ಹೊದವಾಡ ಶಾಲೆಯಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮ

KannadaprabhaNewsNetwork |  
Published : Jan 26, 2026, 04:15 AM IST
ಹೊದವಾಡಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತುಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭೇಟಿ ಬಚಾವೋ ಭೇಟಿಪಡಾವೋ ಕಾರ್ಯಕ್ರಮದ ಆಯೋಜಿಸಲಾಯಿತು . | Kannada Prabha

ಸಾರಾಂಶ

ಹೊದವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಕಾರ್‍ಯಕ್ರಮ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಹೊದವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಕಾರ್‍ಯಕ್ರಮ ಆಯೋಜಿಸಲಾಯಿತು.

ಹೊದ್ದೂರು ಗ್ರಾಪಂ ಅಧ್ಯಕ್ಷ ಎಚ್.ಎ. ಹಂಸ ಅಧ್ಯಕ್ಷತೆ ವಹಿಸಿದ ಕಾರ್‍ಯಕ್ರಮದಲ್ಲಿ ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಮಾತನಾಡಿ, ಮಕ್ಕಳು ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಜಿಲ್ಲಾ ಮಹಿಳಾ ಮಿಷನ್‌ ಶಕ್ತಿ ಸಂಯೋಜಕಿ ಮಮತಾ ಮಾತನಾಡಿ, ಹೆಣ್ಣು ಮಕ್ಕಳಿಗೆ 18 ವರ್ಷ ತುಂಬಿದ ಬಳಿಕ, ಗಂಡು ಮಕ್ಕಳಿಗೆ 21 ವರ್ಷ ತುಂಬಿದ ಬಳಿಕ ವಿವಾಹ ನೆರವೇರಿಸಬೇಕು ಎಂದರು.

ಈ ಯೋಜನೆ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಇದು ಕಾರ್‍ಯನಿರ್ವಹಿಸುತ್ತಿದೆ ಎಂದರು.

ಹೊದ್ದೂರು ಗ್ರಾಪಂ ಉಪಾಧ್ಯಕ್ಷ ಕುಸುಮಾವತಿ, ಸದಸ್ಯ ಹಮೀದ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ವತ್ಸಲ, ಮೂರ್ನಾಡು ಕ್ಲಸ್ಟರ್ ಕೇಂದ್ರದ ಸಿ.ಆರ್. ಪಿ. ಉಷಾ, ಹೊದವಾಡ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಶೋಕ್, ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಎಂ.ಟಿ. ರಾಧಮ್ಮ, ಅಂಗನವಾಡಿ ಕಾರ್‍ಯಕರ್ತೆಯರಾದ ಸುಮಾ, ತುಳಸಿ, ಶೃತಿ, ಶೋಭಾ, ಅಂಬ್ರಿನ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುರೇಶ್‌ ಕುಮಾರ್‌ ವಿವಾದಾತ್ಮಕ ಹೇಳಿಕೆ : ಮಹಿಳೆಯರಿಗೆ ಅವಮಾನ ಆರೋಪ- ದೂರು
ಸರ್ಕಾರದಿಂದ ಕುಡುಕರ ಸೃಷ್ಟಿ: ಬಿವೈವಿ