಂದರು.
-ಎಂ.ಬಿ.ಪಾಟೀಲ,
ಜಿಲ್ಲಾ ಉಸ್ತುವಾರಿ ಸಚಿವರು.ಗುರುವಿರಕ್ತರ ಜೊತೆಗೆ ಒಂದಾಗಲು ರಂಭಾಪುರಿ ಪೀಠ ಮೊದಲ ಸ್ಥಾನದಲ್ಲಿ ಇರುತ್ತದೆ. ಮುಂದಿನ ದಿನಗಳಲ್ಲಿ ವಿಜಯಪುರದಲ್ಲಿ ಪಂಚಾಚಾರ್ಯರು ಹಾಗೂ ವಿರಕ್ತರನ್ನು ಒಂದಾಗಿಸುವ ಕೆಲಸ ಮಾಡಲಿ. ಮುಂದಿನ ದಿನಗಳಲ್ಲಿ ಉತ್ತಮ ಕಾರ್ಯಕ್ರಮ ಮಾಡಲಿ.ಎಂ.ಬಿ.ಪಾಟೀಲ ಅವರಿಗೆ ನೀರಾವರಿ ಖಾತೆ ಕೊಡಬೇಕಿತ್ತು.-ಡಾ.ವೀರಸೋಮೇಶ್ವರ ಜಗದ್ಗುರುಗಳು, ಬಾಳೆಹೊನ್ನೂರು ರಂಭಾಪುರಿ ಪೀಠ.