ಎಂಸಿಡಿಸಿಸಿ ಚುನಾವಣೆ: ಕಾಂಗ್ರೆಸ್‌ಗೆ ಗೆಲುವು

KannadaprabhaNewsNetwork |  
Published : Jun 27, 2025, 12:48 AM IST

ಸಾರಾಂಶ

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆಯಲ್ಲಿ ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎಚ್.ಎಂ.ಗಣೇಶ್‌ ಪ್ರಸಾದ್‌ ಗೆಲುವು ಸಾಧಿಸಿದ್ದು, ಮಾಜಿ ಶಾಸಕ ಆರ್.ನರೇಂದ್ರರ ಫಲಿತಾಂಶ ತಡೆ ಬಿದ್ದಿದೆ. ಯಳಂದೂರು ಕ್ಷೇತ್ರದಿಂದ ಕಾಂಗ್ರೆಸ್‌ನ ವೈ.ಎಂ.ಜಯರಾಮು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆಯಲ್ಲಿ ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎಚ್.ಎಂ.ಗಣೇಶ್‌ ಪ್ರಸಾದ್‌ ಗೆಲುವು ಸಾಧಿಸಿದ್ದು, ಮಾಜಿ ಶಾಸಕ ಆರ್.ನರೇಂದ್ರರ ಫಲಿತಾಂಶ ತಡೆ ಬಿದ್ದಿದೆ. ಯಳಂದೂರು ಕ್ಷೇತ್ರದಿಂದ ಕಾಂಗ್ರೆಸ್‌ನ ವೈ.ಎಂ.ಜಯರಾಮು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಹನೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬೆಂಬಲಿತರು ಜಯಗಳಿಸಿದರೆ, ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರ ಹೊರತು ಪಡಿಸಿ,ಚಾಮರಾಜನಗರ ಹಾಗೂ ಕೊಳ್ಳೇಗಾಲ-ಹನೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಬೇಂದ್ರಪ್ಪ ಒಂದು ಮತದಿಂದ ಸೋಲು ಕಂಡರೆ, ಕೊಳ್ಳೇಗಾಲ-ಹನೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಆರ್.ನರೇಂದ್ರ 9 ಮತ, ಎದುರಾಳಿ ಅಭ್ಯರ್ಥಿ ಮಲ್ಲೇಶ್‌ ಗೆ 8 ಮತ ಬಂದಿವೆ. ಒಂದು ಮತವನ್ನು ನ್ಯಾಯಾಲಯದಿಂದ ಅನುಮತಿ ಪಡೆದು ಹಕ್ಕು ಚಲಾಯಿಸಿರುವುದರಿಂದ ನ್ಯಾಯಾಲಯದ ಆದೇಶ ಬರುವ ತನಕ ಮತ ಎಣಿಕೆಗೆ ಚುನಾವಣಾಧಿಕಾರಿ ತಡೆ ನೀಡಿದ್ದಾರೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ನಿರೀಕ್ಷೆಯಂತೆ ೨೨ ಮತ ಪಡೆದು ಎದುರಾಳಿ ಬಿಜೆಪಿ ಎಸ್.ಎಂ.ವೀರಪ್ಪ ವಿರುದ್ಧ ೧೧ ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಬಿಜೆಪಿ ಸ್ಟ್ರಾಂಗ್‌:ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆಯಲ್ಲಿ ಗುಂಡ್ಲುಪೇಟೆ ಹೊರತು ಪಡಿಸಿ ಕೊಳ್ಳೇಗಾಲ-ಹನೂರು, ಚಾಮರಾಜನಗರ ಕ್ಷೇತ್ರದಲ್ಲಿ ಶಾಸಕ, ಮಾಜಿ ಶಾಸಕರ ವಿರುದ್ಧ ಬಿಜೆಪಿ ಅಭ್ಯರ್ಥಿಗಳು ಸಮ ಬಲದ ಹೋರಾಟ ನೀಡುವ ಮೂಲಕ ಬಿಜೆಪಿ ಸ್ಟ್ರಾಂಗ್‌ ಆಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ