ಮಿಲಾಗ್ರಿಸ್‌ ಕಾಲೇಜ್‌: ಕನ್ನಡ ಸಿರಿ ಸಂಭ್ರಮ 2026

KannadaprabhaNewsNetwork |  
Published : Nov 13, 2025, 01:45 AM IST
12ಕನ್ನಡ | Kannada Prabha

ಸಾರಾಂಶ

ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗ, ವಿದ್ಯಾರ್ಥಿ ಕ್ಷೇಮಪಾಲನ ಸಮಿತಿ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಸಿರಿ ಸಂಭ್ರಮ ೨೦೨೫’ ಹಾಗೂ ಯುವ ಚೇತನ ಪರೀಕ್ಷಾ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ನಡೆಸಲಾಯಿತು.

ಕಲ್ಯಾಣಪುರ: ಇಲ್ಲಿನ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗ, ವಿದ್ಯಾರ್ಥಿ ಕ್ಷೇಮಪಾಲನ ಸಮಿತಿ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಸಿರಿ ಸಂಭ್ರಮ ೨೦೨೫’ ಹಾಗೂ ಯುವ ಚೇತನ ಪರೀಕ್ಷಾ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ನಡೆಸಲಾಯಿತು.ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪೂರ್ಣಿಮಾ ಜಿ.ಎ. ಅವರು ರಾಜ್ಯೋತ್ಸವ ಸಂದೇಶದಲ್ಲಿ ಕನ್ನಡ ಭಾಷೆಯಲ್ಲಿ ಅಡಕಗೊಂಡಿರುವ ವೈಶಿಷ್ಟ್ಯವಾದ, ಭಿನ್ನಭಿನ್ನ ಸಂದರ್ಭಗಳಲ್ಲಿ ವಿಭಿನ್ನವಾದ ಅರ್ಥಗಳೊಂದಿಗೆ ಬಳಸಿಕೊಳ್ಳುವ ಸಾಮರ್ಥ್ಯ ಈ ಭಾಷೆಯ ಪದಗಳಿಗಿವೆ. ಭಾಷೆ ಹಾಗೂ ಸಂಸ್ಕೃತಿ ಜೊತೆಯಲ್ಲೇ ಬೆಳೆಯುತ್ತವೆ. ಕನ್ನಡ ಸಂಸ್ಕೃತಿ ಮೈಗೂಡಿಸಿಕೊಂಡು ಭಾಷೆ ಹಾಗೂ ಸಾಹಿತ್ಯವನ್ನು ಬೆಳೆಸುವ ಕೆಲಸಗಳು ಇಂದಿನ ಯುವಶಕ್ತಿಗಳಿಂದ ಆಗಬೇಕಾಗಿದೆ. ಪರಸ್ಪರ ಪ್ರೀತಿಯನ್ನು ಹಂಚಿಕೊಳ್ಳುವ ಮೂಲಕ ಸೌಹಾರ್ದತೆ ಬೆಳೆಯಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವ ಮಾತನಾಡಿ, ಬಹುಮುಖಿಯಾದ ಕನ್ನಡ ಭಾಷೆಯು ಎಲ್ಲರಿಗೂ ಅಪ್ಯಾಯಮಾನವಾದುದು, ಸಾಹಿತ್ಯದ ಓದುವಿಕೆ ಎಲ್ಲರನ್ನೂ ಉನ್ನತಿಯತ್ತ ಕೊಂಡೊಯ್ಯತ್ತದೆ ಎಂದು ತಿಳಿಸಿದರು. ಕಾಲೇಜಿನ ಕಲಾ ತಂಡದ ಸದಸ್ಯರು ಕನ್ನಡ ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಹರಿಣಾಕ್ಷಿ ಎಂ.ಡಿ. ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ರಾಜ್ಯೋತ್ಸವ ಆಚರಣೆಯ ಪ್ರಯುಕ್ತ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆಯನ್ನು ವಾಣಿಜ್ಯ ಉಪನ್ಯಾಸಕಿ ರಾಧಿಕಾ ಪಾಟ್ಕರ್ ನಡೆಸಿಕೊಟ್ಟರು.

ವಿವೇಕಾನಂದ ಕೇಂದ್ರ, ಮೈಸೂರು ಸಂಸ್ಥೆಯವರು ನಡೆಸಿದ ‘ಯುವ ಚೇತನ’ ಪರೀಕ್ಷಾ ಪ್ರಮಾಣಪತ್ರ ವಿತರಣೆಯನ್ನು ಆಂಗ್ಲ ಭಾಷಾ ಉಪನ್ಯಾಸಕಿ ಕು. ಚೈತ್ರಾ ನೆರವೇರಿಸಿದರು.

ಉಪಪ್ರಾಂಶುಪಾಲ ಪ್ರೊ. ಸೋಫಿಯಾ ಡಯಾಸ್, ಐಕ್ಯೂಎಸಿ ಸಂಯೋಜಕ ಪ್ರೊ. ಶಾಲೆಟ್ ಮಥಾಯಸ್, ವಿದ್ಯಾರ್ಥಿ ಪ್ರತಿನಿಧಿಗಳಾದ ನೀಲೋಫರ್ ಹಾಗೂ ಲೈನಲ್ ಉಪಸ್ಥಿತರಿದ್ದರು.

PREV

Recommended Stories

ಬಿಳಿಕೆರೆ ಬಳಿ ಒಂದು ಗಂಡು ಹುಲಿ ಮರಿ ಸೆರೆ
ಪ್ರಕೃತಿ ವಿಕೋಪಗಳ ಎದುರಿಸುವ ಧೈರ್ಯ ಎಲ್ಲರಲ್ಲಿರಲಿ: ಜಿಪಂ ಸಿಇಒ ಗಿತ್ತೆ ಮಾಧವ ರಾವ್‌