ಚನ್ನಪಟ್ಟಣ: ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಚ್ಎಂಟಿ ಜಾಗದಲ್ಲಿ ಅತಿಕ್ರಮ ಪ್ರವೇಶ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಚಿಕ್ಕಮಗಳೂರು, ಕೊಡಗು, ಬೆಂಗಳೂರು ಸೇರಿದಂತೆ ಅನೇಕ ಕಡೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆ. ಅದನ್ನೆಲ್ಲ ತೆರವು ಮಾಡದ ಅರಣ್ಯ ಸಚಿವರು ಎಚ್ ಎಂಟಿ ಮೇಲೆ ಮಾತ್ರ ವಿಶೇಷ ಕಾಳಜಿ ತೋರಿಸುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.ಮುಡಾ ದಾಖಲೆಗಳೇ ಮಂಗಮಾಯ:ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಳೆದ ನಾಲ್ಕೈದು ವಾರಗಳಿಂದ ಹಲವಾರು ವ್ಯಕ್ತಿಗಳ ಮೇಲೆ ದಾಳಿ ನಡೆದಿದೆ. ಸಾಕಷ್ಟು ವಿಚಾರಗಳು ಹೊರಗಡೆ ಬರುತ್ತಿವೆ. ದಾಖಲೆಗಳು ಕಳ್ಳತನ ಆಗಿವೆ, ಮಂಗಮಾಯ ಆಗಿವೆ ಎಂದು ಹೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಸತ್ಯ ಮೇವ ಜಯತೆ ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಜಾಹೀರಾತಿನಲ್ಲಿ ನೋಡಿದರೂ ಸತ್ಯಮೇವ ಜಯತೇ, ಭಾಷಣದಲ್ಲಿ ನೋಡಿದರೂ ಸತ್ಯಮೇವ ಜಯತೇ!! ಈಗ ಎಲ್ಲಾ ಸತ್ಯ ಮೇವ ಜಯತೆ ಹೊರಗಡೆ ಬರುತ್ತಿದೆ ಎಂದು ವ್ಯಾಂಗ್ಯವಾಡಿದರು.
ಬಾಕ್ಸ್...........ಮಾಜಿ ಸ್ಪೀಕರ್ ಒತ್ತುವರಿ ಜಾಗ ತೆರವು ಮಾಡಿಸಿಲ್ಲ ಏಕೆ ? ಕೋಲಾರದ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ಒತ್ತುವರಿ ಮಾಡಿರುವ ಅರಣ್ಯ ಭೂಮಿಯನ್ನು ತೆರವು ಮಾಡಿಸುವ ಧೈರ್ಯ ಅರಣ್ಯ ಸಚಿವರು ತೋರಿಸಲಿ. ಒತ್ತುವರಿ ತೆರವು ಮಾಡಿಸುವಂತೆ ನ್ಯಾಯಾಲಯ ಆದೇಶಿಸಿದ್ದು, ಅರಣ್ಯ ಇಲಾಖೆ, ಕೋಲಾರ ಜಿಲ್ಲಾಧಿಕಾರಿಗೆ ನೋಟಿಸ್ ಕೂಡ ಕೊಟ್ಟಿದೆ. ಆದರೂ ಮಾಜಿ ಸ್ಪೀಕರ್ ಒತ್ತುವರಿ ಜಾಗ ಏಕೆ ತೆರವು ಮಾಡುತ್ತಿಲ್ಲ ಹೇಳಿ ಈಶ್ವರ ಖಂಡ್ರೆ ಅವರೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಶ್ರೀನಿವಾಸಪುರದಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. 61 ಎಕರೆ ಸರ್ವೆ ಮಾಡಿ ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಿ ಎಂದು ನ್ಯಾಯಾಲಯದ ಆದೇಶಿಸಿದೆ. ಆ ಒತ್ತುವರಿ ಭೂಮಿ ವಿಷಯದಲ್ಲಿ ಅರಣ್ಯ ಸಚಿವರು ಅಧಿಕಾರಿಗಳಿಗೆ ಏನು ಸೂಚನೆ ಕೊಟ್ಟಿದ್ದಾರೆ ಅಂತ ಗೊತ್ತು. ಆ ವಿಚಾರದಲ್ಲಿ ಈಶ್ವರ್ ಖಂಡ್ರೆ ಏನ್ ಮಾಡ್ತಿದ್ದೀಯಪ್ಪ? ಬಡವರಿಗೆ ಒಂದು ನ್ಯಾಯ, ಕಾಂಗ್ರೆಸ್ನವರಿಗೆ ಒಂದು ನ್ಯಾಯವಾ? ಎಂದು ಖಾರವಾಗಿ ಪ್ರಶ್ನಿಸಿದರು.ನೀವು ಯಾರಿಗೆ ರಕ್ಷಣೆ ಕೊಡುತ್ತಿದ್ದೀರಿ ಹೇಳಿ ಸಚಿವರೇ. ಅರಣ್ಯ ಭೂಮಿಗೆ ರಕ್ಷಣೆ ಕೊಡುತ್ತಿದ್ದೀರೋ ಅಥವಾ ಒತ್ತುವರಿ ಮಾಡಿಕೊಂಡವರಿಗೆ ರಕ್ಷಣೆ ಕೊಡುತ್ತಿದ್ದೀರೋ? ಎಲ್ಲದರ ಬಗ್ಗೆ ಮುಂದೆ ಸಮಗ್ರವಾಗಿ ಮಾಹಿತಿ ಕೊಡುತ್ತೇನೆ. ಎಚ್ಎಂಟಿ ಆವರಣಕ್ಕೆ ಈಶ್ವರ್ ಖಂಡ್ರೆ ಅತಿಕ್ರಮ ಪ್ರವೇಶ ಮಾಡಿದ್ದಾರೆ. ನ್ಯಾಯಾಲಯದಲ್ಲಿ ತಕರಾರು ಅರ್ಜಿ ಇದೆ. ಅದರ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಕಾನೂನು ಮೂಲಕ ಹೋರಾಡುತ್ತೇವೆ. ಪ್ರಚಾರಕ್ಕಾಗಿ ಈ ವಿಚಾರ ತೆಗೆದುಕೊಳ್ಳಲ್ಲ ಎಂದು ಕುಮಾರಸ್ವಾಮಿ ಹೇಳಿದರು.
30ಕೆಆರ್ ಎಂಎನ್ 3.ಜೆಪಿಜಿಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಚುನಾವಣಾ ಪ್ರಚಾರ ನಡೆಸಿದರು.