ನಲ್ಕುದುರೆ ಶಶಿಕಲಾ ಮೂರ್ತಿಗೆ ಮಿಲೇನಿಯರ್ ರೈತ ಮಹಿಳೆ ಪ್ರಶಸ್ತಿ

KannadaprabhaNewsNetwork |  
Published : Dec 20, 2024, 12:46 AM IST
ಕ್ಯಾಪ್ಷನ18ಕೆಡಿವಿಜಿ33 ಚನ್ನಗಿರಿ ತಾ. ನಲ್ಕುದುರೆ ಗ್ರಾಮದ ಎಂ.ಜಿ. ಶಶಿಕಲಾ ಮೂರ್ತಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಿಲೇನಿಯರ್ ರೈತ ಮಹಿಳೆ ಪ್ರಶಸ್ತಿಯನ್ನು ಸ್ವೀಕರಿಸಿದರು. | Kannada Prabha

ಸಾರಾಂಶ

ನವದೆಹಲಿಯ ಕೃಷಿ ಜಾಗರಣಾ ಸಂಸ್ಥೆ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಆಶ್ರಯದಲ್ಲಿ ವರ್ಷದ ಮಿಲೇನಿಯರ್ ರೈತ ಮಹಿಳೆ ಪ್ರಶಸ್ತಿಯನ್ನು ಚನ್ನಗಿರಿ ತಾಲೂಕಿನ ನಲ್ಕುದುರೆ ಗ್ರಾಮದ ಎಂ.ಜಿ. ಶಶಿಕಲಾ ಮೂರ್ತಿ ಅವರಿಗೆ ಲಭಿಸಿದೆ.

- ಅಡಕೆ, ತೆಂಗು, ಬಾಳೆ, ಭತ್ತ, ಕೈತೋಟ, ನರ್ಸರಿಯಲ್ಲಿ ನೈಪುಣ್ಯತೆಕನ್ನಡಪ್ರಭ ವಾರ್ತೆ ದಾವಣಗೆರೆ ನವದೆಹಲಿಯ ಕೃಷಿ ಜಾಗರಣಾ ಸಂಸ್ಥೆ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಆಶ್ರಯದಲ್ಲಿ ವರ್ಷದ ಮಿಲೇನಿಯರ್ ರೈತ ಮಹಿಳೆ ಪ್ರಶಸ್ತಿಯನ್ನು ಚನ್ನಗಿರಿ ತಾಲೂಕಿನ ನಲ್ಕುದುರೆ ಗ್ರಾಮದ ಎಂ.ಜಿ. ಶಶಿಕಲಾ ಮೂರ್ತಿ ಅವರಿಗೆ ಲಭಿಸಿದೆ.

ನವದೆಹಲಿಯ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಪ್ರದಾನ ಸಭೆ ನಂತರ ಭಾರತದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಅವರಿಂದ ಪ್ರಶಂಸೆಯ ಪತ್ರ ಸಹ ಸ್ವೀಕರಿಸಿದ್ದಾರೆ.

ಶಶಿಕಲಾ ಮೂರ್ತಿ ರೈತ ಕುಟುಂಬದಿಂದ ಬಂದ ಮಹಿಳೆ. ಚಿಕ್ಕ ವಯಸ್ಸಿನಲ್ಲೇ ಕೃಷಿ ಜವಾಬ್ದಾರಿಯನ್ನು ವಹಿಸಿಕೊಂಡವರು. ಸಾಧನೆಯಲ್ಲಿ ಸಾಕಷ್ಟು ಕಲ್ಲುಮುಳ್ಳಿನ ಹಾದಿ ಸಾಗಿಸಿದ್ದಾರೆ. ಕುಟುಂಬದ ಜವಾಬ್ದಾರಿ ಜೊತೆಗೆ ಸಂಘಟನಾ ಚತುರತೆಯುಳ್ಳ ಇವರು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಅಡಕೆ, ತೆಂಗು, ಬಾಳೆ, ಭತ್ತ, ಕೈತೋಟ, ನರ್ಸರಿ ಹೀಗೆ ಹಲವಾರು ಕೃಷಿ ಬೆಳೆಗಳಲ್ಲಿ ನೈಪುಣ್ಯತೆಯನ್ನು ಹೊಂದಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ವಲಯದ ಕಾರ್ಯದರ್ಶಿಯಾಗಿ, ಶ್ರೀ ವೀರೇಶ್ವರ ಪುಣ್ಯಾಶ್ರಮದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಉಪಾಧ್ಯಕ್ಷರಾಗಿ, ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ವೈಜ್ಞಾನಿಕ ಸಲಹಾ ಮಂಡಳಿ ಸದಸ್ಯರಾಗಿ, ತೋಟಗಾರಿಕೆ ಇಲಾಖೆಯ ಪರಂಪರಾಗತ್ ಕೃಷಿ ವಿಕಾಸ ಯೋಜನೆಯ ಜಿಲ್ಲಾ ನಿರ್ದೇಶಕರಾಗಿ, ಹಿರೇಕೋಗಲೂರು ತರಳಬಾಳು ಅಮೃತ ರೈತ ಉತ್ಪಾದಕ ಕಂಪನಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಸಾಧನೆಗೆ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಡಾ. ಕೆ.ಪಿ. ಬಸವರಾಜ್, ಡಾ. ಟಿ.ಎನ್. ದೇವರಾಜ, ವಿಜ್ಞಾನಿಗಳ ತಂಡ ಮತ್ತು ಜಿಲ್ಲೆಯ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಮಾರ್ಗದರ್ಶನವೇ ಕಾರಣ ಎಂದು ಶಶಿಕಲಾ ಮೂರ್ತಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ