ನಾಳೆಯಿಂದ ದ.ಕ. ಉಸ್ತುವಾರಿ ಸಚಿವರ ಪ್ರವಾಸ

KannadaprabhaNewsNetwork |  
Published : Oct 09, 2025, 02:01 AM IST
32 | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 10, 11ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 10, 11ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅ.10ರಂದು ಬೆಳಗ್ಗೆ 10:05- ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, 10:30- ಫಳ್ನೀರ್ ಶ್ರವಣ ಹಿಯರಿಂಗ್ ಏಡ್‌ ಸೆಂಟರ್ ಉದ್ಘಾಟನೆ, 10:45- ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಗತಿ ಪರಿಶೀಲನಾ ಸಭೆ, 11:45- ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ, ಮದ್ಯಾಹ್ನ 2- ಕೆನರಾ ವಾಣಿಜ್ಯ ಚೇಂಬರ್‌ನಲ್ಲಿ ಸಂವಾದ, 3- ಅಡ್ಯಾರ್ ಗಾರ್ಡನ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ, 6- ಮಂಗಳೂರು ಸೂರ್ಯವುಡ್ ಸಭಾಂಗಣದಲ್ಲಿ ಪ್ರೊಫೆಷನಲ್ ಸ್ಟೂಡೆಂಟ್ ಗ್ಲೋಬಲ್ ಕಾನ್ಫರೆನ್ಸ್ ಕಾರ್ಯಕ್ರಮ.

ಅಕ್ಟೋಬರ್ 11ರಂದು ಬೆಳಗ್ಗೆ 9- ಬೋಳೂರು ಅಮೃತಾನಂದಮಯಿ ಮಠದಲ್ಲಿ ಅಮೃತೋತ್ಸವ ಕಾರ್ಯಕ್ರಮ, 10:30- ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ, 11- ಬೆಳ್ತಂಗಡಿ ಮಾಲಾಡಿ ಗ್ರಾಮದ ಸಬರಬೈಲು ಎಂಬಲ್ಲಿ ನೂತನ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ, 11:30- ಬೆಳ್ತಂಗಡಿ ಲಾಯಿಲ ಕಾಶಿಬೆಟ್ಟು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ, 12- ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ, ಬೆಳ್ತಂಗಡಿ ಟೌನ್ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡ ಶಿಲಾನ್ಯಾಸ, 94 ಸಿ ಹಕ್ಕುಪತ್ರ ವಿತರಣೆ, ಮಧ್ಯಾಹ್ನ 1- ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ, ಸಂಜೆ 4 ಗಂಟೆಗೆ ಸಚಿವರು ಬೆಳ್ತಂಗಡಿಯಿಂದ ನಿರ್ಗಮಿಸಿ, ಮಂಗಳೂರು ವಿಮಾನ ನಿಲ್ದಾಣದಿಂದ 6:15ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುಪ್ರಿಮ್‌ ಶಾಲೆಯಲ್ಲಿ ಮಕ್ಕಳು ವಿವಿಧ ಸಾಂಸ್ಕೃತಿಕ ಸಂಭ್ರಮೋತ್ಸವ
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಸಂತಾಪ