- 52 ವರ್ಷಗಳ ವಿವಾದಕ್ಕೆ ತಾರ್ಕಿಕ ಅಂತ್ಯ
ಕನ್ನಡಪ್ರಭ ವಾರ್ತೆ ಮೇಲುಕೋಟೆ (ಮಂಡ್ಯ)
ಮೇಲುಕೋಟೆ ಬೆಟ್ಟದ ಶ್ರೀಯೋಗಾನರಸಿಂಹ ಸ್ವಾಮಿ ದೇವಾಲಯದ ಚಿಕ್ಕಗೋಪುರಕ್ಕೆ ತೆಂಗಲೆನಾಮ ಹಾಕುವ ಮೂಲಕ 52 ವರ್ಷಗಳ ವಿವಾದ ತಾರ್ಕಿಕ ಅಂತ್ಯ ಕಂಡಂತಾಗಿದೆ. ಯೋಗನರಸಿಂಹ ಸ್ವಾಮಿ ದೇಗುಲದ ಚಿಕ್ಕಗೋಪುರವನ್ನು1972ರಲ್ಲಿ ಜೀರ್ಣೋದ್ಧಾರದ ವೇಳೆ ಪಾಂಡವಪುರ ತಹಸೀಲ್ದಾರ್ ಆದೇಶದಂತೆ ತೆಂಗಲೆನಾಮ ತೆಗೆದು ವಡಗಲೆ ನಾಮ ಹಾಕಲಾಗಿತ್ತು.ಚಿಕ್ಕಗೋಪುರಕ್ಕೆ ವಡಗಲೆನಾಮ ಹಾಕಿದ್ದರಿಂದ ವಿವಾದವಾಗಿ ಪ್ರಕರಣ 1973ರಲ್ಲಿ ಹೈಕೋರ್ಟ್ಗೆ ತಲುಪಿತ್ತು. ಹೈಕೋರ್ಟ್ ಪ್ರಕರಣವನ್ನು ಪಾಂಡವಪುರ ಕಿರಿಯ ಸಿವಿಲ್ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವಂತೆ ಆದೇಶಿಸಿತ್ತು.
ಮೈಸೂರು ಮಹಾರಾಜ ಶ್ರೀಕೃಷ್ಣರಾಜ ಒಡೆಯರ್ ದೇವಾಲಯ ತೆಂಗಲೆ ಸಂಪ್ರದಾಯದ್ದಾಗಿದ್ದು ದೇವರಿಗೆ ಮತ್ತು ಗೋಪುರಕ್ಕೆ ತೆಂಗಲೆನಾಮ ಹಾಕಬೇಕು ಎಂದು 1814ರ ಸೆ.5ರಂದು ಹುಕುಂ ಹೊರಡಿಸಿದ್ದರು. ಆದರೆ, ಕಲ್ಕತ್ತ ವಿಷ್ಣುದೇವಾಲಯಗಳ ಜೀರ್ಣೋದ್ಧಾರ ಟ್ರಸ್ಟ್ ಬೆಟ್ಟದ ಜೀರ್ಣೋದ್ಧಾರ ವೇಳೆ ಪರಕಾಲಮಠದ ಪ್ರಭಾವದಿಂದ 1972ರ ಡಿ.30ರಂದು ಪಾಂಡವಪುರ ತಹಸೀಲ್ದಾರ್ ಮೂಲಕ ಚಿಕ್ಕಗೋಪುರಕ್ಕೆ ವಡಗಲೆನಾಮ ಹಾಕಿಸಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗಿ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
ಪಡಿಸಿದ್ದ ತೆಂಗಲೆ ಸಂಪ್ರದಾಯದ ಆರ್.ಕೃಷ್ಣಯ್ಯಂಗಾರ್, ಅಳಹಿಯಮನವಾಳನ್ ಹಾಗೂ ಅಧ್ಯಾಪಕರು ನಿಯಮಬಾಹಿರವಾದ ತಹಸೀಲ್ದಾರ್ ಆದೇಶ ರದ್ದು ಮಾಡಿ ತೆಂಗಲೆ ನಾಮ ಅಳವಡಿಸಬೇಕು ಎಂದು 1973ರಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿದಾರರಾದ ಕೃಷ್ಣಯ್ಯಂಗಾರ್ ಅಳಹಿಯಮಣವಾಳನ್, ಪ್ರತಿವಾದಿಗಳಾಗಿದ್ದ ಕಸ್ತೂರಿ ನಾರಾಯಣ ಅಯ್ಯಂಗಾರ್ ಜಿ.ವಿಎನ್ ಆಚಾರ್ ನಿಧನ ಹೊಂದಿದ್ದಾರೆ.