ಜ.21ರಂದು ಕೆಪಿಎಸ್ ಶಾಲೆ ಆವರಣದಲ್ಲಿ ಚಾಲಕರ ಮೆಗಾ ಉದ್ಯೋಗ ಮೇಳ: ಆರ್ .ಯತೀಂದ್ರ

KannadaprabhaNewsNetwork |  
Published : Jan 20, 2024, 02:00 AM IST
18ಕೆಎಂಎನ್ ಡಿ28ಕೆ.ಆರ್ .ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಆರ್. ಯತೀಂದ್ರ ಮಾತನಾಡಿದರು. | Kannada Prabha

ಸಾರಾಂಶ

ಕೆ.ಆರ್.ಪೇಟೆ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಮಾರ್ಗದರ್ಶನದಲ್ಲಿ ಜ.21ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತಾಲೂಕಿನಲ್ಲಿರುವ ವಾಣಿಜ್ಯ ಮತ್ತು ವಾಣಿಜ್ಯೇತರ ವಾಹನ ಚಾಲಕರುಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ತಾಲೂಕಿನ ಆಸಕ್ತರು ಮೇಳದ ಪ್ರಯೋಜನ ಪಡೆದುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಬೆಂಗಳೂರಿನ ಟಾಟಾ ಮೋಟಾರ್ಸ್ ಪ್ರೋವಿಜ್ ಮ್ಯಾನ್ ಸಿಸ್ಟಮ್ ವತಿಯಿಂದ ಪಟ್ಟಣದ ಕೆಪಿಎಸ್ ಶಾಲೆ ಆವರಣದಲ್ಲಿ ಜ.21 ರಂದು ಚಾಲಕರ ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಕಂಪನಿ ಕ್ಲಸ್ಟರ್ ಮುಖ್ಯಸ್ಥ ಆರ್.ಯತೀಂದ್ರ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಎಚ್.ಟಿ.ಮಂಜು ಮಾರ್ಗದರ್ಶನದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತಾಲೂಕಿನಲ್ಲಿರುವ ವಾಣಿಜ್ಯ ಮತ್ತು ವಾಣಿಜ್ಯೇತರ ವಾಹನ ಚಾಲಕರುಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ತಾಲೂಕಿನ ಆಸಕ್ತರು ಮೇಳದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗ್ರಾಮೀಣ ಪ್ರದೇಶದ ವಾಹನ ಚಾಲಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಭಾರತದ ಅತಿದೊಡ್ಡ ವಾಣಿಜ್ಯ ತಯಾರಿಕಾ ಘಟಕವಾದ ಟಾಟಾ ಮೋಟರ್ಸ್ ಈ ಉದ್ಯೋಗ ಮೇಳವನ್ನು ಆಯೋಜಿಸಿದೆ ಎಂದು ತಿಳಿಸಿದರು.

ಬೆಂಗಳೂರು ಮಹಾನಗರದಲ್ಲಿ ವಿದ್ಯುದೀಕೃತ ಸಾರ್ವಜನಿಕ ಸಾರಿಗೆಯನ್ನು ಆರಂಭಿಸುವತ್ತ ದಾಪುಗಾಲು ಇಟ್ಟು ಟಾಟಾ ಮೋಟಾರ್ಸ್ ಅಂಗ ಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಲಿಮಿಟೆಡ್ ಮತ್ತು ಬಿಎಂಟಿಸಿ ನಡುವಿನ ಒಪ್ಪಂದದ ಪ್ರಕಾರ 921 ಅತ್ಯಧುನಿಕ 12೨ ಮೀಟರ್ ಕೆಳ ಮಹಡಿಯ ವಿದ್ಯುತ್ ಬಸ್ ಗಳ ಕಾರ್ಯಚಾಲನೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿಕೊಂಡಿದೆ ಎಂದರು.

500ಕ್ಕೂ ಹೆಚ್ಚು ವಾಣಿಜ್ಯ ಮತ್ತು ವಾಣಿಜ್ಯೇತರ ವಾಹನ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗಳು ಕಂಪನಿಗೆ ಅವಶ್ಯಕತೆ ಇದೆ. ಶಾಸಕ ಹೆಚ್.ಟಿ.ಮಂಜು ಅವರ ಆಸಕ್ತಿಯಿಂದಾಗಿ ತಾಲೂಕಿನ ವಾಣಿಜ್ಯ ವಾಹನಗಳನ್ನು ಚಲಾಯಿಸುತ್ತಿರುವ ಸ್ಥಳೀಯರಿಗಾಗಿ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನ ಆಸಕ್ತ ವಾಣಿಜ್ಯ ವಾಹನ ಚಾಲಕರು ಈ ಮೇಳದಲ್ಲಿ ಪಾಲ್ಗೊಳ್ಳಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆವಿ ಡಿ.ಎಲ್ ಹಾಗೂ ಬ್ಯಾಡ್ಜ್ ಹೊಂದಿರಬೇಕು. ಎರಡು ವರ್ಷಗಳ ಬಸ್ ಅಥವಾ ಟ್ರಕ್ ಚಾಲನೆ ಮಾಡಿದ ಅನುಭವ ಇರಬೇಕು. ಕಂಪನಿಯು ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಂಡಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಹದೇವೇಗೌಡ, ಸುಕಂದರಾಜು, ಪ್ರಜ್ವಲ್, ರಾಹುಲ್, ಪ್ರಶಾಂತ್, ಶಶಾಂಕ್, ಸಚಿನ್ ಕೃಷ್ಣ, ಶಾಸಕರ ಆಪ್ತ ಸಹಾಯಕ ಪ್ರತಾಪ್ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌