ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಸಭೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಗತಿಯ ಜೊತೆಗೆ ಸಾಧನೆಯ ಬಗ್ಗೆಯೂ ಪರಿಶೀಲನೆ ನಡೆಸಲಾಯಿತು. ಗ್ರಾಮೀಣ ಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತಾ ಬಂದಿವೆ. ಇತ್ತೀಚಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಹಾಲು ಒಕ್ಕೂಟಕ್ಕೆ ಪ್ರತಿದಿನ ಬರುವ ಹಾಲಿನ ಪ್ರಮಾಣ ಸಹ ಹೆಚ್ಚುತ್ತಿದೆ. ವಿಶೇಷವಾಗಿ ಗುಣಮಟ್ಟದ ಹಾಲನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳು ಸರಬರಾಜು ಮಾಡುತ್ತಿರುವುದು ಸಂತಸ ತಂದಿದೆ. ನಿಮ್ಮೆಲ್ಲರ ಪ್ರಾಮಾಣಿಕ ಸೇವೆಯಿಂದ ಒಕ್ಕೂಟ ಲಾಭದತ್ತ ಮುನ್ನಡೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಸಂಜೀವಮೂರ್ತಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಎಂ.ಪುಟ್ಟರಾಜು, ನಿರ್ದೇಶಕ ರಮೇಶ್, ಓ.ಮಹೇಶ್, ಮಾರ್ಗವಿಸ್ತಾಣಾಧಿಕಾರಿ ನಯಾಜ್ ಬೇಗ್, ಸುರೇಶ್ ಬಾಬು ಮುಂತಾದವರು ಉಪಸ್ಥಿತರಿದ್ದರು.