ಸಮಾಜಮುಖಿ ವ್ಯಕ್ತಿತ್ವದ ಮೇರು ಪರ್ವತ ಭೀಮಣ್ಣ ಖಂಡ್ರೆ

KannadaprabhaNewsNetwork |  
Published : Jan 18, 2026, 01:30 AM IST
 | Kannada Prabha

ಸಾರಾಂಶ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ತುಮಕೂರು ಜಿಲ್ಲಾ ಹಾಗೂ ನಗರ, ತಾಲೂಕು ಘಟಕಗಳ ವತಿಯಿಂದ ಏರ್ಪಡಿಸಿದ್ದ ಲಿಂಗೈಕ್ಯ ಭೀಮಣ್ಣ ಖಂಡ್ರೆಯವರ ಶ್ರದ್ಧಾಂಜಲಿ ಸಭೆ

ಕನ್ನಡಪ್ರಭ ವಾರ್ತೆ, ತುಮಕೂರು

ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳವಳಿಯ ನೇತಾರರಾಗಿ, ಹೈದ್ರಾಬಾದ್ ಕರ್ನಾಟಕದ ಸಮಗ್ರ ಬೆಳವಣಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿತ್ವ ಭೀಮಣ್ಣ ಖಂಡ್ರೆಯವರದ್ದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ತುಮಕೂರು ಜಿಲ್ಲಾಧ್ಯಕ್ಷ ಡಾ. ಎಸ್.ಪರಮೇಶ್ ತಿಳಿಸಿದರು. ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ತುಮಕೂರು ಜಿಲ್ಲಾ ಹಾಗೂ ನಗರ, ತಾಲೂಕು ಘಟಕಗಳ ವತಿಯಿಂದ ಏರ್ಪಡಿಸಿದ್ದ ಲಿಂಗೈಕ್ಯ ಭೀಮಣ್ಣ ಖಂಡ್ರೆಯವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಅಧ್ಯಕ್ಷರಾಗಿದ್ದ ಖಂಡ್ರೆಯವರ ಸಾಧನೆ ಅವಿಸ್ಮರಣೀಯ. ಮಹಾಸಭೆಯ ಅಧ್ಯಕ್ಷರಾಗಿ ಸಮಾಜದ ಸಂಘಟನೆಗೆ ವಹಿಸಿದ ಆಸಕ್ತಿ, ಮಹಾಸಭೆಯ ಆಡಳಿತ ಕಚೇರಿ ಕಟ್ಟಡ ಕಟ್ಟುವ ಸಂದರ್ಭದ ಸಂಪೂರ್ಣ ಅವಧಿಯಲ್ಲಿ ದ್ರವಾಹಾರ ಸೇವಿಸುವ ಶಪಥ ಕೈಗೊಂಡು ಮಹಾಸಭೆಗೆ ಶಾಶ್ವತವಾದ ಕಟ್ಟಡ ಕಟ್ಟುವ ಮೂಲಕ ಅವರು ಮಾಡಿದ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿ ಹಾಗೂ ಆದರ್ಶಪ್ರಾಯವಾಗಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಘಟಕದ ಅಧ್ಯಕ್ಷ ಕೆ.ಎಸ್.ಉಮಾಮಹೇಶ್ ಮಾತನಾಡಿ ಖಂಡ್ರೆಯವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ವೀರಶೈವ-ಲಿಂಗಾಯತ ಸಮಾಜಕ್ಕೆ ತೊಂದರೆಯಾದ ಸಂದರ್ಭದಲ್ಲಿ ಸಿಡಿದೆದ್ದು ಏಕಾಂಗಿಯಾಗಿ ಹೋರಾಟ ಮಾಡಿದವರು. ಹಾವನೂರ ವರದಿ ಲಿಂಗಾಯತ ವಿರೋಧಿಯೆಂದು ವಾದಿಸಿ ವಿಧಾನಸಭೆಯಲ್ಲಿ ವರದಿಯನ್ನು ಹರಿದು ಹಾಕುವುದರ ಮೂಲಕ ಪ್ರತಿಭಟಿಸಿದ ಎದೆಗಾರಿಕೆ ಅವರದ್ಧು ಎಂದು ತಿಳಿಸಿದರು.

ಮಹಾಸಭೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಮತಾ ದಿವಾಕರ್, ನಗರ ಘಟಕದ ಅಧ್ಯಕ್ಷೆ ಪುಷ್ಪಾ, ತಾಲೂಕು ಕಾರ್ಯದರ್ಶಿ ಡಾ. ಎಚ್.ಜಿ.ಸದಾಶಿವಯ್ಯ, ಜಿಲ್ಲಾ ಕಾರ್ಯದರ್ಶಿ ಧರ್ಮಪಾಲ್, ಟಿ.ಎಂ.ವಿಜಯಕುಮಾರ ನುಡಿನಮನ ಸಲ್ಲಿಸಿದರು. ನಗರ ಖಜಾಂಚಿ ಬಿ.ರಾಜಶೇಖರಯ್ಯ, ಯುವ ಘಟಕದ ಮನು, ಪದಾಧಿಕಾರಿಗಳಾದ ನಟರಾಜು, ಶಾಂತ ಉಮೇಶ್, ರಶ್ಮಿ, ಮಮತಾ ಪ್ರಸನ್ನ ಮೊದಲಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜ.೨೭ಕ್ಕೆ ಕೆ.ಆರ್.ಪೇಟೆಗೆ ನಿಖಿಲ್ ಆಗಮನ: ಶಾಸಕ ಎಚ್.ಟಿ.ಮಂಜು
ರಸ್ತೆ ಸುರಕ್ಷತಾ ನಿಯಮ ಉಲ್ಲಂಘನೆ ಶಿಕ್ಷಾರ್ಹ: ನ್ಯಾ.ಕ್ರಾಂತಿ ಕಿರಣ್