ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎರಡು ದಿನಗಳ ಕಾಲ ನಡೆದ ಮೂರನೇ ''''''''ಪರಿದೃಶ್ಯ'''''''' ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಾರತವನ್ನು ಜಾಗತಿಕ ಮಟ್ಟದ ಸೃಜನಾತ್ಮಕ ಆರ್ಥಿಕತೆಯಾಗಿ ಮಾಡಲು ಆಡಿಯೋ ವಿಶ್ಯುವಲ್ ಎಂಟರ್ ಟೈನ್ಮೆಂಟ್ ಸಮ್ಮಿಟ್ ಅನ್ನು 2019 ರಲ್ಲಿ ಘೋಷಿಸಿದ್ದು, ಈ ವರ್ಷ ಅದು ನಡೆಯಲಿದೆ. ಎಲ್ಲಾ ರೀತಿಯ ಮಾಧ್ಯಮಗಳಿಗೂ ಇದು ಪೂರಕವಾದದ್ದು. ಪಾರಂಪರಿಕ ಮಾಧ್ಯಮ, ಟಿವಿ ಮಾಧ್ಯಮ, ಗೇಮಿಂಗ್, ಸಾಮಾಜಿಕ ಜಾಲತಾಣ ಕ್ಷೇತ್ರಕ್ಕೆ ಪ್ರೋತ್ಸಾಹದಾಯಕವಾಗಿದೆ. ಯಂಗ್ ಫಿಲ್ಮ್ ಮೇಕರ್ಸ್ ಚಾಲೆಂಜ್ ಎಂಬುದು ಕೂಡ ಇದರ ಒಂದು ಭಾಗ. ಇದರ ಅಡಿಯಲ್ಲಿ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಗೋವಾದಲ್ಲಿ 100 ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.ಪ್ರಸ್ತುತ ಹಾಲಿವುಡ್ ಸಿನೆಮಾಗಳ ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಮಾಡಲು ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ನುಡಿದರು.
ದೇಶದ ಮನರಂಜನಾ ಕ್ಷೇತ್ರವೂ ಪ್ರತಿ ವರ್ಷ ಶೇ 9.7ರಷ್ಟು ಅಭಿವೃದ್ಧಿ ಹೊಂದುತ್ತಿದ್ದು, 2027ರೊಳಗೆ 469 ದಶಲಕ್ಷ ಕೋಟಿಯ ಉದ್ಯಮವಾಗಿ ಬೆಳೆಯಲಿದೆ ಎಂದರು.
ಮುಂಬೈನಲ್ಲಿ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ (ಎವಿಜಿಸಿ) ವಿಭಾಗದಲ್ಲಿ ರಾಷ್ಟ್ರೀಯ ಸ್ಕೂಲ್ ಆಫ್ ಎಕ್ಸಲೆನ್ಸಿ ಕೇಂದ್ರ ಆರಂಭಿಸಲು ಸರ್ಕಾರ ಮುಂದಾಗಿದ್ದು, ಐಐಟಿ, ಏಮ್ಸ್ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುನೀಲ್ ಪುರಾಣಿಕ್ ಪರಿದೃಶ್ಯದಲ್ಲಿ ಉತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ಚಿತ್ರ. ಇಂದು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿದೆ. ಸಾಕ್ಷ್ಯಚಿತ್ರ, ಕಿರುಚಿತ್ರದ ಮೂಲಕ, ಸಿನೆಮಾ ಕ್ಷೇತ್ರಕ್ಕೆ ಬರಬೇಕೆನ್ನುವ ಪ್ರತಿಭೆಗಳಿಗೆ ಪರಿದೃಶ್ಯ ಉತ್ತಮ ವೇದಿಕೆ. ಬೆಂಗಳೂರಲ್ಲಿ ಪ್ರಾರಂಭವಾದ ಪರಿದೃಶ್ಯ ಮುಂದಿನ ದಿನಗಳಲ್ಲಿ ಸಿನೆಮಾ ಕ್ಷೇತ್ರದ ಹಬ್ ಆಗಲಿರುವ ಮೈಸೂರಿಗೆ ಅದು ರವಾನೆಯಾಗಿದ್ದು ಅಭಿನಂದನಾರ್ಹ ಎಂದರು.
ಪರಿದೃಶ್ಯ ಚಿತ್ರೋತ್ಸವಕ್ಕೆ ಪ್ರಪಂಚದಾದ್ಯಂತ 109 ದೇಶಗಳಿಂದ 3123 ಕಿರು ಮತ್ತು ಸಾಕ್ಷ್ಯಚಿತ್ರಗಳು ಬಂದಿವೆ. ಈ ಚಿತ್ರಗಳಲ್ಲಿ ಆಯ್ಕೆಯಾದ ಸಿನಿಮಾಗಳಿಗೆ 26 ವರ್ಗಗಳ ಪ್ರಶಸ್ತಿಗಳನ್ನು ನೀಡಲಾಯಿತು. ಭಾರತದಿಂದ 985, ಇರಾನ್ ಇಂದ 413, ಸ್ಪೇನ್ ನಿಂದ 138, ಫ್ರಾನ್ಸ್ 137, ಬ್ರೆಜಿಲ್ 108, ಚೀನಾ 99, ಇಂಡೋನೇಷಿಯಾ 91, ಟರ್ಕಿ 88, ಯುಎಸ್ಎ 82, ಇಟಲಿ 81 ಮುಂತಾದ ದೇಶಗಳಿಂದ 3123 ಸಿನಿಮಾಗಳು ಬಂದಿದ್ದವು. ಇದರಲ್ಲಿ ಕನ್ನಡದ ಒಟ್ಟು 73 ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳು ಸೇರಿವೆ.