ಕನ್ನಡಪ್ರಭ ವಾರ್ತೆ ಅಥಣಿ
ಇಲ್ಲಿನ ಕೆಎಂಸಿ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪುರಾತನ ಕಾಲದಿಂದಲೂ ವೈದ್ಯರ ಸೇವೆ ದೇವರ ಸಮಾನ ಎಂದು ಕರೆಯಲಾಗಿದೆ. ಅವರ ಶ್ರಮ ಮತ್ತು ನಿಸ್ವಾರ್ಥ ಸೇವೆಗೆ ಎಂದಿಗೂ ಬೆಲೆ ಕಟ್ಟಲಾಗದು, ರೋಗಿಗಳ ನೋವನ್ನ ತಮ್ಮ ನೋವು ಎಂದು ಭಾವಿಸಿ ತಮ್ಮ ನಿದ್ದೆ, ಹಸಿವು, ಸುಖವನ್ನ ತ್ಯಾಗ ಮಾಡಿ ನಿರಂತರ ರೋಗಿಗಳ ಸೇವೆಯಲ್ಲಿರುತ್ತಾರೆ. ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗು ಎರಡೂ ಜೀವಗಳು ಮುಖ್ಯವಾಗಿರುತ್ತದೆ. ಸಂಕಷ್ಟದಲ್ಲಿರುವ ಜೀವಗಳನ್ನು ರಕ್ಷಣೆ ಮಾಡುವ ಜೊತೆಗೆ ರೋಗಿಗಳ ಮತ್ತು ಅವರ ಕುಟುಂಬದಲ್ಲಿ ಆಶಾಕಿರಣ ಮೂಡಿಸುವ ಕೆಲಸವನ್ನು ವೈದ್ಯರು ಮಾಡುತ್ತಾರೆ ಎಂದರು.
ರೈತನ ಮಗನಾಗಿ ಡಾ.ಸಂಜಯ ಕುರೆನ್ನವರ ನನ್ನ ಶಿಷ್ಯನಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ನಮ್ಮೆಲ್ಲರಿಗೆ ಹೆಮ್ಮೆ. ಅಥಣಿಯಲ್ಲಿ ಕೆಎಂಸಿ ಆಸ್ಪತ್ರೆ ಆರಂಭಿಸುವ ಮೂಲಕ ತಮ್ಮ ವೈದ್ಯಕೀಯ ಸೇವೆ ಆರಂಭಿಸಿರುವುದು ನನಗೆ ಸಂತಸ ತಂದಿದೆ. ಈ ಆಸ್ಪತ್ರೆಯ ಮೂಲಕ ಜನರಿಗೆ ಉತ್ತಮ ಸೇವೆ ದೊರಕಲಿ ಎಂದು ಶುಭ ಹಾರೈಸಿದರು.ಆಸ್ಪತ್ರೆ ಉದ್ಘಾಟಿಸಿದ ಯುವ ಮುಖಂಡ ಚಿದಾನಂದ ಸವದಿ ಮಾತನಾಡಿ, ವೈದ್ಯರಿಲ್ಲದ ಸಮಾಜವನ್ನು ನಾವು ಕಲ್ಪಿಸಿಕೊಳ್ಳುವುದು ಅಸಾಧ್ಯ. ಅವರ ಸೇವೆ ಇಲ್ಲದೆ, ನಮ್ಮ ಆರೋಗ್ಯ ರಕ್ಷಣೆ ಮತ್ತು ಉತ್ತಮ ಜೀವನ ಸಾಧ್ಯವಿಲ್ಲ. ಡಾ.ವಿಜಯ್ ಕುರೆನ್ನವರ ಹಾಗೂ ಡಾ.ಸಂಜಯ ಕುರೆನ್ನವರ ವೈದ್ಯಕೀಯ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ಮತ್ತು ಆರೋಗ್ಯ ಸೇವೆ ಜನ ಮೆಚ್ಚುಗೆಗೆ ಪಾತ್ರವಾಗಿದೆ. ನಮ್ಮ ತಂದೆ ಲಕ್ಷ್ಮಣ ಸಂಗಪ್ಪ ಸವದಿ ಅವರ ಹೆಸರಿನಲ್ಲಿ ಫೌಂಡೇಶನ್ ಆರಂಭಿಸಿದ್ದೇವೆ. ಈ ಫೌಂಡೇಶನ್ ಮೂಲಕ ಅನೇಕ ಬಡ ರೋಗಿಗಳಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಕಾರ್ಯ ಮಾಡಲಾಗುತ್ತಿದೆ. ಇಂದು ಅಥಣಿಯಲ್ಲಿ ಆರಂಭಗೊಂಡಿರುವ ಕೆಎಂಸಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೂ ಇಂತಹ ಸೇವೆ ದೊರಕಲಿ. ಈ ಆಸ್ಪತ್ರೆಯ ವೈದ್ಯರಿಂದ ಗ್ರಾಮೀಣ ಪ್ರದೇಶದ ಬಡ ರೋಗಿಗಳಿಗೆ ಗುಣಮಟ್ಟದ ಸೇವೆಗಳು ದೊರಕಲಿ ಎಂದು ಹಾರೈಸಿದರು.