ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಸಾಪ ಆಶ್ರಯದಲ್ಲಿ ಉಪನ್ಯಾಸ ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ
ಬುಧವಾರ ಪಟ್ಟಣದ ಸಿಂಸೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತಾ. ಕಸಾಪ ಆಶ್ರಯದಲ್ಲಿ ನಡೆದ ಕನ್ನಡ ಡಿಂಡಿಮ ಕಾರ್ಯಕ್ರಮದಲ್ಲಿ ದೃಶ್ಯ ಮಾದ್ಯಮದಲ್ಲಿ ಕನ್ನಡ ಭಾಷಾ ಬೆಳವಣಿಗೆ ಎಂಬ ವಿಷಯದ ಉಪನ್ಯಾಸ ನೀಡಿದರು. ಇಂದು ಹಲವಾರು ಖಾಸಗಿ ಟಿವಿ ಚಾನಲ್ ಗಳು ಕನ್ನಡ ಭಾಷೆ ಬಗ್ಗೆ ಚರ್ಚೆ ನಡೆಸುತ್ತಾರೆ. ಆದರೆ, ಟಿವಿ ಚಾನಲ್ ಹೆಸರಿನಿಂದ ಹಿಡಿದು ಎಲ್ಲವೂ ಇಂಗ್ಲಿಷ್ ಮಯವಾಗಿದೆ. ಚಾನಲ್ ಗಳಿಗೆ ಇಂದು ಜವಾಬ್ದಾರಿ ಹೆಚ್ಚಿದ್ದು ಯುವ ಜನರಿಗೆ ಒಳ್ಳೆಯ ಸಂದೇಶ ನೀಡಬೇಕು. ಚಂದನ ವಾಹಿನಿ ಸುದ್ದಿಯಲ್ಲಿ ನಿಖರತೆ, ಕನ್ನಡ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಹಾಗೂ ಸಮಾಜಕ್ಕೆ ಉಪಯುಕ್ತ ಕಾರ್ಯಕ್ರಮ ನೀಡುತ್ತದೆ. ಟಿಆರ್ಪಿ ಹೆಚ್ಚಿಸಲು ಹಲವಾರು ಖಾಸಗಿ ಚಾನಲ್ ಗಳು ವೇಗವಾಗಿ ಸುದ್ದಿ ನೀಡಲು ಹೋಗಿ ಸುಳ್ಳು ಸುದ್ದಿ ನೀಡುತ್ತದೆ. ಇದಕ್ಕೆ ಕಡಿವಾಣ ಅಗತ್ಯ.
ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಬಾರದು. ಟಿವಿಗಳು ಮನರಂಜನೆ, ಮಾಹಿತಿ, ಶಿಕ್ಷಣ ನೀಡಬೇಕು.ಇಂದು ಖಾಸಗಿ ಟಿವಿಗಳು ಮನರಂಜನೆ ನೀಡುತ್ತದೆ. ಶಿಕ್ಷಣ ನೀಡುವುದಿಲ್ಲ. ಎಲ್ಲವೂ ವ್ಯವಹಾರವಾಗಿದೆ ಎಂದರು.ವಿದ್ಯಾರ್ಥಿಗಳು ಕನ್ನಡ ಬಾಷೆ ಬಗ್ಗೆ ಪ್ರೀತಿ ಬೆಳೆಸಿಕೊಂಡು ಪ್ರತಿ ತಿಂಗಳು ಒಂದು ಕನ್ನಡ ಪುಸ್ತಕ ವನ್ನಾದರೂ ಓದಬೇಕು. ಇಂದು ಕನ್ನಡ ದಿನ ಪತ್ರಿಕೆಗಳು ಹಾಗೂ ಆಕಾಶವಾಣಿಯಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿದೆ. ಆದರೆ, ದೃಶ್ಯ ಮಾದ್ಯಮದಲ್ಲಿ ಮಾತ್ರ ಇಂಗ್ಲಿಷ್ ಬಳಕೆ ಹೆಚ್ಚಿದೆ ಎಂದು ವಿಷಾದಿಸಿದರು. ನಂತರ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.
ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ಮಾತನಾಡಿ, ಕಳೆದ 2 ತಿಂಗಳಲ್ಲಿ ಶ್ರಾವಣ ಸಂಜೆ, ಕನ್ನಡ ಡಿಂಡಿಮ ಕಾರ್ಯಕ್ರಮ ಮಾಡಿದ್ದೇವೆ. ಎಲ್ಲಾ ಶಾಲೆಗಳ ಮಕ್ಕಳಿಗೆ ಕನ್ನಡದಲ್ಲಿ ಸುಂದರವಾಗಿ ಬರೆಯುವ ಸ್ಪರ್ಧೆ ನಡೆಸಿದ್ದೇವೆ. ನರಸಿಂಹರಾಜಪುರದಲ್ಲಿ ಕನ್ನಡ ಭವನ ಕಟ್ಟಲು ನಿವೇಶನ ನೀಡಬೇಕು. ಗ್ರಂಥಾಲಯ ಸ್ಥಾಪಿಸಬೇಕು ಎಂದು ಪಟ್ಟಣ ಪಂಚಾಯಿತಿಯನ್ನು ಒತ್ತಾಯಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಎಚ್.ಇ.ಅಜ್ಜಪ್ಪ, ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾ ಸಂಚಾಲಕ ಎಚ್.ಡಿ.ವಿನಯ, ಕಸಾಪ ಕಸಬಾ ಹೋಬಳಿ ಅಧ್ಯಕ್ಷೆ ಜುಬೇದ, ಜೇಸಿ ಸಂಸ್ಥೆಯ ನಿಯೋಜಿತ ಅಧ್ಯಕ್ಷ ಮನು ಅಬ್ರಾಹಂ ಉಪಸ್ಥಿತರಿದ್ದರು. ವಹೀದ, ಭಾಗ್ಯ , ರಾಮಕೃಷ್ಣ ಇದ್ದರು.