ಹಿಂದು ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಸ್ಮರಣೆ

KannadaprabhaNewsNetwork |  
Published : Feb 20, 2024, 01:46 AM IST
ಶಿವಾಜಿ ಸರ್ಕಲ್ ನಲ್ಲಿ ಶಿವಾಜಿ ಜಯಂತಿ ಆಚರಿಸಲಾಯಿತು. | Kannada Prabha

ಸಾರಾಂಶ

ವಿಜಯಪುರ: ಶಿವಾಜಿ ಮಾಹಾರಾಜರು ಅಪ್ರತಿಮ ದೇಶಭಕ್ತರು, ಹಿಂದು ಸಾಮ್ರಾಜ್ಯದ ಉಳಿವಿಗಾಗಿ ನಿರಂತರ ಹೋರಾಟ ಮಾಡಿದ್ದು, ಮೊಘಲರಿಗೆ ಸಿಂಹಸ್ವಪ್ನರಾಗಿ ಕಾಡುವ ಮೂಲಕ ದೇಶದ ಸಂಸ್ಕೃತಿಯನ್ನು ಉಳಿಸಿದ್ದಾರೆ. ಅಂತಹ ವೀರ ಸಾಮ್ರಾಟನಿಗೆ ಗೌರವ ಅರ್ಪಿಸುತ್ತಿದ್ದೇವೆ. ಇದು ನಮ್ಮ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಅಪ್ಪಾಸಹೇಬ ಪಟ್ಟಣಶೆಟ್ಟಿ ಹೇಳಿದರು.

ವಿಜಯಪುರ: ಶಿವಾಜಿ ಮಾಹಾರಾಜರು ಅಪ್ರತಿಮ ದೇಶಭಕ್ತರು, ಹಿಂದು ಸಾಮ್ರಾಜ್ಯದ ಉಳಿವಿಗಾಗಿ ನಿರಂತರ ಹೋರಾಟ ಮಾಡಿದ್ದು, ಮೊಘಲರಿಗೆ ಸಿಂಹಸ್ವಪ್ನರಾಗಿ ಕಾಡುವ ಮೂಲಕ ದೇಶದ ಸಂಸ್ಕೃತಿಯನ್ನು ಉಳಿಸಿದ್ದಾರೆ. ಅಂತಹ ವೀರ ಸಾಮ್ರಾಟನಿಗೆ ಗೌರವ ಅರ್ಪಿಸುತ್ತಿದ್ದೇವೆ. ಇದು ನಮ್ಮ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಅಪ್ಪಾಸಹೇಬ ಪಟ್ಟಣಶೆಟ್ಟಿ ಹೇಳಿದರು. ನಗರದ ಶಿವಾಜಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 394 ನೇ ಜಯಂತಿ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರತಿಮ ದೇಶ ಭಕ್ತ ಶಿವಾಜಿಯ ಆದರ್ಶಗಳನ್ನು ನಮ್ಮ ಮಕ್ಕಳಿಗೆ ತಿಳಿಸಬೇಕು. ಅವರಲ್ಲಿದ್ದ ಶೌರ್ಯ, ಸಾಹಸದ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿಂದು ಸಾಮ್ರಾಜ್ಯದ ರಕ್ಷಣೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಭರತ ಭೂಮಿಯನ್ನು ರಕ್ಷಣೆ ಮಾಡಿದ್ದಾರೆ. ಅಂತಹ ವೀರ ಸಾಮ್ರಾಟನ ದೇಶ ಭಕ್ತಿಯನ್ನು ನಾವೆಲ್ಲ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ, ಜಿಪಂ ಸಿಇಒ ರಿಷಿ ಆನಂದ, ರಾಮನಗೌಡ ಪಾಟೀಲ ಯತ್ನಾಳ, ಬಂಜಾರ ಧರ್ಮ ಗುರು ಗೋಪಾಲ ಮಾಹಾರಾಜರು, ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ಅಶೋಕ ನ್ಯಾಮಗೊಂಡ, ರಾಹುಲ ಜಾಧವ, ಉದ್ಯಮಿ ಪ್ರೇಮ ಭಾಟಿ, ಮರಾಠಾ ಸಮಾಜದ ಅಧ್ಯಕ್ಷ ವಿಜಯ ಚವ್ಹಾಣ, ದಲಿತ ಮುಖಂಡ ಅಡಿವೆಪ್ಪ ಸಾಲಗಲ, ಪ್ರಭಾಕರ ಭೋಸಲೆ, ತಾನಾಜಿ ಜಾಧವ, ಸದಾಶಿವ ಪವಾರ, ಖಂಡು ಚವ್ಹಾಣ, ಕಿಶೋರ ಧೋಖಡೆ, ವಿಜಯ ಪವಾರ, ಕಿರಣ ಮೊರೆ, ಅಕ್ಷಯ ಚಿತ್ರಗಾರ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ