ರಾಮನಗರ: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮೂಲ್)ದ 2025-2030ರ ಅವಧಿಯ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಭಾನುವಾರ ಮತದಾನ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ನಡೆಯುತ್ತಿರುವ ಕಾರಣ ಹಾಲಿನ ರಾಜಕಾರಣ ರಂಗೇರಿದೆ.
ಕೈಗೆ ಮಿತ್ರ ಪಕ್ಷಗಳ ಸವಾಲು:
ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದಾದ ನಿರ್ದೇಶಕ ಸ್ಥಾನಗಳಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಆ ಮೂಲಕ ಅಧಿಕ ನಿರ್ದೇಶಕ ಸ್ಥಾನಗಳನ್ನು ಗೆದ್ದು ಬಮೂಲ್ ಅನ್ನು ವಶಕ್ಕೆ ಪಡೆಯುವ ಲೆಕ್ಕಾಚಾರಗಳು ಉಭಯ ಪಕ್ಷಗಳದ್ದಾಗಿದೆ. ಇನ್ನು ಆಡಳಿತರೂಢ ಕಾಂಗ್ರೆಸ್ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ಉಮೇದಿನಲ್ಲಿದೆ.ಬೆಂಗಳೂರು ಹಾಲು ಒಕ್ಕೂಟದ ವ್ಯಾಪ್ತಿಗೆ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳು ಬರುತ್ತವೆ. ಈ ಮೊದಲು 13 ನಿರ್ದೇಶಕರು ಆಯ್ಕೆಯಾಗುತ್ತಿದ್ದರು. ಆದರೆ, ಈ ಬಾರಿ ಕ್ಷೇತ್ರ ಪುನರ್ ವಿಂಗಡಣೆಯ ಪರಿಣಾಮ ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ಕ್ಷೇತ್ರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ರಾಮನಗರ ಜಿಲ್ಲೆಯಲ್ಲಿ 6 ನಿರ್ದೇಶಕರು ಸೇರಿದಂತೆ ಬಮೂಲ್ ಗೆ ಒಟ್ಟು 14 ನಿರ್ದೇಶಕರ ಆಯ್ಕೆಯಾಗಬೇಕಿದೆ.
ಈಗಾಗಲೇ ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದಿಂದ ಮಾಜಿ ಸಂಸದ ಡಿ.ಕೆ.ಸುರೇಶ್, ಕುದೂರು ಕ್ಷೇತ್ರದಿಂದ ರಾಜಣ್ಣ ಹಾಗೂ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಆರ್.ಕೆ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ 4 ಕ್ಷೇತ್ರಗಳಿಗೆ ಚುನಾವಣೆ:
ಬೆಂ.ಗ್ರಾಮಾಂತರದ 4 ಕ್ಷೇತ್ರಗಳಲ್ಲಿ ಹಣಾಹಣಿ :
ದೇವನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಎಸ್ .ಪಿ.ಮುನಿರಾಜು, ಜೆಡಿಎಸ್ - ಬಿಜೆಪಿಯಿಂದ ಬಿ.ಶ್ರೀನಿವಾಸ್ ಸ್ಪರ್ಧಿಸಿದರೆ, ಹೊಸಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಬಿ.ವಿ.ಸತೀಶ್ ಗೌಡ, ಬಿಜೆಪಿ - ಜೆಡಿಎಸ್ ನಿಂದ ಎಂ.ನರೇಂದ್ರ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರ - ಕಾಂಗ್ರೆಸ್ ಬೆಂಬಲಿತ ಕೆ.ಎಸ್.ಕೇಶವಮೂರ್ತಿ, ಬಿಜೆಪಿ - ಜೆಡಿಎಸ್ ಬೆಂಬಲಿತ ಸತೀಶ್ ಕೆ.ಆರ್. ಕಡತನಮಲೆ , ಎಂ.ಸತೀಶ್ ನಡುವೆ ಸ್ಪರ್ಧೆ ನಡೆದರೆ, ಬೆಂಗಳೂರು ಪೂರ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಬಿ.ಡಿ.ನಾಗಪ್ಪ ವಿರುದ್ಧ ಬಿಜೆಪಿ - ಜೆಡಿಎಸ್ ಬೆಂಬಲಿತ ಎಂ.ಮಂಜುನಾಥ ಕಣದಲ್ಲಿದ್ದಾರೆ.
---------------------------------
23ಕೆಆರ್ ಎಂಎನ್ 2.ಜೆಪಿಜಿಬುಮೂಲ್ ಆಡಳಿತ ಮಂಡಳಿ ಕಚೇರಿ
-------------------------------