ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಶಾಂತಿನಗರದ ಶ್ರೀ ಸಾಯಿ ಮಂದಿರದಲ್ಲಿ ನಡೆದ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿಯೇ ಪಾಂಡವಪುರ ತಾಲೂಕಿನಲ್ಲಿ ಪ್ರಪ್ರಥಮವಾಗಿ ಕೆಂಪೇಗೌಡ ಸಹಕಾರ ಸಂಘ ಸ್ಥಾಪನೆಯಾಗಿದೆ. ಹೀಗಾಗಿ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬ ಸದಸ್ಯರು ಶ್ರಮಿಸಬೇಕು ಎಂದು ಮನವಿ ಮಾಡಿದರು.
ವಿಜಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎನ್.ಚಲುವೇಗೌಡ ಮಾತನಾಡಿ, ಬಹಳಷ್ಟು ಸಹಕಾರ ಸಂಘಗಳು ಹುಟ್ಟಿಕೊಳ್ಳುತ್ತವೆ. ಆದರೆ, ಕೆಲವು ಸಣ್ಣ ತಪ್ಪುಗಳಿಂದಾಗಿ ಸಂಘಗಳು ಸ್ಥಗಿತವಾಗುತ್ತಿವೆ. ಈ ಸಂಘವನ್ನು ಆ ರೀತಿ ಮಾಡದೇ ಉನ್ನತ ಮಟ್ಟದಲ್ಲಿ ಅಭಿವೃದ್ಧಿಗೊಳಿಸಬೇಕಿದೆ ಎಂದರು.ಒಕ್ಕಲಿಗ ಜನಾಂಗದ ಸಮುದಾಯಕ್ಕೆ ಏನಾದರೂ ಅನುಕೂಲ ಮಾಡಿಕೊಡಬೇಕು ಎಂಬ ಸದುದ್ದೇಶದಿಂದ ಕೆಂಪೇಗೌಡ ಪತ್ತಿನ ಸಹಕಾರ ಸಂಘವನ್ನು ಸ್ಥಾಪನೆ ಮಾಡಿರುವುದು ಶ್ಲಾಘನೀಯ. ಆದರೆ ಈ ಸಂಘದಿಂದ ಜನಾಂಗದ ಬಡ ಜನರ ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯಕ್ಕೆ ಅನುಕೂಲವಾಗುವ ರೀತಿ ಸಹಾಯ ಮಾಡಬೇಕು ಎಂದು ತಿಳಿಸಿದರು.