ಆರೋಗ್ಯ ವೃದ್ಧಿಗೆ ಹಾಲಿನ ಉತ್ಪನ್ನ ಸಹಕಾರಿ: ವೆಂಕಟೇಶ ಗೌಡ

KannadaprabhaNewsNetwork |  
Published : Jun 02, 2024, 01:45 AM IST
ಬಳ್ಳಾರಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆವರಣದ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಾಲುದಿನಾಚರಣೆ ಕಾರ್ಯಕ್ರಮದಲ್ಲಿ ರಾಬಕೋವಿ ಜಿಲ್ಲಾ ಹಾಲು ಒಕ್ಕೂಟದ ಪ್ರಭಾರ ವ್ಯವಸ್ಥಾಪಕ (ಮಾರುಕಟ್ಟೆ) ಎಸ್.ವೆಂಕಟೇಶ ಗೌಡ ಮಾತನಾಡಿದರು.  | Kannada Prabha

ಸಾರಾಂಶ

2001ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (ಎಫ್‌ಎಒ) ಹಾಲಿನ ಮಹತ್ವದ ಬಗ್ಗೆ ಗುರುತಿಸಿ ವಿಶ್ವ ಹಾಲು ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಲಾಯಿತು.

ಬಳ್ಳಾರಿ: ಮಾನವನ ಆರೋಗ್ಯ ವೃದ್ಧಿಗೆ ಹಾಲಿನ ಉತ್ಪನ್ನಗಳಲ್ಲಿ ಲಭ್ಯವಾಗುವ ಕ್ಯಾಲ್ಸಿಯಂ, ಪ್ರೋಟಿನ್, ವಿಟಮಿನ್-ಬಿ2 ಮುಂತಾದ ಪೋಷಕಾಂಶಗಳು ಸಹಕಾರಿಯಾಗಿವೆ ಎಂದು ರಾಬಕೋವಿ ಜಿಲ್ಲಾ ಹಾಲು ಒಕ್ಕೂಟದ ಪ್ರಭಾರ ವ್ಯವಸ್ಥಾಪಕ ಎಸ್.ವೆಂಕಟೇಶ ಗೌಡ ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆವರಣದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಹಾಲು ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

2001ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (ಎಫ್‌ಎಒ) ಹಾಲಿನ ಮಹತ್ವದ ಬಗ್ಗೆ ಗುರುತಿಸಿ ವಿಶ್ವ ಹಾಲು ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಲಾಯಿತು. ಡೈರಿ ಉದ್ಯಮಕ್ಕೆ ಸಂಬಂಧಿಸಿದ ಯಾವುದೇ ರೀತಿಯಲ್ಲಿ ಸಾಧ್ಯವಿರುವ ಉಪಕ್ರಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಬೆಂಬಲಿಸಲು, ಅವಕಾಶ ಒದಗಿಸಲು ಈ ದಿನದ ಗುರಿಯಾಗಿದೆ ಎಂದು ತಿಳಿಸಿದರು.

ಜೀವನದಲ್ಲಿ ಹಾಲಿನ ಅಗತ್ಯತೆಗೆ ಪ್ರಾಮುಖ್ಯತೆ ಹೊಂದಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಒದಗಿಸುವುದಲ್ಲದೇ ಹಾಲಿನಲ್ಲಿರುವ ಕ್ಯಾಲ್ಸಿಯಂ, ಪ್ರೋಟಿನ್, ವಿಟಮಿನ್-ಬಿ2 ಮುಂತಾದ ಪೋಷಕಾಂಶಗಳ ಬಗ್ಗೆ ಜನರಿಗೆ ತಿಳಿಸುವುದಾಗಿದೆ ಎಂದರು.

ರಾಬಕೋವಿಯ ಪ್ರಭಾರ ವ್ಯವಸ್ಥಾಪಕ (ಡೇರಿ) ಟಿ.ಮಲ್ಲಿಕಾರ್ಜುನ ಮಾತನಾಡಿ, ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಮತೋಲನ ಆಹಾರದಲ್ಲಿರುವ ಪೋಷಕಾಂಶಗಳಾಗಿವೆ. ಇವು ಸದೃಢ ಆರೋಗ್ಯ ವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ರಾಬಕೋವಿಯ ವ್ಯವಸ್ಥಾಪಕ (ಶೇಖರಣೆ) ಡಾ.ಮಹೇಶ ಲಕ್ಕಣ್ಣನವರ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ರೈತರಿಂದಲೇ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಗುಣಮಟ್ಟದ ಹಾಲನ್ನು ಶೇಖರಿಸಿ ಬಿ.ಎಂ.ಸಿ ಕೇಂದ್ರಗಳಿಂದ ಒಕ್ಕೂಟಕ್ಕೆ ಸರಬರಾಜು ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ರಾಬಕೋವಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಕಿ ಕೆ.ಆರ್. ಇಂದುಕಲಾ, ಮಾರುಕಟ್ಟೆ ಸಹಾಯಕರಾದ ಲೋಹಿತಕುಮಾರ್, ಸಿ.ಎನ್. ಮಂಜುನಾಥ, ಬಾಬು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀಕ್ಷಕರಾದ ಸುವರ್ಣ ಲತಾ, ನೀರಜಾ, ಪಾರ್ವತಮ್ಮ, ಪೂಜಾ ಸೇರಿದಂತೆ ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಂದಿನಿ ಗುಡ್ ಲೈಫ್ ಟೆಟ್ರಾ ಪ್ಯಾಕ್ ಹಾಲು ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ