ಬೆಳವಾಡಿಗೆ ಹೋಗುವ ನಾಲೆ ಅಭಿವೃದ್ಧಿಗೆ ಕ್ರಮ: ಶಾಸಕ ರಮೇಶ್

KannadaprabhaNewsNetwork |  
Published : Sep 06, 2026, 02:00 AM IST
5ಕೆಎಂಎನ್ ಡಿ14 | Kannada Prabha

ಸಾರಾಂಶ

ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ಕಾಮಗಾರಿ ಶೀಘ್ರ ಮುಗಿಸಿ ಜನರ ಆರೋಗ್ಯ ಸೇವೆಗೆ ಸಿಗುವಂತಾಗಲಿ. ಗ್ರಾಮದ ರಸ್ತೆ ಅಭಿವೃದ್ಧಿ ಮಾಡಲು ಮುಖಂಡರು ನನ್ನ ಗಮನಕ್ಕೆ ತಂದಿದ್ದಾರೆ. ಹಂತ ಹಂತವಾಗಿ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ನಗುವನಹಳ್ಳಿ ಗ್ರಾಪಂ ನೂತನ ಕಟ್ಟಡ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣ ಕಾಮಗಾರಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕರು, ಗ್ರಾಪಂ ಕಟ್ಟಡ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟುವ ಜೊತೆಗೆ ಗ್ರಾಮದಿಂದ ಬೆಳವಾಡಿಗೆ ಹೋಗುವ ನಾಲೆ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದರು.

ಈ ಹಿಂದೆ ಇದ್ದ ಗ್ರಾಪಂ ಕಟ್ಟಡವು ಅತ್ಯಂತ ಚಿಕ್ಕದಾಗಿದ್ದು, ಇಲ್ಲಿ ಸಭೆ ಸಮಾರಂಭ ನಡೆಸಲು ಕಷ್ಟವಾಗುತ್ತಿದ್ದ ಕಾರಣ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಮಾದರಿಯಾಗಿ ನಿರ್ಮಿಸಲು ಒಂದು ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದರು.

ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ಕಾಮಗಾರಿ ಶೀಘ್ರ ಮುಗಿಸಿ ಜನರ ಆರೋಗ್ಯ ಸೇವೆಗೆ ಸಿಗುವಂತಾಗಲಿ. ಗ್ರಾಮದ ರಸ್ತೆ ಅಭಿವೃದ್ಧಿ ಮಾಡಲು ಮುಖಂಡರು ನನ್ನ ಗಮನಕ್ಕೆ ತಂದಿದ್ದಾರೆ. ಹಂತ ಹಂತವಾಗಿ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.

ಸೆ.11ರಂದು ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಎಂಐಟಿ ಕಾಲೇಜು ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಹಲವು ಕಂಪನಿಗಳು ಭಾಗವಹಿಸಲಿವೆ. ಡಿಪ್ಲೊಮಾ, ಐಟಿಐ, ಬಿ.ಕಾಂ, ಬಿ.ಎ. ಪದವೀಧರರು ಹಾಗೂ ಬಿ.ಇ. ಪದವೀಧರ ಯುವ ಸಮುದಾಯ ಭಾಗವಹಿಸಿ ಉದ್ಯೋಗ ಪಡೆಯಬಹುದು ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಚಲುವಪ್ಪ, ಸಿ.ಎಸ್.ವೆಂಕಟೇಶ್, ತಾಪಂ ಇಒ ಚಂದ್ರು, ಪಿಡಿಒ ಶಿಲ್ಪ, ಗುತ್ತಿಗೆದಾರ ಹರೀಶ್ ಮತ್ತು ಗ್ರಾಮದ ಮುಖಂಡರು ಹಾಜರಿದ್ದರು.

ಇಂದು ಬಾಯಿಬೀಗ ಕಾರ್ಯಕ್ರಮ

ಮಂಡ್ಯ: ತಾಲೂಕಿನ ಕೊಮ್ಮೇರಹಳ್ಳಿಯ ಶ್ರೀ ಕಂಬದ ನರಸಿಂಹಸ್ವಾಮಿ ದೇವಾಲಯದಲ್ಲಿ ಸೆ.೬ರಂದು ಮಧ್ಯಾಹ್ನ ೧ ಗಂಟೆಗೆ ಹರಕೆ ಹೊತ್ತ ಭಕ್ತರಿಂದ ಬಾಯಿಬೀಗ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾತನೂರಿನ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಸನ್ನಿಧಿಯಿಂದ ಶ್ರೀಬೀರೇಶ್ವರ ದೇವರ ಜೊತೆ ಬಾಯಿಬೀಗದ ಸಮೇತ ಊರಿನಿಂದ ಹೊರಟು ಶ್ರೀ ಕಂಬದ ನರಸಿಂಹಸ್ವಾಮಿ ಬೆಟ್ಟಕ್ಕೆ ಸಾಮೂಹಿಕವಾಗಿ ಹೋಗಿ ಹರಕೆ ಒಪ್ಪಿಸಿ ಪೂಜಾ ಸೇವೆ ಸಲ್ಲಿಸಲಿದ್ದಾರೆ. ಭಕ್ತರು ಸಕಾಲಕ್ಕೆ ಆಗಮಿಸಿ ಬಾಯಿಬೀಗ ಮೆರವಣಿಗೆಯಲ್ಲಿ ಭಾಗವಹಿಸುವಂತೆ ದೇವಸ್ಥಾನ ಸೇವಾ ಸಮಿತಿ ಕೋರಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಟ್ಸಾಪ್‌ ಕರೆಯಲ್ಲೇ ಕನ್ನಾಳೆ ಗ್ಯಾಂಗ್‌ ಕೆಪಿಎಸ್ಸಿ ಡೀಲ್‌!
ಇಂದಿರಾ ಕಿಟ್‌ ಯೋಜನೆಗೆ ಬೆಲೆ ಏರಿಕೆಯ ಏಟು