ವಿಬಿ ಜಿ ರಾಮ್‌ ಜಿ ಯೋಜನೆಗೆ ಸದಸ್ಯರ ಮಿಶ್ರ ಪ್ರತಿಕ್ರಿಯೆ

KannadaprabhaNewsNetwork |  
Published : Jan 27, 2026, 02:30 AM IST
26 ಕ.ಟಿ.ಇ.ಕೆ ಚಿತ್ರ 1 : ಟೇಕಲ್‌ನ ಕೆ.ಜಿ.ಹಳ್ಳಿ ಗ್ರಾ.ಪಂ.ನಲ್ಲಿ ನಡೆದ ವಿಶೇಷ ಗ್ರಾಮಸಭೆ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಎಂ.ಮುರುಗೇಶ ಅಧ್ಯಕ್ಷತೆಯಲ್ಲಿ ನಡೆಯಿತು. ಚಿತ್ರದಲ್ಲಿ ಉಪಾಧ್ಯಕ್ಷೆ ಮಮತಾಶಶಿಧರ ಇದ್ದಾರೆ. | Kannada Prabha

ಸಾರಾಂಶ

ಸೂಕ್ತ ನಿರ್ದೇಶನ ನೀಡುವಂತೆ ಪಂಚಾಯತ್ ರಾಜ್ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದ ಮೇರೆಗೆ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆದು ಬಹುತೇಕ ಸದಸ್ಯರು ನರೇಗಾ ಯೋಜನೆ ಬೇಕು ಎನ್ನುತ್ತಾರೆ.

ಕನ್ನಡಪ್ರಭ ವಾರ್ತೆ ಟೇಕಲ್

ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ದೇಶಾದ್ಯಂತ ಜಾರಿಯಲ್ಲಿತ್ತು. ಇದನ್ನು ಕೇಂದ್ರ ಸರ್ಕಾರವು ವಿಕಸಿತ್ ಭಾರತ್ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆ ಎಂದು ಹೊಸದಾಗಿ ಜಾರಿಗೆ ತಂದಿರುವುದನ್ನು ಗಣರಾಜ್ಯೋತ್ಸವ ದಿನವಾದ ಇಂದು ಎಲ್ಲಾ ಗ್ರಾಪಂಗಳಲ್ಲಿ ವಿಶೇಷ ಗ್ರಾಮಸಭೆ ಆಯೋಜಿಸಲಾಗಿತ್ತು.

ಸೂಕ್ತ ನಿರ್ದೇಶನ ನೀಡುವಂತೆ ಪಂಚಾಯತ್ ರಾಜ್ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದ ಮೇರೆಗೆ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆದು ಬಹುತೇಕ ಸದಸ್ಯರು ನರೇಗಾ ಯೋಜನೆ ಬೇಕು ಎನ್ನುತ್ತಾರೆ ಮತ್ತು ಕೆಲವು ಸದಸ್ಯರು ಕೇಂದ್ರ ಸರ್ಕಾರ ಹೊಸದಾಗಿ ತಂದಿರುವ ರಾಮ್‌ ಜಿ ಯೋಜನೆಯ ಜಾರಿಗೆ ಬರಲಿ ಎಂಬ ಅಭಿಪ್ರಾಯವು ಚರ್ಚೆಗಳಾಗಿವೆ.ಇನ್ನೂ ಕೆಲವು ಮಂದಿ ನರೇಗಾ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ 100 ದಿನ ಕೆಲಸ ಒದಗಿಸಲಾಗಿತ್ತು. ಹೊಸ ಯೋಜನೆಯಲ್ಲಿ 125 ದಿನಗಳ ಕೆಲಸ ನೀಡುತ್ತಾರೆ ಮತ್ತು ದಿನ ಕೂಲಿಯು ಹೆಚ್ಚಳವಾಗುತ್ತಿದೆ. ಇದರಿಂದ ಕೂಲಿ ಕಾರ್ಮಿಕರಿಗೆ ವಾರ್ಷಿಕವಾಗಿ 40 ಸಾವಿರಕ್ಕೂ ಹೆಚ್ಚು ಹಣ ದೊರೆಯುತ್ತದೆ ಎನ್ನುತ್ತಾರೆ. ಒಟ್ಟಾರೆ ಈ ವಿಷಯದ ಬಗ್ಗೆ ಗ್ರಾಪಂ ಸದಸ್ಯರು ಕೆಲವು ಕಡೆ ಹೊಸ ಯೋಜನೆಗೆ ಹಸಿರು ನಿಶಾನೆ ಕೊಟ್ಟರೆ ಇನ್ನೂ ಕೆಲವು ಕಡೆ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ.

ಅದರಂತೆಯೇ ಟೇಕಲ್, ಕೆ.ಜಿ.ಹಳ್ಳಿ, ಬನಹಳ್ಳಿ, ಕೊಂಡಶೆಟ್ಟಹಳ್ಳಿ, ಹುಳದೇನಹಳ್ಳಿ, ನೂಟುವೆ, ಚಿಕ್ಕಕುಂತೂರು ಗ್ರಾಪಂಗಳಲ್ಲಿ ಕೆಲವು ಪಿಡಿಒಗಳು ಹಾಗೂ ಪಂಚಾಯಿತಿಯ ಅಧ್ಯಕ್ಷರನ್ನು ಸಂಪರ್ಕಿಸಿದಾಗ ಅವರು ಸಹ ಸದಸ್ಯರ ಅಭಿಪ್ರಾಯವನ್ನು ಪಡೆದು ಅಂತಿಮವಾಗಿ ತೀರ್ಮಾನಿಸಲಾಗುತ್ತದೆ ಎಂದು ಇನ್ನೂ ಕೆಲವು ಕಡೆ ಕೆಲವರಿಗೆ ಮಾಹಿತಿ ಕೊರತೆಯಿದ್ದು ಚರ್ಚೆಗೆ ಗ್ರಾಸವಾಗಿದೆ.

ಹೊಸ ಯೋಜನೆಯಿಂದ ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಅನುಕೂಲವಾಗುತ್ತದೋ, ಕೂಲಿ ಕಾರ್ಮಿಕರಿಗೆ ಕೆಲಸ ದೊರಕಿಸಿಕೊಳ್ಳಲಾಗುತ್ತದೆಯೋ ಅಥವಾ ಪಂಚಾಯಿತಿಗೆ ಆದಾಯ/ಕೆಲಸ ಸಿಗುವಂತಾಗುತ್ತದೆಯೋ ಎಂಬುದು ಕಾದು ನೋಡಬೇಕಿದೆ. ಒಟ್ಟಾರೆ ಇನ್ನೂ ಅನೇಕ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳಿಗೆ ವಿಕಸಿತ್ ಭಾರತ್ ಬಗ್ಗೆ ಸಂಪೂರ್ಣ ಮಾಹಿತಿ ಕೊರತೆ ಎದ್ದು ಕಾಣುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

₹400 ಕೋಟಿ ದರೋಡೆ ಕೇಸ್‌ನ ಸಂಭಾಷಣೆ ಆಡಿಯೋ ವೈರಲ್‌!
ಇಂದಿನಿಂದ ಮತ್ತೆ ಕಲಾಪ : ಭಾರೀ ಕೋಲಾಹಲ ನಿರೀಕ್ಷೆ