ಗ್ರಾಮೀಣ ಬ್ಯಾಂಕುಗಳ ವಿಲೀನ: ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

KannadaprabhaNewsNetwork |  
Published : Nov 07, 2025, 02:30 AM IST
ಗ್ರಾಮೀಣ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯಿಂದಾಗಾಗುತ್ತಿರುವ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರು ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಗ್ರಾಮೀಣ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯಿಂದಾಗಿ ಸಿಬ್ಬಂದಿಯ ದಕ್ಷತೆ ಮತ್ತು ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೀಡಲಾದ ಮನವಿಗೆ ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರು ನಗರದಲ್ಲಿ ಗುರುವಾರ ಎರಡು ದಿನಗಳ ಧರಣಿ ಆರಂಭಿಸಿದರು.

ಬಳ್ಳಾರಿ: ಗ್ರಾಮೀಣ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯಿಂದಾಗಿ ಸಿಬ್ಬಂದಿಯ ದಕ್ಷತೆ ಮತ್ತು ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೀಡಲಾದ ಮನವಿಗೆ ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರು ನಗರದಲ್ಲಿ ಗುರುವಾರ ಎರಡು ದಿನಗಳ ಧರಣಿ ಆರಂಭಿಸಿದರು.

ಲಿಮಿಟೇಷನ್‌ ಕಾಯ್ದೆಯನ್ನು ಉಲ್ಲಂಘಿಸುವ ಮತ್ತು ಸಿಬ್ಬಂದಿಗೆ ಕಿರುಕುಳ ನೀಡುವ ಕಾನೂನುಬಾಹಿರ, ಅಪ್ರಾಯೋಗಿಕ ಸಾಲದ ಸ್ವೀಕೃತಿ (ಎಒಡಿ/ಎಲ್‌ಒಆರ್‌) ಕಾರ್ಯವಿಧಾನಗಳನ್ನು ರದ್ದು ಮಾಡಬೇಕು. ಸಾಫ್ಟ್‌ವೇರ್ ಬದಲಾವಣೆ ನಂತರದ ಸಮಸ್ಯೆಗಳನ್ನು ಪರಿಹರಿಸಬೇಕು. ಅವೈಜ್ಞಾನಿಕ ‘ದಿನವಹಿ’ (ಎಂಡ್‌ ಆಪ್‌ ದ ಡೇ/ ಇಒಡಿ ) ಒತ್ತಡ, ತಡರಾತ್ರಿಯ ಕೆಲಸ ಮತ್ತು ಸುರಕ್ಷತೆ ಸಮಸ್ಯೆ, ವಿಶೇಷವಾಗಿ ಮಹಿಳಾ ಸಿಬ್ಬಂದಿ ಸುರಕ್ಷತೆ ವಿಚಾರವಾಗಿ ಎದ್ದಿರುವ ಸಮಸ್ಯೆಗಳನ್ನು ಇತ್ಯರ್ಥ ಮಾಡಬೇಕು. ಶಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದೆ, ರಚನಾತ್ಮಕ ತರಬೇತಿ ಕೊರತೆ ನೀಗಿಸಬೇಕು. ತಾರತಮ್ಯ ನಿವಾರಣೆ ಮಾಡಬೇಕು. ಸಿಬ್ಬಂದಿ ಕಲ್ಯಾಣ ನೀತಿಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಮುಷ್ಕರವು ಸಂಸ್ಥೆಯ ವಿರುದ್ಧವಲ್ಲ, ಆದರೆ ಸಂಸ್ಥೆಗಾಗಿ, ಸಿಬ್ಬಂದಿ ಮತ್ತು ಸುಸ್ಥಿರ ಕಾರ್ಯಾಚರಣೆಗಾಗಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಸ್ಥಿರ, ಪರಿಣಾಮಕಾರಿ ಮತ್ತು ಗ್ರಾಹಕ ಸ್ನೇಹಿ ಬ್ಯಾಂಕಿಂಗ್ ವ್ಯವಸ್ಥೆಗಾಗಿ ನೌಕರರು, ಅಧಿಕಾರಿಗಳು ಹೋರಾಡುತ್ತಿದ್ದಾರೆ. ಈ ಹೋರಾಟದಲ್ಲಿ ಎಲ್ಲ ಸಿಬ್ಬಂದಿ, ಅಧಿಕಾರಿಗಳು ಭಾಗವಹಿಸಬೇಕು. ಇಂದಿನ ತ್ಯಾಗ ನಾಳಿನ ಘನತೆ, ದಕ್ಷತೆ, ಸುರಕ್ಷತೆ ಮತ್ತು ಸೇವಾ ಗುಣಮಟ್ಟವನ್ನು ರಕ್ಷಿಸುತ್ತವೆ ಎಂದು ಹೇಳಿದರು.

ಕೆಜಿಬಿಒಎಫ್ ಅಧ್ಯಕ್ಷ ಲಿಂಗರಾಜ್ ರೊಡ್ಡನವರ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸಾಗರ ಶಹಾ ಮಾತನಾಡಿದರು. ಕೆಜಿಬಿಇಎಫ್‌ ಅಧ್ಯಕ್ಷ ಅಂಬೇಕರ್‌, ಪ್ರಧಾನ ಕಾರ್ಯದರ್ಶಿ ಸಾಗರ ಜಾಧವ್, ಬ್ಯಾಂಕ್‌ನ ವಿವಿಧ ಶಾಖೆಗಳ ಸಿಬ್ಬಂದಿ, ಅಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಫೆಡರೇಶನ್ (ಕೆಜಿಬಿಒಎಫ್) ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಫೆಡರೇಶನ್ (ಕೆಜಿಬಿಇಎಫ್), ಕರ್ನಾಟಕ ಗ್ರಾಮೀಣ ಬ್ಯಾಂಕಿನ ನೌಕರರು ಜಂಟಿಯಾಗಿ ಪ್ರತಿಭಟನೆ ಸಂಘಟಿಸಿದ್ದು, ಎರಡು ದಿನಗಳ ಕಾಲ ಪ್ರತಿಭಟನೆ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾರವಾಡ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ
ಜನರ ಆರ್ಥಿಕ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆ ಸಹಾಯಕ: ರವೀಂದ್ರ ಕಲಬುರ್ಗಿ