ಸದಸ್ಯರ ಸಹಭಾಗಿತ್ವ ಮುಖ್ಯ: ಅಮೆ ದಮಯಂತಿ

KannadaprabhaNewsNetwork |  
Published : Mar 20, 2025, 12:00 AM IST
ಆಮೆ ದಮಯಂತಿ           | Kannada Prabha

ಸಾರಾಂಶ

ಸಂಘ ಸಂಸ್ಥೆಯಲ್ಲಿ ಪ್ರತಿಯೊಬ್ಬ ಸದಸ್ಯರು ಸದೃಢ ಕಟ್ಟಡದ ಒಂದೊಂದು ಕಂಬಗಳಿದ್ದಂತೆ. ಆದುದರಿಂದ ಪ್ರತಿಯೊಬ್ಬ ಸದಸ್ಯರ ಸಹಭಾಗಿತ್ವ ಮುಖ್ಯ ಎಂದು ಗಣ್ಯರು ಹೇಳಿದರು.

ಕನ್ನಡಪ್ರಬ ವಾರ್ತೆ ನಾಪೋಕ್ಲು

ಸಂಘ ಸಂಸ್ಥೆಯಲ್ಲಿ ಪ್ರತಿಯೊಬ್ಬ ಸದಸ್ಯರು ಸದೃಢ ಕಟ್ಟಡದ ಒಂದೊಂದು ಕಂಬಗಳಿದ್ದಂತೆ. ಆದುದರಿಂದ ಪ್ರತಿಯೊಬ್ಬ ಸದಸ್ಯರ ಸಹಭಾಗಿತ್ವ ಮುಖ್ಯ ಎಂದು ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ ಅವರು ಹೇಳಿದರು.

ಅವರು ಇಲ್ಲಿಗೆ ಸಮೀಪದ ಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ ಚೇರಂಬಾಣೆ ಗೌಡ ಮಹಿಳಾ ನೂತನ ಒಕ್ಕೂಟವನ್ನು (ಅನಾವರಣ) ಉದ್ಘಾಟನೆ ಗೊಳಿಸಿ ಹಾಗೂ ನೂತನ ಸಮಿತಿಗೆ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಪ್ರತಿಯೊಬ್ಬ ಮಹಿಳೆಯಲ್ಲಿ ವಿವಿಧ ಕಲಾ ಪ್ರತಿಭೆಗಳಿರುತ್ತವೆ. ಒಂದು ಕಡ್ಡಿಯಿಂದ ಕಸ ಗುಡಿಸಲಾಗದು ಒಗ್ಗಟ್ಟಿನಲ್ಲಿ ಬಲವಿದೆ. ಸದಸ್ಯರು ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತ ರಾಗಬೇಕು ಎಂದರು..

ಒಕ್ಕೂಟದ ಸದಸ್ಯತ್ವ ನೋಂದಣಿ ಪುಸ್ತಕವನ್ನು ಚೇರಂಬಾಣೆ ಗೌಡ ಸಮಾಜದ ನಿರ್ದೇಶಕರಾದ ನೆಯ್ಯಣಿ ಹೇಮಲತಾ ತಾರೇಂದ್ರ ಅವರು ಅನಾವರಣಗೊಳಿಸಿ ಮಾತನಾಡಿ ಬಹಳ ವರ್ಷಗಳ ಮನವಿಯ ಫಲಶ್ರುತಿ ಯಾಗಿ ನೂತನ ಒಕ್ಕೂಟ ರಚನೆಯಾಗಿದೆ. 16 ಗ್ರಾಮಗಳ ಸಮ್ಮಿಲನ ಈ ಒಕ್ಕೂಟವಾಗಿದ್ದು ಉತ್ತಮ ಕಾರ್ಯ ಚಟುವಟಿಕೆಗಳ ಮೂಲಕ ಪ್ರಗತಿ ಕಾಣಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬೈಮನ ಅನುಜಾ ಹರೀಶ್ ಅವರು ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ನೂತನ ಒಕ್ಕೂಟಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಚೇರಂಬಾಣೆ ವ್ಯಾಪ್ತಿಗೆ ಬರುವ ಎಲೆ ಮರೆಯಲ್ಲಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಒಕ್ಕೂಟದ ಮೂಲಕ ವೇದಿಕೆ ಕಲ್ಪಿಸಿ ಕೊಡಲಾಗುವುದು, ತರಬೇತಿ ಶಿಬಿರಗಳು ಸೇರಿದಂತೆ ಸಮಾಜಮುಖಿ ಕಾರ್ಯ ಗಳೊಂದಿಗೆ ಒಕ್ಕೂಟವನ್ನು ನಡೆಸಲಾಗುವುದು. ಆದುದರಿಂದ ಸರ್ವರೂ ಸಮಾನ ಮನಸ್ಕರಾಗಿ ಶ್ರಮಿಸಬೇಕಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಹೊಸೊಕ್ಲು ಲತಾ ಮೊಣ್ಣಪ್ಪ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು. ಇದೇ ಸಂದರ್ಭ ನೂತನ ಒಕ್ಕೂಟದ ಸಮಿತಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.

ಕಾಳೇರಮ್ಮನ ರಶಿ ಅಶೋಕ್ ಪ್ರಾರ್ಥಿಸಿದರು. ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ಸ್ವಾಗತಿಸಿದರು. ಬೈಮನ ಜ್ಯೋತಿ ತಿಮ್ಮಯ್ಯ ಕಾರ್ಯಕ್ರಮ ನಿರೂಪಿಸಿ ಕೊಡಪಾಲು ತೀರ್ಥ ಗಣಪತಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ: ಸಂಸದ ಡಾ.ಕೆ.ಸುಧಾಕರ್
ಕುವೆಂಪು ಪಂಚಶೀಲ ತತ್ವಗಳು ಎಲ್ಲ ಕಾಲಕ್ಕೂ ಬೇಕು