ಮೆಡಿಕಲ್‌ ಕಾಲೇಜು ಕಡತ ಹಸ್ತಾಂತರ ಪ್ರಕ್ರಿಯೆ: ಅಶೋಕ್ ರೈ-ಡಾ.ಹರ್ಷ ಭೇಟಿ

KannadaprabhaNewsNetwork |  
Published : Dec 06, 2025, 03:15 AM IST
ಶಾಸಕ ಅಶೋಕ್ ರೈ ರಾಜ್ಯ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಹರ್ಷಗುಪ್ತ ಅವರೊಂದಿಗೆ ಮಾತುಕತೆ ನಡೆಸಿದರು. | Kannada Prabha

ಸಾರಾಂಶ

ವಿವಿಧ ವಿಚಾರಗಳ ಬಗ್ಗೆ ಶಾಸಕ ಅಶೋಕ್ ರೈ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಹರ್ಷಗುಪ್ತ ಅವರ ಜೊತೆ ಮಾತುಕತೆ ನಡೆಸಿದರು.

ಪುತ್ತೂರು: ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಅನುಮೋದನೆಗೊಂಡಿದ್ದು, ಮೆಡಿಕಲ್ ಕಾಲೇಜು ಕಡತವನ್ನು ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಇಲಾಖೆಗೆ ಹಸ್ತಾಂತರ ಮಾಡುವ ಬಗ್ಗೆ ಸಹಿತ ವಿವಿಧ ವಿಚಾರಗಳ ಬಗ್ಗೆ ಶಾಸಕ ಅಶೋಕ್ ರೈ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಹರ್ಷಗುಪ್ತ ಅವರ ಜೊತೆ ಮಾತುಕತೆ ನಡೆಸಿದರು.

ಗುರುವಾರ ಬೆಂಗಳೂರಿನಲ್ಲಿ ಅಧಿಕಾರಿಯನ್ನು ಭೇಟಿಯದ ಶಾಸಕರು ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಈಗಾಗಲೇ ಅನುಮೋದನೆಗೊಂಡಿದ್ದು ಆರೋಗ್ಯ ಇಲಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿ ಸರ್ಕಾರ ಆದೇಶ ಮಾಡಿದೆ. ಪುತ್ತೂರಿಗೆ ೩೦೦ ಬೆಡ್‌ನ ಆಸ್ಪತ್ರೆ ಮಂಜೂರಾಗಿದ್ದು ಇದು ಮೆಡಿಕಲ್ ಕಾಲೇಜಿಗೆ ಸಂಬಂಧಪಟ್ಟಿರುವ ಕಾರಣ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ವಿಭಾಗಕ್ಕೆ ಹಸ್ತಾಂತರವಾಗಬೇಕಿದೆ. ಈ ಆದೇಶ ಆದಷ್ಟು ಶೀಘ್ರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರ ಮಾಡುವಂತೆ ಕೇಳಿಕೊಂಡರು.

ವಿಟ್ಲಕ್ಕೆ ಡಯಾಲಿಸಿಸ್‌ ಕೇಂದ್ರ:

ವಿಟ್ಲದಲ್ಲಿ ಅನೇಕ ಮಂದಿ ಕಿಡ್ನಿ ಕಾಯಿಲೆಗೆ ಸಂಬಂಧಿಸಿದ ರೋಗಿಗಳಿದ್ದು, ಆದರೆ ಡಯಾಲಿಸಿಸ್ ವ್ಯವಸ್ಥೆ ಇಲ್ಲದೆ ಕಷ್ಟಪಡುವಂತಾಗಿದೆ. ಡಯಾಲಿಸಿಸ್ ಕೇಂದ್ರವನ್ನು ಪ್ರಾರಂಭ ಮಾಡುವ ಬಗ್ಗೆ ಶಾಸಕರು ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರಲ್ಲಿ ಮನವಿ ಮಾಡಿದ್ದರು. ಸಚಿವರು ಶೀಘ್ರ ಕೇಂದ್ರ ಸ್ಥಾಪನೆಯ ಭರವಸೆಯನ್ನು ನೀಡಿದ್ದರು. ಜಿ.ಪಂ. ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಈ ವಿಚಾರವನ್ನು ಶಾಸಕರು ಪ್ರಸ್ತಾಪ ಮಾಡಿದ್ದರು. ಇದೀಗ ಆರೋಗ್ಯ ಇಲಾಖೆಯ ಮೂಲಕ ಡಯಾಲಿಸಿಸ್ ಕೇಂದ್ರ ಸ್ಥಾಪನೆಯಾಗಲಿದ್ದು ಶೀಘ್ರ ಮಂಜೂರಾತಿಗೆ ಮಾಡುವಂತೆ ಶಾಸಕರು ವಿನಂತಿಸಿದರು.

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರು, ಕಣ್ಣಿನ ತಜ್ಞರ ಕೊರತೆಯಿದ್ದು ಅದನ್ನು ಶೀಘ್ರ ಭರ್ತಿ ಮಾಡುವಂತೆ ಹಾಗೂ ವಿಟ್ಲ ಸಮುದಾಯ ಕೇಂದ್ರದಲ್ಲಿ ವೈದ್ಯರ ಕೊರತೆ ಪರಿಹರಿಸುವಂತೆ ಕೋರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಟ್ಲ: 14ರಂದು ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮ
ಸಿ ಅಂಡ್‌ ಡಿ, ಸೆಕ್ಷನ್-‌ 4 ಸಮಸ್ಯೆಗೆ ಸರ್ಕಾರದ ಸ್ಪಂದನೆ: ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆದ ರೈತರು