ಎಂಡಿ ಭರವಸೆ: ಗುತ್ತಿಗೆದಾರರ ಧರಣಿ ಅಂತ್ಯ

KannadaprabhaNewsNetwork |  
Published : Jun 27, 2024, 01:07 AM IST
26 ಆಲಮಟ್ಟಿ 1: ಕೆಬಿಜೆಎನ್ಎಲ್  ಎಂಡಿ ಭರವಸೆ: ಗುತ್ತಿಗೆದಾರರ ಧರಣಿ ಅಂತ್ಯ | Kannada Prabha

ಸಾರಾಂಶ

ಇಲ್ಲಿನ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಕಚೇರಿ ಎದುರು ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷ್ಣಾತೀರ ಗುತ್ತಿಗೆದಾರರ ಸಂಘದ ಆಶ್ರಯದಲ್ಲಿ ಜೂ.19ರಿಂದ ಗುತ್ತಿಗೆದಾರರು ಹಮ್ಮಿಕೊಂಡಿದ್ದ ಅನಿರ್ದಿಷ್ಟಾಧಿ ಧರಣಿಯು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೋಹನರಾಜ್ ಕೆ.ಪಿ. ಅವರ ಭರವಸೆ ಮೇರೆಗೆ ಬುಧವಾರ ಅಂತ್ಯಗೊಂಡಿತು.

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಇಲ್ಲಿನ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಕಚೇರಿ ಎದುರು ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷ್ಣಾತೀರ ಗುತ್ತಿಗೆದಾರರ ಸಂಘದ ಆಶ್ರಯದಲ್ಲಿ ಜೂ.19ರಿಂದ ಗುತ್ತಿಗೆದಾರರು ಹಮ್ಮಿಕೊಂಡಿದ್ದ ಅನಿರ್ದಿಷ್ಟಾಧಿ ಧರಣಿಯು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೋಹನರಾಜ್ ಕೆ.ಪಿ. ಅವರ ಭರವಸೆ ಮೇರೆಗೆ ಬುಧವಾರ ಅಂತ್ಯಗೊಂಡಿತು.ಧರಣಿ ಸ್ಥಳಕ್ಕೆ ಕೆಬಿಜೆಎನ್ಎಲ್ ಎಂಡಿ ಆಗಮಿಸಿದಾಗ ಧರಣಿ ನಿರತರು ತಮ್ಮ ನಾನಾ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಎಂಡಿ ಮೋಹರಾಜ ಕೆ.ಪಿ. ಮಾತನಾಡಿ, ಕಳೆದ ವರ್ಷದಲ್ಲಿ ಕರೆಯಲಾದ ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕ ಕಾಯ್ದೆ ಅನುಸಾರ ಕ್ರಮಕೈಗೊಂಡು ಕಾಮಗಾರಿಗಳ ಬಿಡ್‌ನಲ್ಲಿ ಭಾಗವಹಿಸಿದ ಗುತ್ತಿಗೆದಾರರ ಮುಂಗಡ ಹಣವನ್ನುಆಯಾ ಗುತ್ತಿಗೆದಾರರಿಗೆ ಮರಳಿಸಲಾಗಿದೆ. ಕಾಲುವೆಗಳ ದುರಸ್ತಿ, ನೂತನ ಮುಖ್ಯ ಕಾಲುವೆ, ವಿತರಣಾ ಕಾಲುವೆ, ಸೀಳು ಕಾಲುವೆ, ಉಪಕಾಲುವೆಗಳ ನಿರ್ಮಾಣ ಕಾಮಗಾರಿಗಳನ್ನು ಪ್ಯಾಕೇಜ್‌ ಪದ್ಧತಿಗೆ ಅಳವಡಿಸದೆ ವಿಂಗಡಣೆ ಮಾಡಿ ಟೆಂಡರ್ ಕರೆಯುವುದು ಸೇರಿದಂತೆ ಇತರೆ ಎಲ್ಲ ಬೇಡಿಕೆಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಧ್ಯಕ್ಷ ಎಂ.ಎ.ಮೇಟಿ, ಉಪಾಧ್ಯಕ್ಷ ಎಸ್.ಎಸ್.ಗದಿಗೆಪ್ಪಗೌಡರ, ಕಾರ್ಯದರ್ಶಿ ವೈ.ವೈ.ಬಿರಾದಾರ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ನಾಯಕ, ಖಜಾಂಚಿ ಬಸವರಾಜ ದಂಡಿನ, ಗೋಪಾಲ ಬಂಡಿವಡ್ಡರ, ಮಹಾಂತೇಶ ಡೆಂಗಿ. ಮಹಾಂತೇಶ ಬೆಳಗಲ್ಲ, ಬಸವರಾಜ ಬಿರಾದಾರ, ಸಂತೋಷ ಪಾಟೀಲ, ಮುತ್ತು ಕಿರಸೂರ, ಎಂ.ಡಿ.ಆಲಮಟ್ಟಿ, ಮಕಸೂದ ಮಕಾನದಾರ, ಬಿ.ಟಿ.ರಾಠೋಡ, ಹನುಮಂತ ಪೂಜಾರಿ, ಸಂತೋಷ ಲಮಾಣಿ, ಯಲ್ಲಪ್ಪ ನಾಗರಾಳ, ಸಿ.ಜಿ.ವಿಜಯಕರ, ವಿ.ಎಂ.ಹಿರೇಮಠ, ಜಕ್ಕಪ್ಪ ಮಾಗಿ, ಟಿ.ಎಸ್.ಅಫಜಲಪುರ, ಕೆ.ವಿ.ಶಿವಕುಮಾರ, ಬಸವರಾಜ ಬಾದರದಿನ್ನಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!