ಹುಲಿಗೆಮ್ಮ ದೇವಸ್ಥಾನದ ಅವ್ಯವಸ್ಥೆಗೆ ಸಚಿವ ಬಸವಂತಪ್ಪ ಆಕ್ರೋಶ

KannadaprabhaNewsNetwork |  
Published : Sep 02, 2026, 03:30 AM IST
ಪೋಟೊಗಳುಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಭೇಟಿ ನೀಡಿದರು. | Kannada Prabha

ಸಾರಾಂಶ

ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ಅಶುಚಿತ್ವ ಹಾಗೂ ಅವ್ಯವಸ್ಥೆ ಕಂಡು ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೊಪ್ಪಳ: ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ಅಶುಚಿತ್ವ ಹಾಗೂ ಅವ್ಯವಸ್ಥೆ ಕಂಡು ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಸಂಸದ ಕೆ. ರಾಜಶೇಖರ ಹಿಟ್ನಾಳ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು, ದೇವಿಯ ದರ್ಶನದ ಬಳಿಕ ಆವರಣದ ವಿವಿಧೆಡೆ ಪರಿಶೀಲನೆ ನಡೆಸಿದರು. ಚರಂಡಿಗಳಲ್ಲಿ ಕಸ ಹಾಗೂ ಪಾಚಿ, ಭಕ್ತರ ಕೊಠಡಿಗಳ ಸುತ್ತಲಿನ ಅಶುಚಿತ್ವ ಕಂಡು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಭಕ್ತರು ಕಾಣಿಕೆಯಾಗಿ ನೀಡಿದ ಸೀರೆ, ಕೊಬ್ಬರಿ, ಉತ್ತತ್ತಿ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ರಾಶಿ ಹಾಕಿ ಕೊಳೆಯಲು ಬಿಟ್ಟಿರುವುದಕ್ಕೂ ಸಚಿವರು ಆಕ್ಷೇಪ ವ್ಯಕ್ತಪಡಿಸಿದರು. ನಿಯಮಾನುಸಾರ ಟೆಂಡರ್‌ ನಡೆಸಿ ಅವುಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದರು.

ಶೌಚಾಲಯ ಹಾಗೂ ಪಾದರಕ್ಷೆ ಕೌಂಟರ್‌ನಲ್ಲಿ ಭಕ್ತರಿಂದ ಹೆಚ್ಚುವರಿ ಹಣ ಪಡೆಯದಂತೆ ಸೂಚಿಸಿದ ಸಚಿವರು, ದೇವಸ್ಥಾನವನ್ನು ಸ್ವಚ್ಛವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಸೇರಿದಂತೆ ಅಧಿಕಾರಿಗಳು ಹಾಗೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿ ಪಾದಯಾತ್ರೆ ಅಲ್ಲ, ಪಶ್ಚಾತ್ತಾಪದ ಯಾತ್ರೆ: ಶಿವರಾಜ ತಂಗಡಗಿ
3ರಿಂದ ಎಡಿಬಿ, ಜೈನ್‌ ಕಾಲೇಜುಗಳ ಸುರಸಂಭ್ರಮ