ಸಹಕಾರ ಸಂಘಗಳ ಅಭಿವೃದ್ಧಿಗೆ ಸದಸ್ಯರ ಸಹಕಾರ ಮುಖ್ಯ: ಅರ್ಚನಾ

KannadaprabhaNewsNetwork |  
Published : Sep 29, 2025, 01:04 AM IST
27ಕೆಎಂಎನ್‌ಡಿ-4ಮಂಡ್ಯ ತಾಲೂಕಿನ ಲಾಳನಕೆರೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವತಿಯಿಂದ ಸಂಘದ ಆವರಣದಲ್ಲಿ ನಡೆದ 14ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.  | Kannada Prabha

ಸಾರಾಂಶ

ಪ್ರತಿನಿತ್ಯ ಒಕ್ಕೂಟಕ್ಕೆ ಲಕ್ಷಾಂತರ ಲೀಟರ್ ಹಾಲು ಸರಬರಾಜುತ್ತಿದ್ದು, ಇದನ್ನು ಸಂಸ್ಕರಿಸಿ ಮಾರುಕಟ್ಟೆಗೆ ಹಾಲು ಸೇರಿದಂತೆ ಹಾಲಿನ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಮೂಲಕ ಆರ್ಥಿಕವಾಗಿ ಸ್ವಾವಲಂಭನೆ ಸಾಧಿಸಲಾಗುತ್ತಿದೆ. ಇದಕ್ಕೆ ಸದಸ್ಯರೂ ಸಹ ಒಳ್ಳೆಯ ಹಾಲನ್ನು ಸರಬರಾಜು ಮಾಡಿದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಹೈನುಗಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಹಕಾರ ಸಂಘಗಳ ಅಭಿವೃದ್ಧಿಗೆ ಪ್ರತಿಯೊಬ್ಬ ಸದಸ್ಯರ ಸಹಕಾರ ಬಹಳ ಮುಖ್ಯವಾಗಿದೆ ಮಂಡ್ಯ ಹಾಲು ಒಕ್ಕೂಟದ ಮಾರ್ಗ ವಿಸ್ತರಣಾಧಿಕಾರಿ ಎಸ್.ಎನ್. ಅರ್ಚನಾ ತಿಳಿಸಿದರು.

ತಾಲೂಕಿನ ಲಾಳನಕೆರೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಿಂದ ನಡೆದ 14ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಮುಖವಾಗಿ ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವುದು ಬಹು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸದಸ್ಯರೂ ಉತ್ತಮ ದರ್ಜೆಯ ಹಾಲನ್ನು ಸರಬರಾಜು ಮಾಡಬೇಕು ಎಂದರು.

ಪ್ರತಿನಿತ್ಯ ಒಕ್ಕೂಟಕ್ಕೆ ಲಕ್ಷಾಂತರ ಲೀಟರ್ ಹಾಲು ಸರಬರಾಜುತ್ತಿದ್ದು, ಇದನ್ನು ಸಂಸ್ಕರಿಸಿ ಮಾರುಕಟ್ಟೆಗೆ ಹಾಲು ಸೇರಿದಂತೆ ಹಾಲಿನ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಮೂಲಕ ಆರ್ಥಿಕವಾಗಿ ಸ್ವಾವಲಂಭನೆ ಸಾಧಿಸಲಾಗುತ್ತಿದೆ. ಇದಕ್ಕೆ ಸದಸ್ಯರೂ ಸಹ ಒಳ್ಳೆಯ ಹಾಲನ್ನು ಸರಬರಾಜು ಮಾಡಿದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದರು.

ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಲಿಂಗಮ್ಮ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರ ಸಂಘಗಳಲ್ಲಿ ಸದಸ್ಯರ ಸಹಕಾರ ಇದ್ದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಒಗ್ಗಟ್ಟಿನ ಮೂಲಕ ನಮ್ಮ ಸಂಘವನ್ನು ಮಾದರಿಯನ್ನಾಗಿಸಲು ಎಲ್ಲರೂ ಕೈ ಜೋಡಿಸಬೇಕು ಎಂದರು.

ಮದ್ದೂರು ಎಪಿಎಂಸಿ ಮಾಜಿ ನಿರ್ದೇಶಕ ಶಿವಮಲ್ಲಪ್ಪ ಮಾತನಾಡಿ, ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಹಾಕಿದರೆ ಸಂಘವೂ ಮುನ್ನಡೆ ಸಾಧಿಸುತ್ತದೆ. ಕಳಪೆ ಗುಣಮಟ್ಟದ ಹಾಲನ್ನು ಹಾಕಿದರೆ ಸಂಘ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತದೆ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.

ರೈತರ ಸಹಕಾರ ಸಂಸ್ಥೆಗಳಲ್ಲಿ ಸದಸ್ಯರಾಗುವ ಮೂಲಕ ಸಂಘವನ್ನು ಬೆಳೆಸಬೇಕು. ಜೊತೆಗೆ ತಾವೂ ಸಹ ಆರ್ಥಿಕವಾಗಿ ಸ್ವಾವಲಂಭನೆ ಸಾಧಿಸಬೇಕು. ಹಾಗಾದಾಗಾ ಮಾತ್ರ ನಮ್ಮ ಗ್ರಾಮವೂ ಅಭಿವೃದ್ಧಿಯ ಪಥದತ್ತ ಸಾಗುತ್ತದೆ ಎಂದು ಅಭಿಪ್ರಾಯಿಸಿದರು.

ಸಂಘದ ಉಪಾಧ್ಯಕ್ಷೆ ಬಿ.ಟಿ.ರೂಪ, ನಿರ್ದೇಶಕರಾದ ನಂಜಮ್ಮಣಿ, ಕೆಂಡಗಣ್ಣಮ್ಮ, ಸುನಂದ, ಮಂಜುಳಾ, ಮಹದೇವಮ್ಮ, ಸರ್ವಮಂಗಳ, ಕಾರ್ಯದರ್ಶಿ ಗೌರಮಣಿ ಇತರರು ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ಸಿಲೋಗನಾ ಹೆಸರಿನಲ್ಲಿ ವಿಜಯ ದಶಮಿ ಆಚರಿಸುವ ದನಗರ ಗೌಳಿಗರು
ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ